• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!

Avatartnn Posted On January 19, 2021


  • Share On Facebook
  • Tweet It

ಉಳ್ಳಾಲ: ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಎಸ್‌ ಡಿಪಿಐ ಪಕ್ಷದ ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ಧಿಕ್‌ ಉಳ್ಳಾಲ್‌ (35) ಪ್ರಕರಣದ ಆರೋಪಿ.

ಕೊಣಾಜೆ ನಡುಪದವಿನ ಎಂಜಿನಿಯರಿಂಗ್‌ ಓದುತ್ತಿದ್ದ ಯುವತಿಯೊಬ್ಬಳನ್ನು ಕೇರಳದ ಯುವಕ 15ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಯುವತಿ ಮತಾಂತರವಾಗಿದ್ದು, ತನ್ನ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಳ್ಳುತ್ತಾಳೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಆ ಬಳಿಕ ಗಂಡ ನಾಪತ್ತೆಯಾಗುತ್ತಾನೆ.

ಫಾತಿಮಾ ಇಬ್ಬರು ಮಕ್ಕಳೊಂದಿಗೆ ಉಳ್ಳಾಲ ಒಂಬತ್ತು ಕೆರೆಯಲ್ಲಿ ವಾಸವಾಗಿದ್ದರು. ಈ ಸಮಯದಲ್ಲಿ ಸಂಘಟನೆಯ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಇದೇ ಸಲುಗೆಯಿಂದ ಆಕೆಯ ಇಬ್ಬರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಜ.16ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೆ ಸಹಾಯಮಾಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಎಸ್ ಡಿ ಪಿಐ ಮುಖಂಡ ಸಿದ್ದಿಕ್ ಮಹಿಳೆಯ ಎರಡು ಹೆಣ್ಣುಮಕ್ಕಳ ಮುಂದೆ ಬೆತ್ತಲಾಗಿ ನಿಲ್ಲುತ್ತಿದ್ದನಂತೆ , ಇದರಿಂದ ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದರು, ಕಳೆದ ಡಿಸೆಂಬರ್ ನಲ್ಲಿ ಈ ಬೆಳವಣಿಗೆ ನಡೆದಿದ್ದು ಎಸ್ ಡಿಪೀಐ ಮುಖಂಡರು ಸೇರಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ ಇದೀಗ ಮತ್ತೆ ಸಿದ್ದಿಕಿನ ಕಾಮದಾಟ ಜಾಸ್ತಿಯಾಗುತ್ತಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ, ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ.

  • Share On Facebook
  • Tweet It


- Advertisement -


Trending Now
ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
tnn March 5, 2021
ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
tnn March 4, 2021
Leave A Reply

  • Recent Posts

    • ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
    • ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
    • ಹೊಸ ಮೇಯರ್ ಮಾಡಬೇಕಾದ ಮೊದಲ ಕೆಲಸಕ್ಕೆ ಗುಂಡಿಗೆ ಬೇಕು!!
    • ಮನ್ ಕಿ ಬಾತ್ ನಲ್ಲಿ ಅಡುಗೆ ಅನಿಲದ ರೇಟ್ ಬಗ್ಗೆ ಮೋದಿ ಮಾತನಾಡಲಿ!!
    • ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!
    • ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದ 1 ವರ್ಷದಲ್ಲಿಯೇ ಲಗಾಮು ತಪ್ಪಿ ಹೋಗಿದೆ!!
    • ಪಾಲಿಕೆಯ ಹೊಸ ನಿಯಮದಿಂದ ಉದ್ದಿಮೆದಾರ ಬೀದಿಗೆ??
    • ನೀರು ಬರುತ್ತಿಲ್ಲ, ಮಣ್ಣು ತೆಗೆಸುವ ಗಂಡಸು ಪಾಲಿಕೆಯಲ್ಲಿ ಇದ್ದಾರಾ?
    • ಕಾಂಗ್ರೆಸ್ಸಿನ ಲೆಕ್ಕ ಕೊಡಿ ಅಭಿಯಾನ ಖಾದರ್ ಮನೆಯಿಂದಲೇ ಆರಂಭವಾಗಲಿ!!
    • ಖಾದರ್ ಸ್ವಕ್ಷೇತ್ರದಲ್ಲಿ ತ್ಯಾಜ್ಯ ಘಟಕ ಇಲ್ಲದಿದ್ದರೆ ಕಸ ಪಂಚಾಯತ್ ಅಂಗಳದಲ್ಲಿ ಸುರಿಯಬೇಕಾ!
  • Popular Posts

    • 1
      ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
    • 2
      ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
    • 3
      ಹೊಸ ಮೇಯರ್ ಮಾಡಬೇಕಾದ ಮೊದಲ ಕೆಲಸಕ್ಕೆ ಗುಂಡಿಗೆ ಬೇಕು!!
    • 4
      ಮನ್ ಕಿ ಬಾತ್ ನಲ್ಲಿ ಅಡುಗೆ ಅನಿಲದ ರೇಟ್ ಬಗ್ಗೆ ಮೋದಿ ಮಾತನಾಡಲಿ!!
    • 5
      ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search