• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಪೇಂದ್ರ ಕಟ್ಟುವ ಹೊಸ ಪಕ್ಷ ಯಾವುದು?

TNN Correspondent Posted On August 12, 2017
0


0
Shares
  • Share On Facebook
  • Tweet It

ನಟ, ನಿರ್ಧೇಶಕ ಉಪೇಂದ್ರ ಭಾರತೀಯ ಜನತಾ ಪಾರ್ಟಿ ಸೇರುತ್ತಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇವತ್ತು ತಮ್ಮ ಖಾಸಗಿ ರೆಸಾರ್ಟ್ ಉಪ್ಪೀಸ್ ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ ಸೇರುವ ಕುರಿತು ಯಾವುದೇ ಮಾತುಗಳನ್ನು ಆಡಲಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಉಪೇಂದ್ರ ಎಂದು ಕೆಲವು ಮಾಧ್ಯಮಗಳಲ್ಲಿ ಗಾಸಿಪ್ ಹರಡಿತ್ತು. ಅದಕ್ಕೆ ಸರಿಯಾಗಿ ಉಪೇಂದ್ರ ಇವತ್ತೆ ಸುದ್ದಿಗೋಷ್ಟಿ ಕೂಡ ಕರೆದಿದ್ದರು.

ತಾನು ರಾಜಕೀಯ ಎಂಟ್ರಿ ಮಾಡುತ್ತೇನೆ ಎಂದು ಹೇಳಿದ್ದು ನಿಜ, ಆದರೆ ತನ್ನ ರಾಜಕೀಯ ಪಕ್ಷದ ನಿರ್ಧಾರವಾಗಿಲ್ಲ. ತಾನು ಹೊಸ ಕಲ್ಪನೆಯಡಿ ಪ್ರಜಾನೀತಿ ಮಾಡಲು ಉದ್ದೇಶಿಸಿದ್ದು ಅದರ ಪ್ರಕಾರ ಮುನ್ನಡೆಯುವುದಾಗಿ ಅವರು ಹೇಳಿದ್ದಾರೆ. ನಮಗೆ ಬೇಕಾಗಿರುವುದು ಜನನಾಯಕರಲ್ಲ, ಹಾಗೇ ಜನಸೇವಕರೂ ಅಲ್ಲ, ನಮಗೆ ಬೇಕಾಗಿರುವುದು ಕಾರ್ಮಿಕರು. ತಾನು ಈ ವರ್ತಮಾನದಲ್ಲಿ ಬದುಕುವವನು, ನಾಳೆಯ ವಿಷಯ ಗೊತ್ತಿಲ್ಲ. ಹೊಸ ಹೊಸ ಐಡಿಯಾ ಇರುವ ಜನರು ನನ್ನೊಂದಿಗೆ ಬರಬೇಕು ಎಂದು ಅವರು ಹೇಳಿದ್ದಾರೆ. ಪೊಲಿಟಿಕಲ್ ಐಡಿಯಾ ಹೇಗಿರಬೇಕು ಎನ್ನುವುದನ್ನು ಜನ ಇಮೇಲ್ ಮೂಲಕ ತಿಳಿಸಬಹುದು ಎಂದು ಉಪೇಂದ್ರ ಮೂರು ಇಮೇಲ್ ಐಡಿಯಾಗಳನ್ನು ಕೊಟ್ಟಿದ್ದಾರೆ.

ಹೊಸಪಕ್ಷ ಕಟ್ಟುತ್ತೀರಾ ಎನ್ನುವ ಪ್ರಶ್ನೆಗೆ ಅದಕ್ಕೆ ನಿಮ್ಮ ಸಲಹೆ ಬೇಕು ಎಂದು ಹೇಳಿದ ಉಪೇಂದ್ರ, ಈಗ ಪಕ್ಷ ಕಟ್ಟಿ ನಂತರ ಅಧಿಕಾರಕ್ಕೆ ಬಂದ ಪಕ್ಷದೊಂದಿಗೆ ವಿಲೀನ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಅದು ಈಗಲೇ ಹೇಳಲು ಹೇಗೆ ಸಾಧ್ಯ ಎಂದು ನಟ ಅಭಿಪ್ರಾಯ ಪಟ್ಟಿದ್ದಾರೆ.
ತಾನು ಎಲ್ಲರ ಅಭಿಪ್ರಾಯ ಪಡೆದು ಮುನ್ನಡೆಯುತ್ತೇನೆ ಎಂದು ಹೇಳಿದ ಉಪೇಂದ್ರ, ಪಾರದಶ್ಯಕವಾಗಿ ನಡೆಯುವ ಮೂವ್ ಮೆಂಟ್ ಬೇಕು ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ತಾರಾಪತ್ನಿ ಪ್ರಿಯಾಂಕ ಅವರು ಬಹಳ ವರ್ಸದಿಂದ ಅವರು ಕನಸು ಕಟ್ಟಿಕೊಂಡಿದ್ದರು, ಅದು ಈಗ ಜಾರಿಗೆ ಬರುತ್ತಿದೆ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶೈಲಿಯಲ್ಲಿ ಉಪೇಂದ್ರ ಪಕ್ಷ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ. ಉಪೇಂದ್ರ ಸುದ್ದಿಗೋಷ್ಟಿಯ ನಡುವೆ ಅಮಿತಾ ಶಾ ಬೆಂಗಳೂರು ಭೇಟಿಯ ಸುದ್ದಿ ಕನ್ನಡ ವಾಹಿನಿಯಲ್ಲಿ ಸೈಡ್ ಲೈನ್ ಆಗಿದೆ

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search