• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಣಚೂರು ಮೆಡಿಕಲ್ ಕಾಲೇಜಿಗೆ ಮೂಲ್ಕಿಯಿಂದ ಮಹಿಳೆಯರ ರವಾನೆ ಸ್ಥಳೀಯರ ತಡೆ, ಹೊರಬಿದ್ದ ಬೆಡ್ ಭರ್ತಿ ದಂದೆ

Tulunadu News Posted On June 30, 2021
0


0
Shares
  • Share On Facebook
  • Tweet It

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜ್ ಗೆಂದು ಮುಲ್ಕಿ ಬಳಿಯ ಕಾರ್ನಾಡು ಲಿಂಗಪ್ಪಯ್ಯಕಾಡು ಎಂಬಲ್ಲಿಂದ ಐವತ್ತಕ್ಕೂ ಹೆಚ್ಚು ಮಹಿಳೆಯರನ್ನು ಬಸ್ಸಿನಲ್ಲಿ ತುಂಬಿಸಿಕೊಂಡು ತೆರಳುತ್ತಿದ್ದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಕಣಚೂರು ಮೆಡಿಕಲ್ ಕಾಲೇಜಿನ ಬಸ್ಸಿನಲ್ಲಿ ಐವತ್ತು ಕ್ಕೂ ಹೆಚ್ಚು ಮಹಿಳೆಯರನ್ನು ತುಂಬಿಸಿ ಒಯ್ಯುತ್ತಿರುವುದನ್ನು ತಿಳಿದು ಸ್ಥಳೀಯರು ಆಕೆ ಆಕ್ಷೇಪಿಸಿದ್ದಾರೆ , ಬಸ್ಸಿನಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಚಾಲಕ ಮತ್ತು ಓರ್ವ ನರ್ಸ್ ಮಾತ್ರ ಇದ್ದು ಅವರು ಕೂರೋಣ ಲಸಿಕೆ ಹಾಕಿಸುವುದಕ್ಕಾಗಿ ಒಯ್ಯುತ್ತಿರುವುದಾಗಿ ತಿಳಿಸಿದ್ದಾರೆ .

ಕಣಚೂರು ಮೆಡಿಕಲ್ ಕಾಲೇಜಿನ ಮ್ಯಾನೇಜರ್ ನವಾಜ್ ಇವರನ್ನು ಕರೆತರುವಂತೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ .ಆದರೆ ರಾತ್ರಿ ವೇಳೆಗೆ ಇಷ್ಟೊಂದು ಮಂದಿಯನ್ನು ಲಸಿಕೆ ಹಾಕಿಸಲು ಒಯ್ಯುವ ಅಗತ್ಯವಿಲ್ಲ ಅದರಲ್ಲೂ ಮೂಲ್ಕಿಯ ಜನರನ್ನು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯುವಾಗ ಏನಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ . ಬಳಿಕ ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಲಸಿಕೆಯ ನೆಪದಲ್ಲಿ ಯಾವುದೇ ಅಂತರ ಇಲ್ಲದೆ ಲೊಕ್ಡೌನ್ ಸಂದರ್ಭದಲ್ಲಿ ಜನರನ್ನ ಒಯ್ಯುತ್ತಿದ್ದಾರೆ ಎಂದು ದೂರಿದ್ದಾರೆ . ಈ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಸೃಷ್ಟಿಯಾಗಿದ್ದು ಮುಲ್ಕಿ ಪೊಲೀಸರಿಗೆ ಮಾಹಿತಿ ದೊರೆತು ಸ್ಥಳಕ್ಕೆ ತೆರಳಿದ್ದಾರೆ ಕಾಲೇಜಿನ ಪರವಾಗಿ ಬಸ್ಸಿನಲ್ಲಿ ಇಬ್ಬರು ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಜನರನ್ನು ಬಸ್ಸಿನಿಂದ ಇರಿಸಲಾಗಿದೆ ಈ ಬಗ್ಗೆ ನಿಯಮ ಉಲ್ಲಂಘನೆ ಮತ್ತು ಲಸಿಕೆ ನೆಪದಲ್ಲಿ ಜನರನ್ನು ಇನ್ನಿತರ ಉದ್ದೇಶಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ .

ಮೆಡಿಕಲ್ ಕಾಲೇಜುಗಳಿಗೆ ಆಯಾ ಸಂದರ್ಭಗಳಲ್ಲಿ ಉನ್ನತಮಟ್ಟದ ಅಧಿಕಾರಿಗಳ ಪರಿಶೀಲನೆ ಬರುತ್ತಾರೆ ಈ ವೇಳೆ ಬೆಡ್ ನಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದ್ದರೆ ಗ್ರೇಡ್ , ನಾಕ್ ಶ್ರೇಯಾಂಕ ಲಭಿಸುವುದಿಲ್ಲ , ಅಲ್ಲದೆ ರೋಗಿಗಳ ಇಲ್ಲದಿದ್ದರೆ ಮೆಡಿಕಲ್ ಕಾಲೇಜಿಗೆ ಆಸ್ಪತ್ರೆ ನಡೆಸುವ ಅರ್ಹತೆ ತಪ್ಪಿಹೋಗುವ ಸಾಧ್ಯತೆ ಇರುತ್ತದೆ ಇದಕ್ಕಾಗಿ ಕೆಲವು ಮೆಡಿಕಲ್ ಕಾಲೇಜುಗಳು ಇಲಾಖಾಧಿಕಾರಿಗಳು ಪರಿಶೀಲನೆಗೆ ಬರುವ ಸಂದರ್ಭದಲ್ಲಿ ಬೆಡ್ ಭರ್ತಿಯಾಗಿರುವುದನ್ನು ತೋರಿಸಲು ಕೃತಕವಾಗಿ ಬೆಡ್ ತುಂಬುವ ಕೆಲಸ ಮಾಡುತ್ತಾರೆಂಬ ಆರೋಪಗಳಿವೆ . ಕಣಚೂರು ಮೆಡಿಕಲ್ ಕಾಲೇಜಿಗೆ ಈ ರೀತಿ ಕೂಲಿಯಾಳು ಮಹಿಳೆಯರನ್ನು ಒಟ್ಟು ಸೇರಿಸಿ ಕೊಂಡೊಯ್ಯುತ್ತಿದ್ದ ಹುನ್ನಾರದ ಹಿಂದೆ ಇದೇ ರೀತಿಯ ಬೆಡ್ ಭರ್ತಿ ಮಾಡುವ ಉದ್ದೇಶ ಇತ್ತೇ ಎನ್ನುವ ಸಂಶಯ ಎದ್ದಿದೆ . ಲಸಿಕೆ ನೀಡುವ ನೆಪದಲ್ಲಿ ಮಹಿಳೆಯರನ್ನು ಒಯ್ದು ಬೆಡ್ಡಿನಲ್ಲಿ ಮಲಗಿಸಿ ಇನ್ಸ್ ಪೆಕ್ಷನ್ ಮಾಡುವ ಅಧಿಕಾರಿಗಳ ಕಣ್ಣಿಗೆ ಮಣ್ಣೆರೆಚುವ ಹಿಡನ್ ಅಜೆಂಡಾ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search