• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೆ ಮಾಡಿದ ತಪ್ಪು ಮತ್ತೊಮ್ಮೆ ಮಾಡದಿರೋಣ.

TNN Correspondent Posted On August 19, 2017
0


0
Shares
  • Share On Facebook
  • Tweet It

ಭಾರತ ಮತ್ತು ಚೀನಾ ನಡುವೆ ಯುಧ್ಧದ ಕಾರ್ಮೋಡ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಮತ್ತು ಚೀನಾದ ಕುಚೇಷ್ಠೆ ವಿಪರೀತ ಮಟ್ಟಕ್ಕೆ ಏರಿರುವ ಈ ಸಂದಿಗ್ಧ ಸಮಯದಲ್ಲಿ ಪ್ರತಿಯೊಬ್ಬ ದೇಶಭಕ್ತರ ಬಾಯಲ್ಲಿ ಚೀನಾ ವಸ್ತುಗಳೆಲ್ಲವನ್ನು ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಕೇಂದ್ರ ಸರಕಾರವೇ ಚೀನಾ ವಸ್ತುಗಳನ್ನು ಆಮದು ಮಾಡಿಕೊಳ್ಳಬಾರದು ಎಂದು ಕೆಲವರು ಹೇಳಿದರೆ ಇನ್ನು ಕೆಲವರು ಬ್ಯಾನ್ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳುತ್ತಾರೆ. ಜಾಗತಿಕ ಒಪ್ಪಂದಗಳ ಕೆಲವು ನಿಯಮದಂತೆ ಒಪ್ಪಂದ ಮಾಡಿಕೊಂಡ ರಾಷ್ಟ್ರಗಳು ಪರಸ್ಪರ ತಮ್ಮ ದೇಶದ ವಸ್ತುಗಳನ್ನು ಇತರ ದೇಶದಲ್ಲಿ ಮಾರಾಟ ಮಾಡಬಾರದು ಎಂದು ಹೇಳುವಂತಿಲ್ಲ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರವನ್ನು ದೂಷಿಸಿ ಪ್ರಯೋಜನವಿಲ್ಲ. ಇನ್ನು ಬಹುತೇಕ ಮಂದಿ ಚೀನಾ ವಸ್ತುಗಳನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಬಳಸುತ್ತಿದ್ದಾರೆ ಆದ್ದರಿಂದ ಸಂಪೂರ್ಣವಾಗಿ ಬ್ಯಾನ್ ಮಾಡಲು ಸಾಧ್ಯವಿದೆಯಾ ಎಂಬ ಪ್ರಶ್ನೆ ಮೂಡುತ್ತದೆ.

ಪ್ರಾಮಾಣಿಕವಾಗಿ ಹೇಳುವುದಿದ್ದರೆ ದೇಶಭಕ್ತರೆನಿಸಿಕೊಳ್ಳುವ ನಾವೇ ಕೆಲವರು ಮೊಬೈಲ್, ಇಲೆಕ್ಟ್ರಾನಿಕ್ ವಸ್ತುಗಳು, ಮಕ್ಕಳ ಆಟ ಸಾಮಾಗ್ರಿಗಳು, ಪಟಾಕಿ,ಎಲ್ ಇ ಡಿ ಬಲ್ಬ್, ಬ್ಯಾಟರಿ,ಪೆನ್ನು ಇತ್ಯಾದಿಗಳನ್ನು ಬಳುಸುತ್ತಾ ಇದ್ದಿರಬಹುದು. ನಾವೇ ಬಳಸುತ್ತಿರುವಾಗ ಮತ್ತೊಬ್ಬರಿಗೆ ಬಳಸಬೇಡಿ ಎಂದು ಹೇಗೆ ಹೇಳುವುದು ಎಂಬ ಆಲೋಚನೆ ಹಲವರಿಗೆ ಕಾಡುತ್ತಿರಲೂ ಬಹುದು. ಅದಕ್ಕೊಸ್ಕರನೇ ಹಿಂದೆ ನಾವು ತಪ್ಪು ಮಾಡಿರಬಹುದು ಮುಂದೆ ಅದೇ ತಪ್ಪನ್ನು ಮಾಡದಿರೋಣ, ಇತರರಿಗೆ ಮಾಡಲು ಬಿಡದಿರೋಣ ಎಂಬ ಸಂದೇಶ ಸಾರಬೇಕಿದೆ. ಚೀನಾ ಹಿಂದಿನಿಂದಲೂ ನಮ್ಮ ಬದ್ದ ಶತ್ರುದೇಶವಾದ ಪಾಕಿಸ್ಥಾನಕ್ಕೆ ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿಗಳ ಮೂಲಕ ಬೆಂಬಲ ಕೊಡುತ್ತಾ ಬಂದಿದೆ. ಈಗ ನೇರವಾಗಿ ಭಾರತಕ್ಕೆ ಗಡಿ ವಿಚಾರದಲ್ಲಿ ಹಾಗೂ ನಮ್ಮ ವೀರ ಯೋಧರ ಸ್ವಾಭಿಮಾನಕ್ಕೇ ಸವಾಲು ಹಾಕಿದೆ.ಒಂದು ಕಡೆ ನಮ್ಮ ಸೈನಿಕರು ಯುಧ್ದಕ್ಕೆ ತಯಾರಾದಂತೆ ಮತ್ತೊಂದು ಕಡೆ ನಾವೆಲ್ಲ ಭಾರತೀಯರು ಚೈನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಚೀನಾದೊಂದಿಗೆ ಆರ್ಥಿಕ ಹೋರಾಟಕ್ಕೆ ತಯಾರಾಗಬೇಕಿದೆ.

ಯುದ್ಧವಂತೂ ನಾವು ಯಾರೂ ಬಯಸುವುದಿಲ್ಲ ಆದರೆ ಆರ್ಥಿಕವಾಗಿ ಚೀನಾವನ್ನು ನೆಲಕಚ್ಚುವಂತೆ ಮಾಡಿ ಯುಧ್ಧ ಗೆಲ್ಲುವ ಪರ್ಯಾಯ ಮಾರ್ಗದ  ಸಾಮರ್ಥ್ಯವಂತೂ ನಮ್ಮಲ್ಲಿದೆ. ಪ್ರತಿಯೊಬ್ಬರಲ್ಲಿ ಈ ಬಗ್ಗೆ ಜಾಗ್ರತಿ ಮೂಡಿದರೆ ಅಸಾಧ್ಯವಾದದ್ದು ಯಾವುದೂ ಇಲ್ಲ.ನಾನೂ ಒಬ್ಬ ಚೀನಾದೊಂದಿಗೆ ಹೋರಾಡುವ ಯೋಧ ಎಂದು ಪ್ರತಿಯೊಬ್ಬ ಭಾವಿಸಿದರೆ ಸೈನಿಕರ ಪ್ರಾಣವೂ ಉಳಿಯುತ್ತದೆ, ಯುದ್ಧವನ್ನೂ ಗೆಲ್ಲುತ್ತೇವೆ. ನಮ್ಮ ಸುತ್ತಮುತ್ತಲಿನ ಅಂಗಡಿಗಳಲ್ಲಿ ಚೀನಾವಸ್ತುಗಳನ್ನು ಮಾರಾಟಮಾಡದಂತೆ ಜಾಗ್ರತಿ ಮೂಡಿಸೋಣ,ಬಂಧುಗಳಲ್ಲಿ,ಮಿತ್ರರಲ್ಲಿ ಚೀನಾವಸ್ತುಗಳನ್ನು ಖರೀದಿಸದಂತೆ ವಿನಂತಿಸೋಣ.ಈ ಕ್ಷಣದಿಂದಲೇ ಸನ್ನಧ್ಧರಾಗಿ.ಜೈ ಹಿಂದ್.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search