• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಾದಿ ತಪ್ಪಿಸಿದ ಐವನ್ ಡಿ ಸೋಜಾ ಪ್ರಕಟಣೆ, ರಸ್ತೆಗಿಳಿದ ವಾಹನಗಳು ಪೋಲೀಸ್ ವಶಕ್ಕೆ

Tulunadu News Posted On May 10, 2021
0


0
Shares
  • Share On Facebook
  • Tweet It

ಮಂಗಳೂರು : ಬೆಳಗ್ಗೆ 10 ಗಂಟೆಯವರೆಗೆ ವಾಹನ ಬಳಸಿ ಓಡಾಡಬಹುದು ಎಂದು ಮಾಜಿ ಎಂಎಲ್​ಸಿ ಐವನ್​ ಡಿಸೋಜಾ ಅವರು ಹೊರಡಿಸಿದ್ದ ಪ್ರಕಟಣೆಯೊಂದು ನಾಗರಿಕರ ಹಾದಿ ತಪ್ಪಿಸಿದೆ. ಇದರ ಪರಿಣಾಮ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ೧೦೦ ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ವಿಡಿಯೋ ಮೂಲಕ ಸ್ವತಃ‌ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರೂ ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ಲಾಕ್‌ಡೌನ್​​ಗೆ​ ಉತ್ತಮ ಬೆಂಬಲ ದೊರಕಿದ್ದ ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಜನರು ನಗರದೆಲ್ಲೆಡೆ ಸಂಚರಿಸುತ್ತಿದ್ದರು

ಬೆಳಗ್ಗೆ 10ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿಯವರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅವರು ಬರೆದುಕೊಂಡಿದ್ದರು.

ಹೀಗಾಗಿ ದಿನಸಿ ಸಾಮಗ್ರಿ, ತರಕಾರಿಗಳನ್ನು ಖರೀದಿಸಲು ವಾಹನಗಳಲ್ಲಿ ಕೆಲವರು ನಗರಕ್ಕೆ ಬಂದಿದ್ದಾರೆ. ಪೊಲೀಸರು ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶ ಪಡಿಸಿ ​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search