• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗಿ ಸಮಾಜದಿಂದ ಆಟಿಯ ವಿಶಿಷ್ಟ ಆಚರಣೆ!

TNN Correspondent Posted On August 14, 2017
0


0
Shares
  • Share On Facebook
  • Tweet It

ಈಗ ತುಳುನಾಡಿನಲ್ಲಿ ಆಟಿ ಸಂಭ್ರಮ. ತುಳುಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರಗಳನ್ನು ಮುಂದಿನ ತಲೆಮಾರಿಗೆ ಹೊತ್ತೊಯ್ಯುವ ಅನಿವಾರ್ಯತೆ ಮತ್ತು ಯುವ ಪೀಳಿಗೆಗೆ ಹಿಂದಿನ ಸಂಪ್ರದಾಯಗಳನ್ನು ತಿಳಿಸುವ ಕಾರ್ಯಕ್ರಮವಾಗಿ ಆಟಿಡೊಂಜಿ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೆಡೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ಆಯೋಜಿಸಿದ 7 ನೇ ವರ್ಷದ ಆಟಿದ ಕೂಟ ಕಾರ್ಯಕ್ರಮ ಕದ್ರಿ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಕಿರಣ್ ಕುಮಾರ್ ಜೋಗಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡವರನ್ನು ಓಲೆ ಬೆಲ್ಲ ಹಾಗೂ ಪಾನಕ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಳಸಿಗೆಯಲ್ಲಿ ತೆನೆಭತ್ತ ತುಂಬಿ ತೆಂಗಿನ ಹೂ ಅರಳಿಸುವ ಹಾಗೂ ದ್ವೀಪ ಪ್ರಜ್ವಲಿಸುವ ಮೂಲಕ ನಡೆಸಲಾಯಿತು. ಮುಖ್ಯ ಅತಿಥಿ ಸಾಹಿತಿ ಮಹೇಂದ್ರ ನಾಥ್ ಸಾಲೆತ್ತೂರು ಆಟಿ ತಿಂಗಳ ಮಹತ್ವದ ಕುರಿತು ಹಾಗೂ ತತ್ಸಬಂಧಿ ವಿವಿಧ ಆಚರಣೆಗಳ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇಂತಹ ಕಾರ್ಯಕ್ರಮ ತುಳುನಾಡ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಮಾಡಬೇಕೆಂದು ಹೇಳಿದರು. ಇನ್ನೊರ್ವ ಅತಿಥಿ ಪುತ್ತೂರು ಜೋಗಿ ಸಂಘದ ಅಧ್ಯಕ್ಷ ಮೋನಪ್ಪ ಅವರು ಮಾತನಾಡುತ್ತಾ ಪುರುಷನಾಥ ಸಂಪ್ರದಾಯದ ಪ್ರಮುಖರಲ್ಲೋರ್ವರಾದ ಔರಂಗಿನಾಥರು ವನಸ್ಪತಿ ಔಷಧೀಯ ಜನಕ ಎಂದು ಬಣ್ಣಿಸಿದರಲ್ಲದೆ ಆಟಿ ತಿಂಗಳಲ್ಲಿ ಉಪಯೋಗಿಸುವ ಆಹಾರ ಪದಾರ್ಥಗಳ ಔಷಧೀಯ ಗುಣಗಳನ್ನು ವಿವರಿಸಿದರು. ಅತಿಥಿಗಳಾಗಿ ಅಖಿಲ ಕರ್ನಾಟಕ ನಾಥ ಪಂಥ ಜೋಗಿ ಸಮಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷ ಡಾ| ಕೇಶವ ಕೋಟೇಶ್ವರ, ಉಡುಪಿ ಜಿಲ್ಲಾ ಜೋಗಿ ಸಮಾಜ ಸಂಘದ ಅಧ್ಯಕ್ಷ ರವೀಂದ್ರ ಜೋಗಿ, ಕುಂದಾಪುರ ತಾಲೂಕು ಸಮಾಜ ಸೇವಾ ಸಮಿತಿ ಅಧ್ಯಕ್ಷ ದಯಾನಂದ ಜೋಗಿ, ಉಡುಪಿ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಲಕ್ಷ್ಮಿ ಟೀಚರ್ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಬಿ ಗಂಗಾಧರ್ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಜೋಗಿ ಸಮಾಜಕ್ಕೆ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.

ಜಾನಪದ ನೃತ್ಯ, ಭಕ್ತಿ ಸಂಗೀತ, ಕಿರುನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪುತ್ತೂರಿನ ಕುಮಾರಿ ನಿಸರ್ಗ ಕಣ್ಣಿಗೆ ಬಟ್ಟೆ ಕಟ್ಟಿ ಓದುವ ಪ್ರಾತ್ಯಕ್ಷಿಕೆ ಮುಖೇನ ಸೇರಿದ ಜನ ಸಮೂಹವನ್ನು ನಿಬ್ಬೆರಗಾಗಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಅಮೀತಾ ಸಂಜೀವ್ ವೇದಿಕೆಯಲ್ಲಿದ್ದರು. ವಿಜಯಾನಂದ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಹೆಚ್.ಕೆ.ಪುರುಷೋತ್ತಮ್ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಡಾ| ಪಿ ಕೇಶವನಾಥ್ ವಂದಿಸಿದರು. ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಸ್ವಜಾತಿ ಭಾಂದವರು ಆಗಮಿಸಿದ್ದರು. ಸಮಾಜ ಭಾಂದವರು ಕೊಡಮಾಡಿದ ತುಳುನಾಡಿನ ಸಾಂಪ್ರದಾಯಿಕ ಭಕ್ಷ್ಯಗಳಾದ ಗಾರಿಗೆ, ಪತ್ರೊಡೆ, ತಜಂಕು ಸುಕ್ಕ, ಕಣಿಲೆ-ಹೆಸರು ಗಸಿ, ಮರುವಾಯಿ ಪುಂಡಿ, ಕೋಳಿಸುಕ್ಕ, ಬೂತಾಯಿ ಪುಳಿಮುಂಚಿ, ಸಾನರ್ೆದಡ್ಡೆ, ಸೇಮಿಗೆ ಹಾಲು, ಮೆಂತೆ ಗಂಜಿ ಮತ್ತು ವಿವಿಧ ಬಗೆಯ ಚಟ್ನಿಗಳನ್ನು ಆಸ್ವಾದಿಸುವ ಅವಕಾಶವನ್ನು ಕಾರ್ಯಕ್ರಮದಲ್ಲಿ ಊಟದೊಂದಿಗೆ ವಿತರಿಸಲಾಯಿತು.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search