• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಸ್ವಾತಂತ್ರ್ಯ ಆಚರಿಸಿ- ಮಾಜಿ ಯೋಧರು

TNN Correspondent Posted On August 15, 2017
0


0
Shares
  • Share On Facebook
  • Tweet It

ಸುರತ್ಕಲ್ ವಲಯದ ಪೂರ್ವ ಸೈನಿಕರ ಬಳಗದ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಗಣೇಶ್ ಪುರ ದೇವಸ್ಥಾನದಿಂದ ಕೃಷ್ಣಾಪುರ ಮಾರ್ಗವಾಗಿ ಸುರತ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಸೈನಿಕರ ಸ್ಮಾರಕದವರೆಗೆ ಮಾಜಿ ಯೋಧರು ಬುಲೆಟ್ ರ್ಯಾಲಿ ನಡೆಸಿ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿದರು. ಸುಮಾರು 50 ರಾಯಲ್ ಎನ್ ಫೀಲ್ಡ್ ಮತ್ತು ಬುಲೆಟ್ ಬೈಕ್ ಗಳಲ್ಲಿ ನಡೆದ ರ್ಯಾಲಿಯ ತರುವಾಯ ಮಾತನಾಡಿದ ಮಾಜಿ ಯೋಧ ಎಂ ಭದ್ರಯ್ಯ ಅವರು ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ರಾಷ್ಟ್ರ ಜಾಗೃತಿಯನ್ನು ಮಾಡುವ ಮೂಲಕ ಪ್ರತಿಯೊಬ್ಬರು ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು ಎಂದು ಕರೆ ನೀಡಿದರು.

ಗಡಿಯಲ್ಲಿ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಚೀನಾದ ಮದ ಅಡಗಿಸಬೇಕಾದರೆ ಅವರಿಗೆ ಆರ್ಥಿಕ ಹೊಡೆತ ಕೊಡುವುದು ಒಂದೇ ದಾರಿ. ಅದನ್ನು ಭಾರತ ಮಾಡಿ ಚೀನಾದ ಬೆನ್ನೆಲುಬು ಮುರಿಯಬೇಕು. ಚೀನಾ ತನ್ನ ವ್ಯವಹಾರಿಕ ಉದ್ದೇಶಕ್ಕಾಗಿ ಭಾರತವನ್ನು ಅವಲಂಬಿಸಿದೆ, ಆದ್ದರಿಂದ ಚೀನಾಕ್ಕೆ ಬುದ್ಧಿ ಕಲಿಸಬೇಕಾದರೆ ಚೀನಾದ ಎಲ್ಲಾ ವಸ್ತುಗಳನ್ನು ಭಾರತೀಯರು ಬಹಿಷ್ಕರಿಸಬೇಕು. ಏಟಿಗೆ ಎದಿರೇಟು ಕೊಡಲು ನಾವು ಸಿದ್ಧರಾಗಬೇಕು ಎಂದು ಹೇಳಿದರು.

ಸಾಂಧರ್ಬಕವಾಗಿ ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್, ಪೂರ್ವ ಸೇನಾನಿ ಶ್ರೀಕಾಂತ್ ಶೆಟ್ಟಿ ಮಾತನಾಡಿದರು. ನಿವೃತ್ತ ಯೋಧರಾದ ಭಗವಾನ್ ದಾಸ್, ಭಾಸ್ಕರ್ ರೈ, ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಮಹೇಶ್ ಮೂರ್ತಿ, ನವೋದಯ ಯುವಕ ಮಂಡಲದ ಅಧ್ಯಕ್ಷ ಧರ್ಮೇಂದ್ರ ಗಣೇಶ್ ಪುರ, ಜಿಕೆ ಸುಂದರ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search