• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಾದಿ ತಪ್ಪಿಸಿದ ಐವನ್ ಡಿ ಸೋಜಾ ಪ್ರಕಟಣೆ, ರಸ್ತೆಗಿಳಿದ ವಾಹನಗಳು ಪೋಲೀಸ್ ವಶಕ್ಕೆ

Tulunadu News Posted On May 10, 2021


  • Share On Facebook
  • Tweet It

ಮಂಗಳೂರು : ಬೆಳಗ್ಗೆ 10 ಗಂಟೆಯವರೆಗೆ ವಾಹನ ಬಳಸಿ ಓಡಾಡಬಹುದು ಎಂದು ಮಾಜಿ ಎಂಎಲ್​ಸಿ ಐವನ್​ ಡಿಸೋಜಾ ಅವರು ಹೊರಡಿಸಿದ್ದ ಪ್ರಕಟಣೆಯೊಂದು ನಾಗರಿಕರ ಹಾದಿ ತಪ್ಪಿಸಿದೆ. ಇದರ ಪರಿಣಾಮ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ೧೦೦ ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿನ್ನೆ ವಿಡಿಯೋ ಮೂಲಕ ಸ್ವತಃ‌ ಪೊಲೀಸ್ ಕಮಿಷನರ್ ಅವರೇ ಅನಗತ್ಯ ಯಾರೂ ಸಂಚಾರ ಮಾಡಬಾರದು. ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ಆದೇಶಿಸಿದ್ದರು. ಆದರೆ ಲಾಕ್‌ಡೌನ್​​ಗೆ​ ಉತ್ತಮ ಬೆಂಬಲ ದೊರಕಿದ್ದ ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಜನರು ನಗರದೆಲ್ಲೆಡೆ ಸಂಚರಿಸುತ್ತಿದ್ದರು

ಬೆಳಗ್ಗೆ 10ಗಂಟೆಯವರೆಗೆ ವಾಹನ ಉಪಯೋಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ತಾನು ಜಿಲ್ಲಾಧಿಕಾರಿಯವರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿರುವೆ ಎಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅವರು ಬರೆದುಕೊಂಡಿದ್ದರು.

ಹೀಗಾಗಿ ದಿನಸಿ ಸಾಮಗ್ರಿ, ತರಕಾರಿಗಳನ್ನು ಖರೀದಿಸಲು ವಾಹನಗಳಲ್ಲಿ ಕೆಲವರು ನಗರಕ್ಕೆ ಬಂದಿದ್ದಾರೆ. ಪೊಲೀಸರು ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶ ಪಡಿಸಿ ​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search