• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಾದಿ ತಪ್ಪಿಸಿದ ಐವನ್ ಡಿ ಸೋಜಾ ಪ್ರಕಟಣೆ, ರಸ್ತೆಗಿಳಿದ ವಾಹನಗಳು ಪೋಲೀಸ್ ವಶಕ್ಕೆ

Tulunadu News Posted On May 10, 2021
0


0
Shares
  • Share On Facebook
  • Tweet It

ಮಂಗಳೂರು : ಬೆಳಗ್ಗೆ 10 ಗಂಟೆಯವರೆಗೆ ವಾಹನ ಬಳಸಿ ಓಡಾಡಬಹುದು ಎಂದು ಮಾಜಿ ಎಂಎಲ್​ಸಿ ಐವನ್​ ಡಿಸೋಜಾ ಅವರು ಹೊರಡಿಸಿದ್ದ ಪ್ರಕಟಣೆಯೊಂದು ನಾಗರಿಕರ ಹಾದಿ ತಪ್ಪಿಸಿದೆ. ಇದರ ಪರಿಣಾಮ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ೧೦೦ ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ವಿಡಿಯೋ ಮೂಲಕ ಸ್ವತಃ‌ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರೂ ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ಲಾಕ್‌ಡೌನ್​​ಗೆ​ ಉತ್ತಮ ಬೆಂಬಲ ದೊರಕಿದ್ದ ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಜನರು ನಗರದೆಲ್ಲೆಡೆ ಸಂಚರಿಸುತ್ತಿದ್ದರು

ಬೆಳಗ್ಗೆ 10ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿಯವರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅವರು ಬರೆದುಕೊಂಡಿದ್ದರು.

ಹೀಗಾಗಿ ದಿನಸಿ ಸಾಮಗ್ರಿ, ತರಕಾರಿಗಳನ್ನು ಖರೀದಿಸಲು ವಾಹನಗಳಲ್ಲಿ ಕೆಲವರು ನಗರಕ್ಕೆ ಬಂದಿದ್ದಾರೆ. ಪೊಲೀಸರು ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶ ಪಡಿಸಿ ​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search