• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಿಶೋರ್ ಅಮನ್ “ಶೆಟ್ಟಿ” ಹೆಮ್ಮೆಯಿಂದ ಸರ್ ನೇಮ್ ಹಾಕಿಕೊಂಡಿದ್ದ!!

Tulunadu News Posted On September 21, 2020
0


0
Shares
  • Share On Facebook
  • Tweet It

ಭಾರತ ಯುವ ರಾಷ್ಟ್ರ. ಇಲ್ಲಿ ಕನಸನ್ನು ಕಂಗಳಲ್ಲಿ ತುಂಬಿ ಮನೋರಂಜನಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಬೇಕು ಎಂದು ಲಕ್ಷಾಂತರ ಯುವಕರು ನಿತ್ಯ ಪ್ರಯತ್ನಿಸುತ್ತಾರೆ. ಆದರೆ ಅವರಲ್ಲಿ ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಕೆಲವರನ್ನು ಮಾತ್ರ ಕಲಾದೇವತೆ ತನ್ನ ಬಳಿ ಕರೆಸಿಕೊಳ್ಳುತ್ತಾಳೆ ಮತ್ತು ಎತ್ತಿ ಹಿಡಿಯುತ್ತಾಳೆ. ಹಾಗೆ ತನ್ನ ಅತ್ಯುತ್ತಮ ನೃತ್ಯದಿಂದ ತುಂಬಾ ಹೆಸರನ್ನು ಸಂಪಾದಿಸಿದ ಯುವಕನ ಹೆಸರು ಕಿಶೋರ್ ಅಮನ್. ಮುಂಬೈಯಲ್ಲಿ ಬೆಳೆಯಬೇಕಾದರೆ ಶೆಟ್ಟಿ ಎಂದು ಸರ್ ನೇಮ್ ಇದ್ದರೆ ಒಳ್ಳೆಯದು ಎಂದು ಅನಿಸಿ ತಾನು ಬಂಟ್ ಸಮುದಾಯದಲ್ಲಿ ಹುಟ್ಟಿರದಿದ್ದರೂ ಶೆಟ್ಟಿ ಎಂದು ಸರ್ ನೇಮ್ ಇಟ್ಟುಕೊಂಡಿದ್ದ. ಯಾವಾಗ ಈತ ದೊಡ್ಡ ದೊಡ್ಡ ಸ್ಟೇಜ್ ಗಳಲ್ಲಿ ಮಿಂಚುತ್ತಿದ್ದನೋ, ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರನಾಗಿ ಕುಳಿತುಕೊಂಡಿದ್ದನೋ ಆಗ ಯಾರೂ ಅವನ ಸರ್ ನೇಮ್ ಬಗ್ಗೆ ಆಕ್ಷೇಪ ಎತ್ತಿರಲಿಲ್ಲ. ಕಿಶೋರ್ ಶೆಟ್ಟಿ ನಮ್ಮವ ಎಂದು ಅಭಿಮಾನ ಇತ್ತು. ಆದರೆ ಯಾವಾಗ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದನೋ ನಂತರ ಆತ ಶೆಟ್ಟಿ ಸರ್ ನೇಮ್ ಬಳಸುವುದರ ಬಗ್ಗೆ ಆಕ್ಷೇಪಗಳು ಕೇಳಿಬರುತ್ತಿವೆ. ಇಲ್ಲಿ ಕಿಶೋರ್ ಯಾವ ಜಾತಿಯವನು ಎನ್ನುವುದು ನಮಗೆ ಮುಖ್ಯವಲ್ಲ. ಆದರೆ ಅವನನ್ನು ನೋಡಿ ಎಷ್ಟೋ ಡ್ಯಾನ್ಸರುಗಳು ಕರಾವಳಿಯಲ್ಲಿ ಸ್ಫೂರ್ತಿ ಪಡೆದಿದ್ದಾರೆ. ಕಿಶೋರ್ ನಂತೆಯೇ ಆಗಬೇಕು ಎಂದು ಆಸೆಪಟ್ಟಿದ್ದಾರೆ. ಅವನ ಬಳಿ ಸಲಹೆ, ಮಾರ್ಗದರ್ಶನ, ತರಬೇತಿಯನ್ನು ಕೂಡ ಪಡೆದಿದ್ದಾರೆ. ಕಿಶೋರ್ ಡ್ಯಾನ್ಸ್ ಕಂಡು ಎಷ್ಟೋ ಜನ ಚಪ್ಪಾಳೆ ತಟ್ಟಿದ್ದಾರೆ. ಹುಲಿವೇಷಕ್ಕೆ ಕರೆಸಿ ಸತ್ಕರಿಸಿದ್ದಾರೆ. ಈಗ ಅಂತಹ ಎಲ್ಲರ ಅಭಿಮಾನಕ್ಕೆ ಕಿಶೋರ್ ನೀರೆರೆಚಿದಂತೆ ಆಗಿದೆ. ನಮಗೆ ಪ್ರತಿಭೆ ದೇವರು ಕೊಟ್ಟಿರುತ್ತಾರೆ. ಅದನ್ನು ಪೋಷಿಸಿ ನಾವು ದೊಡ್ಡದು ಮಾಡಿರುತ್ತೇವೆ. ಅದರಿಂದಲೇ ನಮಗೆ ಸಾಕಷ್ಟು ಅಭಿಮಾನಿಗಳು ಹುಟ್ಟಿಕೊಳ್ಳುತ್ತಾರೆ. ಕಿಶೋರ್ ಗೆ ಕೂಡ ಉತ್ತಮ ಭವಿಷ್ಯ ಇತ್ತು. ಇನ್ನೂ ಇರಬಹುದು. ಆದರೆ ಹೀಗೆ ಡ್ರಗ್ಸ್ ಸಾಗಾಟದ ಮೂಲಕ ಆತ ತನ್ನ ಇಮೇಜಿಗೆ ತಾನೇ ಕಲ್ಲು ಎತ್ತಿಹಾಕಿದ್ದಾನೆ.

ಬೆಂಗಳೂರಿನಲ್ಲಿ ಸರಣಿ ಧಾರಾವಾಹಿಯಂತೆ ಒಬ್ಬೊಬ್ಬರೇ ಅಂದರ್ ಆಗುತ್ತಿದ್ದಾರೆ. ಕೆಲವರನ್ನು ಸಿಸಿಬಿ ವಿಚಾರಣೆಗೆ ಕರೆಸಿಕೊಳ್ಳುತ್ತಾ ಇದೆ. ಇದೆಲ್ಲದ್ದಕ್ಕೆ ಕಾರಣ ಏನು?ಕಲಾವಿದರಿಗೆ ಹೆಸರು ಬರುತ್ತಿದ್ದಂತೆ ದಂಡಿಯಾಗಿ ಬಂದು ಬೀಳುವ ಹಣ. ಸ್ಟಾರ್ ಗಳಿಗೆ ಹಣದ ಹೊಳೆ ಹರಿದು ಬರುತ್ತಿದ್ದಂತೆ ಅವರಿಗೆ ಅದನ್ನು ಹೇಗೆ ಖರ್ಚು ಮಾಡಬೇಕು ಎಂದು ಗೊತ್ತಾಗುವುದಿಲ್ಲ. ಫಾರಂ ಹೌಸ್ ಅದು ಇದು ಎಂದು ಮಾಡುತ್ತಾರೆ. ಇವರಿಗೆ ನೋಡಿಕೊಳ್ಳಲು ಪುರುಸೊತ್ತು ಇರುವುದಿಲ್ಲ. ನೋಡಲಿಕ್ಕೆ ಬೇರೆಯವರಿಗೆ ಗುತ್ತಿಗೆ ಕೊಡುತ್ತಾರೆ. ಅವರು ಸ್ಟಾರ್ ಫಾರಂ ಹೌಸ್, ಪೊಲೀಸರು ಏನೂ ಮಾಡುವುದಿಲ್ಲ ಎಂದು ಧೈರ್ಯದಿಂದ ಮನಸ್ಸಿಗೆ ಬಂದದ್ದು ಮಾಡುತ್ತಾರೆ. ಹಾಗೆ ಕೆಲವರು ನಾವು ಸಿಕ್ಕಿಬೀಳುವುದಿಲ್ಲ, ದೊಡ್ಡವರ ಸಂಪರ್ಕ ಇದೆ, ಹೆಸರಿದೆ ಎಂದು ಧೈರ್ಯದಿಂದ ಡ್ರಗ್ಸ್ ಸಾಗಾಟ ಮಾಡಿರಬಹುದು. ಮಂಗಳೂರಿನಲ್ಲಿ ಗಾಂಜಾ, ಅಫೀಮು ಹರಿದಾಡುತ್ತಿರುತ್ತದೆ ಎಂದು ಪೊಲೀಸರು ಅಪರೂಪಕ್ಕೊಮ್ಮೆ ಯಾರನ್ನಾದರೂ ಹಿಡಿಯುವಾಗ ಗೊತ್ತಾಗುತ್ತಿತ್ತು. ಆದರೆ ಅಂತರಾಷ್ಟ್ರೀಯ ಲೆವೆಲ್ಲಿನ ಡ್ರಗ್ಸ್ ಮಂಗಳೂರಿನಲ್ಲಿ ಸುತ್ತಾಡುತ್ತಿದೆ ಎಂದು ಗೊತ್ತಾದದ್ದೇ ಈಗ. ಬಹುಶ: ಕೇಂದ್ರ ತನಿಖಾ ತಂಡ ಬೆಂಗಳೂರಿನಲ್ಲಿ ತನಕ ಡ್ರಗ್ಸ್ ಹುಡುಕಿಕೊಂಡು ಬರದೇ ಇದ್ದರೆ ಇನ್ನಷ್ಟು ವರ್ಷ ಹೀಗೆ ಡ್ರಗ್ಸ್ ಆರಾಮವಾಗಿ ರಾಜ್ಯದ ಉದ್ದಗಲಕ್ಕೂ ಓಡಾಡುತ್ತಿತ್ತು. ಇನ್ನು ಡ್ರಗ್ಸ್ ಜಾಲದಲ್ಲಿ ಬಂಧಿತರಾಗಿರುವವರನ್ನು ಮತ್ತು ವಿಚಾರಣೆಗೆ ಒಳಗಾಗಿರುವವ ಮೇಲೆ ಮೃಧು ಧೋರಣೆ ತಳೆಯುವಂತೆ ಪೊಲೀಸರ ಮೇಲೆ ಒತ್ತಡ ಬೀಳುತ್ತಿದೆ ಎನ್ನುವ ಮಾಹಿತಿ ಬರುತ್ತಿದೆ. ಮೊದಲನೇಯದಾಗಿ ಬಂಧನಕ್ಕೆ ಒಳಗಾಗುವವರ ಪರ ಯಾವ ರಾಜಕಾರಣಿ ಅಥವಾ ಸ್ವಾಮೀಜಿಗಳು ಕೂಡ ಪೊಲೀಸರ ಮೇಲೆ ಒತ್ತಡ ಹೇರಬಾರದು. ಯಾಕೆಂದರೆ ಅದು ಅಕ್ಷಮ್ಯ ಅಪರಾಧ. ಒಂದು ವೇಳೆ ತಲೆಸರಿಯಲ್ಲದವರು ಯಾರಾದರೂ ಒತ್ತಡ ಹಾಕಿದ್ರೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಒತ್ತಡಕ್ಕೆ ಒಳಗಾಗಬಾರದು. ಒಂದು ವೇಳೆ ಯಾವುದಾದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಕೇಸ್ ವೀಕ್ ಮಾಡಿದರೆ ಅದು ಅವರು ತಮ್ಮ ಆತ್ಮಸಾಕ್ಷಿಗೆ ಮಾಡುವ ದ್ರೋಹ. ಇದು ಶಾಪವಾಗಿ ಅವರ ಮಕ್ಕಳಿಗೆ ತಟ್ಟಬಹುದು. ಆದ್ದರಿಂದ ಏನೇ ಆಗಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ನಮ್ಮ ಯುವ ಭಾರತ ಸ್ಟ್ರಾಂಗ್ ಆಗಿ ಇರಬೇಕು ಎಂದರೆ ಡ್ರಗ್ಸ್ ಇಲ್ಲಿಂದ ಓಡಲೇಬೇಕು. ನನ್ನ ಒಬ್ಬನಿಂದ ಏನಾಗುತ್ತೆ ಎನ್ನುವ ಸಿನಿಕತನ ಬೇಡಾ. ಪ್ರತಿಯೊಬ್ಬರು ಪ್ರಯತ್ನ ಮಾಡಿದರೆ ಡ್ರಗ್ಸ್ ನಮ್ಮ ಮನೆಬಾಗಿಲಿಗೆ ಬಂದು ನಮ್ಮ ಮಕ್ಕಳ ಭವಿಷ್ಯ ಹಾಳಾಗುವುದು ತಪ್ಪುತ್ತದೆ. ಇವತ್ತು ಬೇರೆಯವರ ಮಕ್ಕಳು ಹಾಳಾಗುತ್ತಿರಬಹುದು. ಭಾರತದ ಜವಾಬ್ದಾರಿ ಪ್ರಜೆ ಎಚ್ಚೆತ್ತುಕೊಳ್ಳದಿದ್ದರೆ ಅದು ನಮ್ಮೆಲ್ಲರ ಮಕ್ಕಳನ್ನು ಅದರ ಕಬಂಧ ಬಾಹುಗಳಿಗೆ ಎಳೆದುಕೊಳ್ಳಬಹುದು!

 

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search