ಮಂಗಳೂರು ಗೋಲಿಬಾರ್ ರಿವೇಂಜ್, ಪೊಲೀಸ್ ಗಣೇಶ್ ಕಾಮತ್ ಕೊಲೆ ಯತ್ನ ಆರು ಆರೋಪಿಗಳು ಅರೆಸ್ಟ್!
Posted On January 19, 2021
0
ಮಂಗಳೂರಿನ ನ್ಯೂ ಚಿತ್ರಾ ಬಿಂಕ್ಷನ್ ಬಳಿ ಡಿಸೆಂಬರ್ 16 ರಂದು ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿ ಕೊಲೆಯತ್ನಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಅನೀಶ್ ಅಶ್ರಫ್, ಅಬ್ದುಲ್ ಖಾದರ್ ಫಹಾದ್, ಶೇಖ್ ಮಹಮ್ಮದ್ ಹ್ಯಾರೀಸ್ ಯಾನೆ ಜಿಗ್ರಿ, ಮಹಮ್ಮದ್ ಖಾಯೀಸ್ ಯಾನೆ ಖಾಯೀಸ್, ರಾಹಿಲ್ ಯಾನೆ ಚೋಟು ಲಾಹಿಲ್, ಮಹಮ್ಮದ್ ನವಾಜ್, ಬಂಧಿತರು.
ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್, ಈ ಕೊಲೆಯತ್ನ ಪ್ರಕರಣದ ಹಿಂದೆ ಮಂಗಳೂರು ಗೋಲಿಬಾರ್ ರಿವೇಂಜ್ ಬಗ್ಗೆ ಮಾಹಿತಿ ದೊರಕಿದೆ. ಕಾನೂನು ಸುವ್ಯವಸ್ಥೆ ಬಗ್ಗೆ ಅಸಮಾಧಾನ ಹೊಂದಿದ್ದ ಆರೋಪಿಗಳು ಕೃತ್ಯಕ್ಕೆ ಯತ್ನಿಸಿದ್ದಾರೆ. ಆರೋಪಿಗಳು ನೈಟ್ರೋವಿಟ್ ಟ್ಯಾಬ್ಲೆಟ್ ಬಳಸಿದ್ದು ಕೃತ್ಯದ ಹಿಂದೆ ಎರಡು ಗ್ಯಾಂಗ್ ಭಾಗಿಯಾಗಿತ್ತು ಎಂದು ಮಾಹಿತಿ ನೀಡಿದರು.
Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
February 12, 2026









