• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಣಚೂರು ಮೆಡಿಕಲ್ ಕಾಲೇಜಿಗೆ ಮೂಲ್ಕಿಯಿಂದ ಮಹಿಳೆಯರ ರವಾನೆ ಸ್ಥಳೀಯರ ತಡೆ, ಹೊರಬಿದ್ದ ಬೆಡ್ ಭರ್ತಿ ದಂದೆ

Tulunadu News Posted On June 30, 2021
0


0
Shares
  • Share On Facebook
  • Tweet It

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜ್ ಗೆಂದು ಮುಲ್ಕಿ ಬಳಿಯ ಕಾರ್ನಾಡು ಲಿಂಗಪ್ಪಯ್ಯಕಾಡು ಎಂಬಲ್ಲಿಂದ ಐವತ್ತಕ್ಕೂ ಹೆಚ್ಚು ಮಹಿಳೆಯರನ್ನು ಬಸ್ಸಿನಲ್ಲಿ ತುಂಬಿಸಿಕೊಂಡು ತೆರಳುತ್ತಿದ್ದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಕಣಚೂರು ಮೆಡಿಕಲ್ ಕಾಲೇಜಿನ ಬಸ್ಸಿನಲ್ಲಿ ಐವತ್ತು ಕ್ಕೂ ಹೆಚ್ಚು ಮಹಿಳೆಯರನ್ನು ತುಂಬಿಸಿ ಒಯ್ಯುತ್ತಿರುವುದನ್ನು ತಿಳಿದು ಸ್ಥಳೀಯರು ಆಕೆ ಆಕ್ಷೇಪಿಸಿದ್ದಾರೆ , ಬಸ್ಸಿನಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಚಾಲಕ ಮತ್ತು ಓರ್ವ ನರ್ಸ್ ಮಾತ್ರ ಇದ್ದು ಅವರು ಕೂರೋಣ ಲಸಿಕೆ ಹಾಕಿಸುವುದಕ್ಕಾಗಿ ಒಯ್ಯುತ್ತಿರುವುದಾಗಿ ತಿಳಿಸಿದ್ದಾರೆ .

ಕಣಚೂರು ಮೆಡಿಕಲ್ ಕಾಲೇಜಿನ ಮ್ಯಾನೇಜರ್ ನವಾಜ್ ಇವರನ್ನು ಕರೆತರುವಂತೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ .ಆದರೆ ರಾತ್ರಿ ವೇಳೆಗೆ ಇಷ್ಟೊಂದು ಮಂದಿಯನ್ನು ಲಸಿಕೆ ಹಾಕಿಸಲು ಒಯ್ಯುವ ಅಗತ್ಯವಿಲ್ಲ ಅದರಲ್ಲೂ ಮೂಲ್ಕಿಯ ಜನರನ್ನು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯುವಾಗ ಏನಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ . ಬಳಿಕ ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಲಸಿಕೆಯ ನೆಪದಲ್ಲಿ ಯಾವುದೇ ಅಂತರ ಇಲ್ಲದೆ ಲೊಕ್ಡೌನ್ ಸಂದರ್ಭದಲ್ಲಿ ಜನರನ್ನ ಒಯ್ಯುತ್ತಿದ್ದಾರೆ ಎಂದು ದೂರಿದ್ದಾರೆ . ಈ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಸೃಷ್ಟಿಯಾಗಿದ್ದು ಮುಲ್ಕಿ ಪೊಲೀಸರಿಗೆ ಮಾಹಿತಿ ದೊರೆತು ಸ್ಥಳಕ್ಕೆ ತೆರಳಿದ್ದಾರೆ ಕಾಲೇಜಿನ ಪರವಾಗಿ ಬಸ್ಸಿನಲ್ಲಿ ಇಬ್ಬರು ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಜನರನ್ನು ಬಸ್ಸಿನಿಂದ ಇರಿಸಲಾಗಿದೆ ಈ ಬಗ್ಗೆ ನಿಯಮ ಉಲ್ಲಂಘನೆ ಮತ್ತು ಲಸಿಕೆ ನೆಪದಲ್ಲಿ ಜನರನ್ನು ಇನ್ನಿತರ ಉದ್ದೇಶಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ .

ಮೆಡಿಕಲ್ ಕಾಲೇಜುಗಳಿಗೆ ಆಯಾ ಸಂದರ್ಭಗಳಲ್ಲಿ ಉನ್ನತಮಟ್ಟದ ಅಧಿಕಾರಿಗಳ ಪರಿಶೀಲನೆ ಬರುತ್ತಾರೆ ಈ ವೇಳೆ ಬೆಡ್ ನಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದ್ದರೆ ಗ್ರೇಡ್ , ನಾಕ್ ಶ್ರೇಯಾಂಕ ಲಭಿಸುವುದಿಲ್ಲ , ಅಲ್ಲದೆ ರೋಗಿಗಳ ಇಲ್ಲದಿದ್ದರೆ ಮೆಡಿಕಲ್ ಕಾಲೇಜಿಗೆ ಆಸ್ಪತ್ರೆ ನಡೆಸುವ ಅರ್ಹತೆ ತಪ್ಪಿಹೋಗುವ ಸಾಧ್ಯತೆ ಇರುತ್ತದೆ ಇದಕ್ಕಾಗಿ ಕೆಲವು ಮೆಡಿಕಲ್ ಕಾಲೇಜುಗಳು ಇಲಾಖಾಧಿಕಾರಿಗಳು ಪರಿಶೀಲನೆಗೆ ಬರುವ ಸಂದರ್ಭದಲ್ಲಿ ಬೆಡ್ ಭರ್ತಿಯಾಗಿರುವುದನ್ನು ತೋರಿಸಲು ಕೃತಕವಾಗಿ ಬೆಡ್ ತುಂಬುವ ಕೆಲಸ ಮಾಡುತ್ತಾರೆಂಬ ಆರೋಪಗಳಿವೆ . ಕಣಚೂರು ಮೆಡಿಕಲ್ ಕಾಲೇಜಿಗೆ ಈ ರೀತಿ ಕೂಲಿಯಾಳು ಮಹಿಳೆಯರನ್ನು ಒಟ್ಟು ಸೇರಿಸಿ ಕೊಂಡೊಯ್ಯುತ್ತಿದ್ದ ಹುನ್ನಾರದ ಹಿಂದೆ ಇದೇ ರೀತಿಯ ಬೆಡ್ ಭರ್ತಿ ಮಾಡುವ ಉದ್ದೇಶ ಇತ್ತೇ ಎನ್ನುವ ಸಂಶಯ ಎದ್ದಿದೆ . ಲಸಿಕೆ ನೀಡುವ ನೆಪದಲ್ಲಿ ಮಹಿಳೆಯರನ್ನು ಒಯ್ದು ಬೆಡ್ಡಿನಲ್ಲಿ ಮಲಗಿಸಿ ಇನ್ಸ್ ಪೆಕ್ಷನ್ ಮಾಡುವ ಅಧಿಕಾರಿಗಳ ಕಣ್ಣಿಗೆ ಮಣ್ಣೆರೆಚುವ ಹಿಡನ್ ಅಜೆಂಡಾ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search