• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉರ್ವ ಠಾಣೆಯಲ್ಲಿ ದುರ್ನಡತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಇಬ್ಬರ ಬಂಧನ!

Tulunadu News Posted On July 14, 2021
0


0
Shares
  • Share On Facebook
  • Tweet It

ಮಂಗಳೂರು: ಉರ್ವ ಠಾಣೆಗೆ ಬಂದಿದ್ದ ವ್ಯಕ್ತಿಗಳಿಬ್ಬರು ಪೊಲೀಸರ ಜತೆ ದುರ್ನಡತೆ ತೋರಿದ ಘಟನೆ ನಡೆದಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ .ನೋಯೆಲ್ ಸಿಕ್ವೇರಾ ಮತ್ತು ಜಾನ್ ಸಿಕ್ವೇರ ಬಂಧಿತರು ನೋಯೆಲ್ ಸಿಕ್ವೇರಾ ಉರ್ವ ಸ್ಟೋರ್ ಬಳಿಯ ಚಿಲಿಂಬಿ ನಿವಾಸಿಯಾಗಿದ್ದು ಕಳೆದ ಮೇ ತಿಂಗಳಲ್ಲಿ ತನ್ನ ಅಪಾರ್ಟ್ಮೆಂಟ್ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರೂ . ಅಪಾರ್ಟ್ ಮೆಂಟ್ ಅಸೋಸಿಯೇಷನ್ ಕಡೆಯಿಂದ ನೀರು ಕಡಿತ ಮಾಡಿದ ವಿಚಾರದಲ್ಲಿ ಜಟಾಪಟಿ ನಡೆದು ಬಳಿಕ ಎರಡೂ ಕಡೆಯಿಂದ ದೂರು ಪ್ರತಿ ದೂರು ಸಲ್ಲಿಕೆಯಾಗಿತ್ತು .ಇದೀಗ 2ತಿಂಗಳ ನಂತರ ಅಪಾರ್ಟ್ ಮೆಂಟ್ ಜಟಾಪಟಿ ವಿಚಾರ ಇತ್ಯರ್ಥ ಆಗಿವೆ ಎನ್ನಲಾಗುತ್ತಿದ್ದು ಇಂದು ನೋಯೆಲ್ ಸಿಕ್ವೇರಾ ಉರ್ವಾಠಾಣೆಯ ದೂರು ಹಿಂಪಡೆಯುವುದಕ್ಕಾಗಿ ತೆರಳಿದ್ದರು ಈ ವೇಳೆ ಸಾಮಾಜಿಕ ಕಾರ್ಯಕರ್ತರೆಂದು ಗುರುತಿಸಿಕೊಂಡಿರುವ ಜಾನ್ ಸೆಕ್ವೇರಾ ಕೂಡ ಠಾಣೆಗೆ ತೆರಳಿದ್ದರು ಎನ್ನಲಾಗಿದೆ . ಠಾಣೆಯಲ್ಲಿ ಇದೇ ವಿಚಾರದಲ್ಲಿ ಮಾತುಕತೆ ನಡೆದಿದ್ದು ಪೋಲಿಸರ ಜೊತೆ ಮಾತನಾಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾನೆ , ಇದನ್ನು ಗಮನಿಸಿದ ಪೊಲೀಸರು ಮೊಬೈಲ್ ಕಿತ್ತುಕೊಂಡಿದ್ದಾರೆ .ಈ ವೇಳೆ ಜಾನ್ ಸಿಕ್ವೇರ ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ ಪೊಲೀಸರು ಹೇಳುವ ಪ್ರಕಾರ ಜಾನ್ ಮತ್ತು ನೋಯಲ್ ಇಬ್ಬರು ಅಲ್ಲಿನ ಸಿಬ್ಬಂದಿ ಜೊತೆ ದುರ್ನಡತೆ ತೋರಿದ್ದಾರೆ ಈ ವೇಳೆ ಇಬ್ಬರು ಮಹಿಳಾ ಸಿಬ್ಬಂದಿ ಪೂಜಾ ಹಿರೇಮಠ ಮತ್ತು ಇನ್ನೊಬ್ಬ ಹೆಡ್ಕಾನ್ಸ್ಟೇಬಲ್ ನಾರಾಯಣ ಎಂಬುವರಿಗೆ ಗಾಯಗಳಾಗಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಘಟನೆಗೆ ಸಂಬಂಧಿಸಿ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ನೋಯೆಲ್ ಮತ್ತು ಜಾನ್ ಸೆಕ್ವೇರಾರನ್ನು ಬಂಧಿಸಿದ್ದಾರೆ ಹೀಗಾಗಿ ಕೇಸ್ ಹಿಂಪಡೆಯಲು ಹೋದವರು ಜೈಲು ಸೇರುವಂತಾಗಿದೆ

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search