• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Tulunadu News Posted On July 19, 2021


  • Share On Facebook
  • Tweet It

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ
ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ ಹಿಂದು ಪತ್ರಿಕೆಯ ಮಂಗಳೂರು ಬ್ಯುರೋ ಮುಖ್ಯಸ್ಥರಾದ ರವಿಪ್ರಸಾದ್ ಕಮಿಲ,ಬೆಸೆಂಟ್ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ.ಕಿಕ್ಕೇರಿ ನೇತೃತ್ವದ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದೆ.

ಜುಲೈ 22ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಶಸ್ತಿ ಪ್ರದಾನ ಮಾಡಲಿರುವರು

ಪರಿಚಯ
ಮೂಲತಃ ಉಡುಪಿ ಜಿಲ್ಲೆಯವರಾದ ಸಂದೀಪ್ ವಾಗ್ಲೆ ಕಳೆದ 17 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕನ್ನಡಪ್ರಭದಲ್ಲಿ ಹಿರಿಯ ವರದಿಗಾರರಾಗಿರುವ ಅವರು ಬಿಎಸ್ಸಿ ಪದವಿ , ಪತ್ರಿಕೋದ್ಯಮದಲ್ಲಿ ಎಂ.ಎ. ಹಾಗೂ ಡಾಕ್ಟರೇಟ್ ಪದವಿಯನ್ನು ಮಂಗಳೂರು ವಿವಿಯಿಂದ ಪಡೆದಿದ್ದಾರೆ. ಈ ಹಿಂದೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

  • Share On Facebook
  • Tweet It


- Advertisement -


Trending Now
ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
Tulunadu News August 6, 2022
ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
Tulunadu News August 5, 2022
Leave A Reply

  • Recent Posts

    • ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!
    • ಬಿಜೆಪಿ ಕೆಡರ್ ಆಧಾರಿತ ಪಕ್ಷ, ಕಾರ್ಯಕರ್ತರು ನಾಯಕರನ್ನು ಪ್ರಶ್ನಿಸಬಲ್ಲರು!
    • ರಾಜೀನಾಮೆ ಕೊಡುತ್ತಿರುವವರು ಪಲಾಯನವಾದ ಮಾಡುತ್ತಿದ್ದಾರಾ?
    • ಪ್ರವೀಣ್ ಹತ್ಯೆ ಬಿಜೆಪಿ ನಾಯಕರಿಗೂ, ಕಾರ್ಯಕರ್ತರಿಗೂ ಮುಂದಿನ ದಾರಿ ತೋರಿಸಿದೆ!!
    • ರಮೇಶ್ ಮಾತಿನಿಂದಲಾದರೂ ಹಿರಿಯ ಕಾಂಗ್ರೆಸ್ಸಿಗರು ಮೈಚಳಿ ಬಿಡುತ್ತಾರಾ?
    • ಸೋನಿಯಾಗೆ ನೋ'ಬೆಲ್' ಕೊಡಿಸಲು ಖಾದರ್ ತಯಾರ್!
  • Popular Posts

    • 1
      ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • 2
      ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • 3
      ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • 4
      ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • 5
      ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search