• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಣಚೂರು ಮೆಡಿಕಲ್ ಕಾಲೇಜಿಗೆ ಮೂಲ್ಕಿಯಿಂದ ಮಹಿಳೆಯರ ರವಾನೆ ಸ್ಥಳೀಯರ ತಡೆ, ಹೊರಬಿದ್ದ ಬೆಡ್ ಭರ್ತಿ ದಂದೆ

Tulunadu News Posted On June 30, 2021
0


0
Shares
  • Share On Facebook
  • Tweet It

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜ್ ಗೆಂದು ಮುಲ್ಕಿ ಬಳಿಯ ಕಾರ್ನಾಡು ಲಿಂಗಪ್ಪಯ್ಯಕಾಡು ಎಂಬಲ್ಲಿಂದ ಐವತ್ತಕ್ಕೂ ಹೆಚ್ಚು ಮಹಿಳೆಯರನ್ನು ಬಸ್ಸಿನಲ್ಲಿ ತುಂಬಿಸಿಕೊಂಡು ತೆರಳುತ್ತಿದ್ದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಕಣಚೂರು ಮೆಡಿಕಲ್ ಕಾಲೇಜಿನ ಬಸ್ಸಿನಲ್ಲಿ ಐವತ್ತು ಕ್ಕೂ ಹೆಚ್ಚು ಮಹಿಳೆಯರನ್ನು ತುಂಬಿಸಿ ಒಯ್ಯುತ್ತಿರುವುದನ್ನು ತಿಳಿದು ಸ್ಥಳೀಯರು ಆಕೆ ಆಕ್ಷೇಪಿಸಿದ್ದಾರೆ , ಬಸ್ಸಿನಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಚಾಲಕ ಮತ್ತು ಓರ್ವ ನರ್ಸ್ ಮಾತ್ರ ಇದ್ದು ಅವರು ಕೂರೋಣ ಲಸಿಕೆ ಹಾಕಿಸುವುದಕ್ಕಾಗಿ ಒಯ್ಯುತ್ತಿರುವುದಾಗಿ ತಿಳಿಸಿದ್ದಾರೆ .

ಕಣಚೂರು ಮೆಡಿಕಲ್ ಕಾಲೇಜಿನ ಮ್ಯಾನೇಜರ್ ನವಾಜ್ ಇವರನ್ನು ಕರೆತರುವಂತೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ .ಆದರೆ ರಾತ್ರಿ ವೇಳೆಗೆ ಇಷ್ಟೊಂದು ಮಂದಿಯನ್ನು ಲಸಿಕೆ ಹಾಕಿಸಲು ಒಯ್ಯುವ ಅಗತ್ಯವಿಲ್ಲ ಅದರಲ್ಲೂ ಮೂಲ್ಕಿಯ ಜನರನ್ನು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯುವಾಗ ಏನಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ . ಬಳಿಕ ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಲಸಿಕೆಯ ನೆಪದಲ್ಲಿ ಯಾವುದೇ ಅಂತರ ಇಲ್ಲದೆ ಲೊಕ್ಡೌನ್ ಸಂದರ್ಭದಲ್ಲಿ ಜನರನ್ನ ಒಯ್ಯುತ್ತಿದ್ದಾರೆ ಎಂದು ದೂರಿದ್ದಾರೆ . ಈ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಸೃಷ್ಟಿಯಾಗಿದ್ದು ಮುಲ್ಕಿ ಪೊಲೀಸರಿಗೆ ಮಾಹಿತಿ ದೊರೆತು ಸ್ಥಳಕ್ಕೆ ತೆರಳಿದ್ದಾರೆ ಕಾಲೇಜಿನ ಪರವಾಗಿ ಬಸ್ಸಿನಲ್ಲಿ ಇಬ್ಬರು ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಜನರನ್ನು ಬಸ್ಸಿನಿಂದ ಇರಿಸಲಾಗಿದೆ ಈ ಬಗ್ಗೆ ನಿಯಮ ಉಲ್ಲಂಘನೆ ಮತ್ತು ಲಸಿಕೆ ನೆಪದಲ್ಲಿ ಜನರನ್ನು ಇನ್ನಿತರ ಉದ್ದೇಶಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ .

ಮೆಡಿಕಲ್ ಕಾಲೇಜುಗಳಿಗೆ ಆಯಾ ಸಂದರ್ಭಗಳಲ್ಲಿ ಉನ್ನತಮಟ್ಟದ ಅಧಿಕಾರಿಗಳ ಪರಿಶೀಲನೆ ಬರುತ್ತಾರೆ ಈ ವೇಳೆ ಬೆಡ್ ನಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದ್ದರೆ ಗ್ರೇಡ್ , ನಾಕ್ ಶ್ರೇಯಾಂಕ ಲಭಿಸುವುದಿಲ್ಲ , ಅಲ್ಲದೆ ರೋಗಿಗಳ ಇಲ್ಲದಿದ್ದರೆ ಮೆಡಿಕಲ್ ಕಾಲೇಜಿಗೆ ಆಸ್ಪತ್ರೆ ನಡೆಸುವ ಅರ್ಹತೆ ತಪ್ಪಿಹೋಗುವ ಸಾಧ್ಯತೆ ಇರುತ್ತದೆ ಇದಕ್ಕಾಗಿ ಕೆಲವು ಮೆಡಿಕಲ್ ಕಾಲೇಜುಗಳು ಇಲಾಖಾಧಿಕಾರಿಗಳು ಪರಿಶೀಲನೆಗೆ ಬರುವ ಸಂದರ್ಭದಲ್ಲಿ ಬೆಡ್ ಭರ್ತಿಯಾಗಿರುವುದನ್ನು ತೋರಿಸಲು ಕೃತಕವಾಗಿ ಬೆಡ್ ತುಂಬುವ ಕೆಲಸ ಮಾಡುತ್ತಾರೆಂಬ ಆರೋಪಗಳಿವೆ . ಕಣಚೂರು ಮೆಡಿಕಲ್ ಕಾಲೇಜಿಗೆ ಈ ರೀತಿ ಕೂಲಿಯಾಳು ಮಹಿಳೆಯರನ್ನು ಒಟ್ಟು ಸೇರಿಸಿ ಕೊಂಡೊಯ್ಯುತ್ತಿದ್ದ ಹುನ್ನಾರದ ಹಿಂದೆ ಇದೇ ರೀತಿಯ ಬೆಡ್ ಭರ್ತಿ ಮಾಡುವ ಉದ್ದೇಶ ಇತ್ತೇ ಎನ್ನುವ ಸಂಶಯ ಎದ್ದಿದೆ . ಲಸಿಕೆ ನೀಡುವ ನೆಪದಲ್ಲಿ ಮಹಿಳೆಯರನ್ನು ಒಯ್ದು ಬೆಡ್ಡಿನಲ್ಲಿ ಮಲಗಿಸಿ ಇನ್ಸ್ ಪೆಕ್ಷನ್ ಮಾಡುವ ಅಧಿಕಾರಿಗಳ ಕಣ್ಣಿಗೆ ಮಣ್ಣೆರೆಚುವ ಹಿಡನ್ ಅಜೆಂಡಾ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search