• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಸ್ವಾತಂತ್ರ್ಯ ಆಚರಿಸಿ- ಮಾಜಿ ಯೋಧರು

TNN Correspondent Posted On August 15, 2017
0


0
Shares
  • Share On Facebook
  • Tweet It

ಸುರತ್ಕಲ್ ವಲಯದ ಪೂರ್ವ ಸೈನಿಕರ ಬಳಗದ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಗಣೇಶ್ ಪುರ ದೇವಸ್ಥಾನದಿಂದ ಕೃಷ್ಣಾಪುರ ಮಾರ್ಗವಾಗಿ ಸುರತ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಸೈನಿಕರ ಸ್ಮಾರಕದವರೆಗೆ ಮಾಜಿ ಯೋಧರು ಬುಲೆಟ್ ರ್ಯಾಲಿ ನಡೆಸಿ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿದರು. ಸುಮಾರು 50 ರಾಯಲ್ ಎನ್ ಫೀಲ್ಡ್ ಮತ್ತು ಬುಲೆಟ್ ಬೈಕ್ ಗಳಲ್ಲಿ ನಡೆದ ರ್ಯಾಲಿಯ ತರುವಾಯ ಮಾತನಾಡಿದ ಮಾಜಿ ಯೋಧ ಎಂ ಭದ್ರಯ್ಯ ಅವರು ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ರಾಷ್ಟ್ರ ಜಾಗೃತಿಯನ್ನು ಮಾಡುವ ಮೂಲಕ ಪ್ರತಿಯೊಬ್ಬರು ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು ಎಂದು ಕರೆ ನೀಡಿದರು.

ಗಡಿಯಲ್ಲಿ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಚೀನಾದ ಮದ ಅಡಗಿಸಬೇಕಾದರೆ ಅವರಿಗೆ ಆರ್ಥಿಕ ಹೊಡೆತ ಕೊಡುವುದು ಒಂದೇ ದಾರಿ. ಅದನ್ನು ಭಾರತ ಮಾಡಿ ಚೀನಾದ ಬೆನ್ನೆಲುಬು ಮುರಿಯಬೇಕು. ಚೀನಾ ತನ್ನ ವ್ಯವಹಾರಿಕ ಉದ್ದೇಶಕ್ಕಾಗಿ ಭಾರತವನ್ನು ಅವಲಂಬಿಸಿದೆ, ಆದ್ದರಿಂದ ಚೀನಾಕ್ಕೆ ಬುದ್ಧಿ ಕಲಿಸಬೇಕಾದರೆ ಚೀನಾದ ಎಲ್ಲಾ ವಸ್ತುಗಳನ್ನು ಭಾರತೀಯರು ಬಹಿಷ್ಕರಿಸಬೇಕು. ಏಟಿಗೆ ಎದಿರೇಟು ಕೊಡಲು ನಾವು ಸಿದ್ಧರಾಗಬೇಕು ಎಂದು ಹೇಳಿದರು.

ಸಾಂಧರ್ಬಕವಾಗಿ ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್, ಪೂರ್ವ ಸೇನಾನಿ ಶ್ರೀಕಾಂತ್ ಶೆಟ್ಟಿ ಮಾತನಾಡಿದರು. ನಿವೃತ್ತ ಯೋಧರಾದ ಭಗವಾನ್ ದಾಸ್, ಭಾಸ್ಕರ್ ರೈ, ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಮಹೇಶ್ ಮೂರ್ತಿ, ನವೋದಯ ಯುವಕ ಮಂಡಲದ ಅಧ್ಯಕ್ಷ ಧರ್ಮೇಂದ್ರ ಗಣೇಶ್ ಪುರ, ಜಿಕೆ ಸುಂದರ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search