• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಿಮ್ಮ ಮೀನು…ಬೀದಿ ನಾಯಿ…ರಂಗೋಲಿ… ವಾಸನೆ !

Hanumantha Kamath Posted On November 2, 2020
0


0
Shares
  • Share On Facebook
  • Tweet It

ನೀವು ಮನೆಗೆ ಮೀನು, ಮಾಂಸ ತಂದಿರುತ್ತೀರಿ. ಮಂಗಳೂರು ಅಂತೂ ಮೀನು ಇಲ್ಲದೆ ಎಷ್ಟೋ ಮನೆಗಳಲ್ಲಿ ಊಟವೇ ಸೇರುವುದಿಲ್ಲ. ಒಂದಿಷ್ಟು ಬ್ರಾಹ್ಮಣರ ಮನೆಗಳಲ್ಲಿ (!) ಬಿಟ್ಟರೆ ಹೆಚ್ಚಿನ ಮನೆಗಳಲ್ಲಿ ಮೀನು ಮನೆಯವರಂತೆ ಖಾಯಂ ಸದಸ್ಯ. ಕೆಲವರು ಬೆಳಿಗ್ಗೆ ಮೀನು ಮಾರುಕಟ್ಟೆ, ದಕ್ಕೆ ಅಥವಾ ಈಗ ಕೆಲವು ಮೀನು ಮಾರುವುದಕ್ಕೆ ಎಂದೇ ಇರುವ ರಸ್ತೆ ಬದಿ ತೆರೆದಿರುವ ಹೊಸ ಹೊಸ ಅಂಗಡಿಗಳಲ್ಲಿ ತೆಗೆದುಕೊಂಡರೆ ಅನೇಕರು ಮನೆಯ ಹೊರಗೆ horn ಬಾರಿಸುತ್ತಾ ಬರುವ ಸೈಕಲಿನವನೊ ಅಥವಾ ಟೆಂಪೊ, ರಿಕ್ಷಾದಲ್ಲಿ ಮೀನು ಖರೀದಿಸುತ್ತಾರೆ. ಮೀನು ತೊಳೆದು ಅದರ ಸಿಪ್ಪೆ, ಅದು, ಇದು ತೆಗೆದು ಒಂದು ತೊಟ್ಟೆಯಲ್ಲಿ ಹಾಕಿ ಇಡುತ್ತಾರೆ. ನಂತರ ಊಟವಾದ ನಂತರ ಬಿಟ್ಟ ಮೀನಿನ ಮೂಳೆ, ಅದು ಇದು ತೆಗೆದು ಮತ್ತೆ ಅದೇ ತೊಟ್ಟೆಯಲ್ಲಿ ಹಾಕುತ್ತಾರೆ. ಎಲ್ಲವೂ ಆಗುವಾಗ ಮಧ್ಯಾಹ್ನ 3 ಗಂಟೆ ಆಗುತ್ತದೆ. ಬಳಿಕ ಆ ತೊಟ್ಟೆಯನ್ನು ಮನೆಯಲ್ಲಿ ಇಟ್ಟರೆ ಇಡೀ ಮನೆ ವಾಸನೆ ಹೊಡೆಯುತ್ತದೆ. ನಾವು ಎಷ್ಟೇ ಮೀನು ಪ್ರಿಯರೆನಿಸಿದರೂ ಊಟವಾದ ನಂತರ ಆ ಉಳಿದ ಸಿಪ್ಪೆ, ಮೂಳೆ ಮನೆಯೊಳಗೆ ಇಟ್ಟುಕೊಂಡರೆ ಅದಕ್ಕಿಂತ ನರಕ ಬೇರೆ ಇಲ್ಲ. ಸಿಗಡಿ (ಎಟ್ಟಿ) ಜೆಂಜಿ ಇದರಿಂದ ಬರುವ ವಾಸನೆ ಬಹಳ ಗಬ್ಬು ಆದ್ದರಿಂದ ಏನು ಮಾಡುತ್ತೆವೆ ಎಂದರೆ ಆ ತೊಟ್ಟೆಯಲ್ಲಿ ಎಲ್ಲವನ್ನು ಹಾಕಿ ಮನೆಯ ಕಂಪೌಂಡ್ ಹೊರಗೆ ಇಟ್ಟು ಬರುತ್ತೆವೆ. ನಮ್ಮ ಕೆಲಸ ಅಲ್ಲಿಗೆ ಮುಗಿಯಿತು.
ನಂತರ ಪ್ರಾರಂಭವಾಗುವುದು ಬೀದಿ ನಾಯಿಗಳ ಕ್ರಿಯೇಟಿವಿಟಿ. ಮೊದಲೇ ಮೀನಿನ ಮೂಳೆ, ಸಿಪ್ಪೆ, ಪರಿಮಳ, ನೀವು ಪಾಪ, ಅದು ಹೊರಗೆ ಬೀಳಬಾರದು ಎಂದು ತುಂಬಾ ಗಟ್ಟಿ ಕಟ್ಟಿರುತ್ತೀರಿ. ತೊಟ್ಟೆಯ ಹತ್ತಿರ ಬರುವ ನಾಯಿಗೆ ಅದು ಕನ್ನಡಿಯೊಳಗಿನ ಗಂಟಿನಂತೆ ಕಾಣುತ್ತದೆ. ಅದನ್ನು ತಿನ್ನದೆ ಅಲ್ಲಿಂದ ಕದಲುವುದಿಲ್ಲ ಎಂದು ಅದು ಧೃಡ ನಿಶ್ಚಯ ಮಾಡುತ್ತದೆ. ತೊಟ್ಟೆಗೆ ಮೊದಲು ತನ್ನ ಚೂಪಾದ ಉಗುರಿನಿಂದ ಆದಷ್ಟು ದೊಡ್ಡ ರಂಧ್ರ ಮಾಡುತ್ತದೆ. ಅಲ್ಲಿಗೆ ತೊಟ್ಟೆಯ ಒಳಗಿನಿಂದ ರಸ ನಿಧಾನವಾಗಿ ದಾರಿ ಮಾಡಿ ಹೊರಗೆ ಬರುತ್ತದೆ. ಆದರೆ ಮೂಳೆ, ಸಿಪ್ಪೆ ಹೊರಗೆ ಬರಲು ಜಾಗ ಸಾಕಾಗುವುದಿಲ್ಲ. ಮತ್ತೆ ನಾಯಿ ತನ್ನ ಪ್ರಯತ್ನ ಮುಂದುವರೆಸುತ್ತದೆ. ಅಷ್ಟೊತ್ತಿಗೆ ಅದರ ಕೆಲವು ಸ್ನೇಹಿತರು ಅಲ್ಲಿ ಒಟ್ಟು ಸೇರುತ್ತಾರೆ. ಎಲ್ಲರೂ ಸೇರಿ ನಿಮ್ಮ ತೊಟ್ಟೆಗೆ ಒಂದು ಗತಿ ಕಾಣಿಸುತ್ತವೆ. ನೀವು ಒಂದು ಬೊಟ್ಟು ಕೂಡ ಹೊರಗೆ ಬೀಳಬಾರದು ಎಂದು ಕಟ್ಟಿ ಇಟ್ಟು ಬಂದದ್ದು ಕೆಲವು ಸಮಯದ ಬಳಿಕ ಇಟ್ಟ ಕಡೆಯಲ್ಲಿ ರಂಗೋಲಿಯಂತೆ ಹರಡಿರುತ್ತದೆ.
ಮರುದಿನ ಅಥವಾ ಆ ಸಂಜೆ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನವರು ನೇಮಿಸಿರುವ ಗುತ್ತಿಗೆದಾರರ ವಾಹನ ಮೈಕ್ ನಲ್ಲಿ ಮುದ್ರಿತ ಧ್ವನಿ ವರ್ಧಕ ಹಾಕಿ ತುಳು, ಕನ್ನಡದಲ್ಲಿ ಕೂಗುತ್ತಾ ಬರುತ್ತದೆ. ವಾಹನದಿಂದ ಕೆಲಸದವರು ಕೆಳಗೆ ಇಳಿಯುತ್ತಾರೆ. ಅವರು ಕಂಪೌಂಡ್ ಹೊರಗೆ ಇಟ್ಟಿರುವ ತೊಟ್ಟೆಗಳನ್ನು ಒಟ್ಟು ಮಾಡಿ ತಮ್ಮ ಗಾಡಿಗೆ ತುಂಬುತ್ತಾರೆ. ನಾಯಿಗಳು ಮಾಡಿದ ರಂಗೋಲಿ ಹಾಗೆ ಉಳಿಯುತ್ತದೆ. ಅಲ್ಲಿಗೆ ಸ್ವಚ್ಚತೆಯ ಹೆಸರಿನಲ್ಲಿ ಪ್ರಾರಂಭವಾಗಿರುವ ಪ್ರಯತ್ನವೊಂದು ಹೇಳಹೆಸರಿಲ್ಲದೆ ನಿಮ್ಮ ಮನೆಯ ಹೊರಗೆನೆ ಮಕಾಡೆ ಮಲಗಿ ಬಿಡುತ್ತದೆ.
ಮರುದಿನ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್, ಪಾಲಿಕೆ ಕಮೀಷನರ್ ಪತ್ರಿಕಾಗೋಷ್ಟಿ ಕರೆಯುತ್ತಾರೆ. ನಮ್ಮ ಮಂಗಳೂರು ಸ್ವಚ್ಚತೆಯಲ್ಲಿ ಇಡೀ ದೇಶದಲ್ಲಿ ನಂಬರ್ ಮೂರನೇ ಸ್ಥಾನದಲ್ಲಿ ಇದೆ. ಅದನ್ನು ನಾವು ನಂಬರ್ ಸ್ಥಾನಕ್ಕೆ ತರಬೇಕು. ಅದಕ್ಕಾಗಿ ಎಲ್ಲಾ ನಾಗರಿಕರು ಕೈ ಜೋಡಿಸಬೇಕು ಎನ್ನುತ್ತಾರೆ. ಹಾಗೆ ಹೇಳಿ ಪಕ್ಕದ ಹೋಟೇಲಿನಿಂದ ತಂದಿರುವ ಅಂಬಂಡೆ, ಶೀರಾ ತಿಂದು, ಕೈ ತೊಳೆದು ತಮ್ಮ ಚೇಂಬರಿಗೆ ಹೊರಟು ಹೋಗುತ್ತಾರೆ. ಅವರು ಚೇಂಬರಿನ ಕರ್ಟನ್ ತೆರೆದರೆ ಅಲ್ಲಿ ಪಕ್ಕದ ರಸ್ತೆಯಲ್ಲಿ ನಾಯಿಯೊಂದು ಮತ್ತೆ ಯಥಾಪ್ರಕಾರ ಯಾರೋ ಇಟ್ಟಿರುವ ಮೀನಿನ ಅಳಿದುಳಿದ ಸಿಪ್ಪೆ, ಮೂಳೆ ಹಾಕಿದ ತೊಟ್ಟೆಯೊಂದಿಗೆ ಗುದ್ದಾಟಕ್ಕೆ ನಿಂತಿರುತ್ತದೆ. ಮರುದಿನ ಪತ್ರಿಕೆಯಲ್ಲಿ ಮೇಯರ್ ಹಾಗೂ ಪಾಲಿಕೆ ಆಯುಕ್ತರಿಂದ ಮಂಗಳೂರನ್ನು ಸ್ವಚ್ಚತೆಯಲ್ಲಿ ದೇಶದಲ್ಲಿಯೇ ನಂಬರ್ ಒಂದನೇ ಸ್ಥಾನಕ್ಕೆ ತರಲು ಪ್ರಯತ್ನ ಎನ್ನುವ ಹೆಡ್ಡಿಂಗ್ ಬಂದಿರುತ್ತದೆ. ಕೇಂದ್ರ ಸರಕಾರ ನಗರಗಳಿಗೆ ಸ್ವಚ್ಚತೆ ಬಗ್ಗೆ ರ್ಯಾಂಕ್ ಕೊಡುತ್ತದೆ ಬನ್ನಿ ಪಾಲ್ಗೊಲಿ ಪಾಲಿಕೆಯ ಎಂತಹ ಗ್ರೇಟ್ ಪ್ರಯತ್ನ ಎಂದು ನಾವು ಖುಷಿಯಿಂದ ಓದಿ ಮರುದಿನ ಅದೇ ಪತ್ರಿಕೆಯ ಮೇಲೆ ಕರಿದ ಮೀನನ್ನು ಹಾಕಿ ಎಣ್ಣೆ ಇಂಗಿ ಹೋಗುವಂತೆ ನೋಡಿಕೊಳ್ಳುತ್ತೇವೆ. ಯಥಾಪ್ರಕಾರ ಆ ಪತ್ರಿಕೆ ನಮ್ಮ ತೊಟ್ಟೆ ಸೇರುತ್ತದೆ. ಕಂಪೌಂಡ್ ಹೊರಗೆ ಇಡುತ್ತೇವೆ. ಮತ್ತೇ ನಾಯಿ ಬರುತ್ತದೆ. ತೂತು ಮಾಡುತ್ತದೆ. ಯಥಾಪ್ರಕಾರ ಹಿಸ್ಟರಿ ರಿಪೀಟ್ ಆಗುತ್ತದೆ.
ಪಾಪ, ನಾಯಿಗಳಿಗೆ ಏನು ಗೊತ್ತು. ಆಯುಕ್ತರು ನಿನ್ನೆ ಪ್ರೆಸ್ ಮೀಟ್ ಮಾಡಿ ಸ್ವಚ್ಚತೆಯಲ್ಲಿ ಮಂಗಳೂರನ್ನು ನಂಬರ್ ಒನ್ ಮಾಡಬೇಕೆಂದು ಹೇಳಿಕೆ ಕೊಟ್ಟು ಮಿಂಚಿದ್ದಾರೆ ಅಂತ. ಅದೇನು ಪೇಪರ್ ಓದುತ್ತದಾ? ನಾಯಿಗಳಿಗೆ ಏನು ತಿಳಿದಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಟಿವಿಗಳಲ್ಲಿ ಸ್ವಚ್ಚತೆಯ ಬಗ್ಗೆ ಜಾಹೀರಾತು ಕೊಟ್ಟು ಗಾಂಧಿ ಮಾರ್ಗ ಅನುಸರಿಸುತ್ತಿದ್ದಾರೆ ಅಂತ. ನಾಯಿಗಳಿಗೆ ಏನೂ ಗೊತ್ತಾಗುವುದಿಲ್ಲ. ಅದಕ್ಕೆ ಅವುಗಳಿಗೆ ನಾಯಿಗಳು ಎನ್ನುವುದು. ಆದರೆ ಎಲ್ಲವೂ ಗೊತ್ತಿರುವ ನಾವು ಅಂದರೆ ಮನುಷ್ಯರು, ಅದರಲ್ಲೂ ಮಂಗಳೂರಿನವರು, ಬುದ್ಧಿವಂತರು ಏನು ಮಾಡಬೇಕು? ಅದು ಪ್ರಶ್ನೆ? ಅದಕ್ಕೆ ನಿಮ್ಮ ಬಳಿ ಉತ್ತರ ಸಿಗುತ್ತದಾ ಎನ್ನುವುದನ್ನು ಕಾಯುತ್ತಿದ್ದೇನೆ.ನಾನು ಇಷ್ಟೆಲ್ಲಾ ಬರಿಯಲು ಕಾರಣ ಶುಕ್ರವಾರ Only ಒಣ ಕಸ No ಹಸಿ ಕಸ ಶುಕ್ರವಾರ ದ ಹಸಿ ಕಸ ಕೊಂಡು ಹೋಗದೆ ಇದರೆ ಏನಾಗ ಬಹುದು ಎಂದು ಪಾಲಿಕೆ ಅಲೋಚಿಸಲಿ.ಇದಕ್ಕೆ ನಮ್ಮ Dynamic ಮೇಯರ್ ಅದಷ್ಟು ಬೇಗ ಒಂದು ದಾರಿ ಹುಡುಕಲಿ.
0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Hanumantha Kamath January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Hanumantha Kamath December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search