• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಹತ್ತು ಬಲ್ಬ್ 1 ದಿನ ಉರಿಸಲಾಗದವರು ಸ್ಮಾರ್ಟ್ ಸಿಟಿ ಮಾಡುವುದು ಹೌದಾ?

Hanumantha Kamath Posted On October 11, 2021
0


0
Shares
  • Share On Facebook
  • Tweet It

ನಾನು ಕಳೆದ ವಾರ ಮಂಗಳೂರಿನ ರಥಬೀದಿಯಲ್ಲಿ ದೇವಸ್ಥಾನದ ಎದುರಿಗೆ ಹಾಕಿರುವ ಸ್ಮಾರ್ಟ್ ಸಿಟಿಯ ಎರಡು ಲೈಟ್ ಕಂಬಗಳ ಬರೆದಿದ್ದೆ. ಲೈಟ್ ಕಂಬಗಳು ಕೇವಲ ಶೋಪೀಸ್ ಆಗಿ ಉಳಿದಿವೆ. ಅದು ರಾತ್ರಿ ಹೊತ್ತಿನಲ್ಲಿ ತಮ್ಮ ಜನ್ಮದ ಉದ್ದೇಶವನ್ನು ಪೂರೈಸಲಾರದೇ ಬಿಕ್ಕಿ ಬಿಕ್ಕಿ ಅಳುತ್ತಿವೆ. ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಲೈಟ್ ಕಂಬಗಳ ಕಥೆಯನ್ನು ನಿಮಗೆ ಹೇಳಿದ್ದೆ. ಕೊನೆಗೂ ಒಂದಷ್ಟರಮಟ್ಟಿಗೆ ನಮ್ಮ ಜಾಗೃತ ಅಂಕಣದ ಶ್ರಮ ಫಲಪ್ರದವಾಗಿದೆ. ಆ ಎರಡು ಲೈಟ್ ಕಂಬಗಳಲ್ಲಿ ಹಾಕಿರುವ ತಲಾ ಐದು ಬಲ್ಬ್ ಗಳು ಉರಿದಿವೆ. ಆದರೆ ಎಷ್ಟು ಹೊತ್ತು? ಈ ಪ್ರಶ್ನೆಗೆ ಉತ್ತರ ಸಿಗಬೇಕಾದರೆ ಆ ಬಲ್ಬ್ ಉರಿದ ಕೆಲವು ಗಂಟೆಗಳ ತನಕ ಕಾಯಬೇಕಾಯಿತು. ಬೆಳಿಗ್ಗೆ ಹತ್ತು ಗಂಟೆಗೆ ಸ್ಮಾರ್ಟ್ ಸಿಟಿಯ ಕಾರ್ಮಿಕರು ಬಂದು ಆ ಎಲ್ಲಾ ಬಲ್ಬ್ ಗಳನ್ನು ಉರಿಯುವಂತೆ ಮಾಡಿದರು. ಒಮ್ಮೆ ಅಲ್ಲಿದ್ದ ಎಲ್ಲರಿಗೂ ಸಮಾಧಾನವಾಯಿತು. ಆದರೆ ರಾತ್ರಿಯಾಗುತ್ತಿದ್ದಂತೆ ಒಂದು ಲೈಟ್ ಕಂಬದ ಎರಡು ಮತ್ತು ಇನ್ನೊಂದು ಲೈಟ್ ಕಂಬದ ಒಂದು ಬಲ್ಬ್ ಉರಿಯುತ್ತಿಲ್ಲ. ಒಂದು ಸಾವಿರ ಕೋಟಿ ರೂಪಾಯಿ ವರ್ಷಕ್ಕೆ ಅನುದಾನ ಬರುವ ಸ್ಮಾರ್ಟ್ ಸಿಟಿಗೆ ಹತ್ತು ಬಲ್ಬ್ ಗಳನ್ನು ಉರಿಸಲು ಆಗುವುದಿಲ್ಲ ಎಂದರೆ ಇವರು ಇನ್ನೆಂತಹ ಅಭಿವೃದ್ಧಿಯನ್ನು ಮಾಡಬಹುದು. ಇವರಿಗೆ ಕನಿಷ್ಟ ಹತ್ತು ಬಲ್ಬ್ ಗಳನ್ನು ಉರಿಯುವಂತೆ ಮಾಡಲು ಆಗುವುದಿಲ್ಲ ಎಂದರೆ ಇನ್ನು ಮೋದಿಯವರ ಕನಸನ್ನು ಇವರು ನನಸು ಮಾಡುತ್ತಾರೆ ಎಂದು ನಂಬಿಕೆ ಇಡಲು ಆಗುತ್ತಾ? ಒಂದು ದಿನ ಕೂಡ ಸಂಪೂರ್ಣವಾಗಿ ಎಲ್ಲ ಹತ್ತು ಬಲ್ಬ್ ಗಳು ಉರಿದಿಲ್ಲ ಎಂದರೆ ಏನು ಕಥೆ? ಈ ಒಂದು ಉದಾಹರಣೆಯೇ ಸಾಕು. ಮಂಗಳೂರಿನ ಸ್ಮಾರ್ಟ್ ಸಿಟಿಯ ಕಥೆ ಎತ್ತ ಸಾಗುತ್ತಿದೆ ಎಂದು ಗೊತ್ತಾಗುತ್ತದೆ. ಬಲ್ಬ್ ಉರಿಯದೇ ಹೋದರೆ ನನಗೆ ಏನಂತೆ ಎಂದು ಬುದ್ಧಿವಂತರು ಹೇಳುತ್ತಾ ತಿರುಗಬಹುದು. ಆದರೆ ಅನ್ನ ಬೆಂದಿದೆಯಾ ಎಂದು ನೋಡಲು ಊಟವೇ ಮಾಡಬೇಕಿಲ್ಲ. ಒಂದು ಅಗಳು ಮುಟ್ಟಿ ನೋಡಿದರೂ ಸಾಕು. ಹಾಗೆ ಸ್ಮಾರ್ಟ್ ಸಿಟಿಯ ಅಭಿವೃದ್ಧಿ ಕಾರ್ಯಗಳು ಮಂಗಳೂರಿನಲ್ಲಿ ಹೇಗೆ ನಡೆಯುತ್ತಿವೆ ಎಂದು ನೋಡಲು ಇಡೀ ಮಂಗಳೂರು ಸುತ್ತಬೇಕಿಲ್ಲ. ಟೆಂಪಲ್ ಸ್ಕೇರ್ ನ ಎರಡು ಲೈಟ್ ಕಂಬಗಳನ್ನು ನೋಡಿದರೂ ಸಾಕು.

ಇನ್ನು ಸ್ಮಾರ್ಟ್ ಸಿಟಿ ಮಂಡಳಿಯಲ್ಲಿ ಒಬ್ಬರು ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಐಎಎಸ್ ಶ್ರೇಣಿಯ ಅಧಿಕಾರಿ ಇರಬೇಕು. ಈಗ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಅದರಲ್ಲಿ ಇದ್ದ ಹಾಗೆ ಇದರಲ್ಲಿ ಒಬ್ಬರು ಎಂಡಿ ಐಎಎಸ್ ಆಫೀಸರ್ ಕಡ್ಡಾಯವಾಗಿ ಇರಲೇಬೇಕು. ಇಲ್ಲದೇ ಹೋದರೆ ಸ್ಮಾರ್ಟ್ ಸಿಟಿ ಮಂಡಳಿ ಹಳ್ಳ ಹಿಡಿಯುತ್ತದೆ. ಈಗ ಮಂಗಳೂರಿನಲ್ಲಿ ಆಗುತ್ತಿರುವುದೇ ಅದು. ಇಲ್ಲಿ ಐಎಎಸ್ ಬಿಡಿ, ಪೂರ್ಣಾವಧಿಯಾಗಿ ಒಬ್ಬ ಕೆಎಎಸ್ ಶ್ರೇಣಿಯ ಅಧಿಕಾರಿ ಕೂಡ ಇಲ್ಲ. ಹಾಗಾದರೆ ಹೇಗೆ ನಮ್ಮದು ಸ್ಮಾರ್ಟ್ ಸಿಟಿ ಆಗುವುದು. ಈಗ ಒಂದು ವರ್ಷದಿಂದ ಮೆಸ್ಕಾಂ ಇಲಾಖೆಯ ಅಧಿಕಾರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದರಿಂದ ಏನಾಗುತ್ತದೆ. ಅವರು ಸರಿಯಾಗಿ ಅಲ್ಲಿ ಕೂಡ ಕೆಲಸ ಮಾಡಲು ಆಗುವುದಿಲ್ಲ. ಇಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಆಗುವುದಿಲ್ಲ. ಇದರಿಂದ ಆರು ತಿಂಗಳಲ್ಲಿ ಆಗುವ ಕೆಲಸ ಎರಡು ವರ್ಷ ಹಿಡಿಯುತ್ತದೆ. ಇದಕ್ಕೆ ಮಂಗಳೂರು ನಗರದ ಅನೇಕ ರಸ್ತೆಗಳು ಸಾಕ್ಷಿಯಾಗಿವೆ. ಈಗ ಎಂಜಿ ರಸ್ತೆಯನ್ನೇ ತೆಗೆದುಕೊಳ್ಳಿ. ಪಿವಿಎಸ್ ಬಿಲ್ಡಿಂಗ್ ನಿಂದ ಮುಂದೆ ಮಾನಸ ಟವರ್ಸ್ ಬಳಿ, ಡೊಂಗರಕೇರಿ ದೇವಸ್ಥಾನದ ಎದುರಿನ ರಸ್ತೆ, ಗಣಪತಿ ಹೈಸ್ಕೂಲ್ ರಸ್ತೆ ಹೀಗೆ ಅನೇಕ ರಸ್ತೆಗಳ ಅಭಿವೃದ್ಧಿ, ಒಳಚರಂಡಿ, ಕಾಂಕ್ರೀಟಿಕರಣ ಒಂದೂವರೆ ವರ್ಷದಿಂದ ಆಮೆಗತಿಯಲ್ಲಿ ನಡೆಯುತ್ತದೆ. ಜನ ಅಭಿವೃದ್ಧಿಗಾಗಿ ಒಂದಿಷ್ಟು ಸಹಕರಿಸಬೇಕು ಎಂದು ಜನಪ್ರತಿನಿಧಿಗಳು ಹೇಳುವುದು ಮತ್ತು ಅದು ಮಾಧ್ಯಮದಲ್ಲಿ ನಾವು ಓದುವುದು ನಡೆಯುತ್ತಲೇ ಇದೆ. ಕೆಲವು ದಿನ ಇದೆಲ್ಲ ಓಕೆ. ಜನ ಸಹಕರಿಸಬಹುದು ಅಥವಾ ಸಹಿಸಿಕೊಳ್ಳಬಹುದು. ಆದರೆ ಜನ ಮಾತನಾಡುವುದಿಲ್ಲ ಎಂದು ಜನಪ್ರತಿನಿಧಿಗಳು ಅದನ್ನೇ ಗ್ರಾಟೆಂಡ್ ಆಗಿ ತೆಗೆದುಕೊಳ್ಳಬಾರದು. ಯಾಕೆಂದರೆ ಈಗ ಮೌನವಾಗಿ ಸಹಿಸಿಕೊಂಡ ಮತದಾರ ಚುನಾವಣೆಯಲ್ಲಿ ಉತ್ತರ ಕೊಡುವಾಗ ಕಾಲ ಮಿಂಚಿ ಹೋಗುವ ಸಾಧ್ಯತೆ ಇದೆ. ಸ್ಮಾರ್ಟ್ ಸಿಟಿಯಲ್ಲಿ ಅಭಿವೃದ್ಧಿಯಾಗುತ್ತಿರುವ ಒಂದೊಂದು ರಸ್ತೆಯ ಕಥೆ ಒಂದೊಂದು ರೀತಿಯಲ್ಲಿದೆ.
ಇನ್ನು ಯಾವುದೇ ಒಂದು ಪ್ರದೇಶದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಾಗ ಅಲ್ಲಿ ರಸ್ತೆಯ ಮೇಲೆ ಉಬ್ಬು ರೀತಿಯಲ್ಲಿ ಎತ್ತರ ಬರಬಾರದು. ನೀವು ಒಂದು ರಸ್ತೆಯಲ್ಲಿ ಸಂಚರಿಸುವಾಗ ಅಲ್ಲಿ ಕೆಳಗೆ ಅಂಡರ್ ಪಾಸ್ ಇದೆ ಎನ್ನುವ ಅನುಭವ ಕೂಡ ನಿಮಗೆ ಬರಬಾರದು. ಅದು ಉತ್ತಮ ಕಾಮಗಾರಿಯ ಲಕ್ಷಣ. ಆದರೆ ನೀವು ಪುರಭವನದ ಬಳಿ ಆಗುತ್ತಿರುವ ಅಂಡರ್ ಪಾಸ್ ನೋಡುವಾಗ ಅಲ್ಲಿ ರಸ್ತೆ ಎತ್ತರವಾಗಿದೆ. ಆದರೆ ಇದನ್ನು ಯಾರೂ ನೋಡುತ್ತಿಲ್ಲ. ಸ್ಮಾರ್ಟ್ ಸಿಟಿಯ ವಿಷಯದಲ್ಲಿ ಏನೇ ಕಾಮಗಾರಿ ಆಗಲಿ, ಅದನ್ನು ಪರಿಶೀಲಿಸುವ, ಸರಿಯಾಗದೇ ಇದ್ದರೆ ಪ್ರಶ್ನಿಸುವ ಕರ್ತವ್ಯ ಪಾಲಿಕೆಗೆ ಇದೆ. ಆದರೆ ಸ್ಮಾರ್ಟ್ ಸಿಟಿಯ ಕಾಮಗಾರಿಯಲ್ಲಿ ಏನೇ ಲೋಪ ಆದರೂ ಪಾಲಿಕೆಯ ಇಂಜಿನಿಯರ್ ಗಳು ಅತ್ತ ಕಡೆ ತಲೆ ಹಾಕಿ ಕೂಡ ಮಲಗುವುದಿಲ್ಲ. ಯಾಕೆಂದರೆ ಅದರಲ್ಲಿ ಅವರಿಗೆ ಏನೂ ಕಮೀಷನ್ ಸಿಗುವುದಿಲ್ಲ. ಕಮೀಷನ್ ಸಿಗದ ಕಡೆ ಕೆಲಸ ಮಾಡಲು ಅಧಿಕಾರಿಗಳ ಮನಸ್ಸು ಒಪ್ಪುವುದಿಲ್ಲ. ಜನರಿಗೆ ಉಪಯೋಗವಾಗುತ್ತದೆ ಎಂದು ಕೆಲಸ ಮಾಡಲು ನಮ್ಮದೇನು ಸಮಾಜಸೇವಾ ಸಂಘಟನೆ ಅಲ್ಲ ಎಂದು ಅಧಿಕಾರಿಗಳು, ಪಾಲಿಕೆ ಇಂಜಿನಿಯರ್ಸ್ ಹೇಳುತ್ತಿರಬಹುದು. ಇದು ಗಮನಿಸಬೇಕಾದವರು ಬೇಗ ಗಮನಿಸಿದರೆ ಒಳ್ಳೆಯದು!

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Hanumantha Kamath January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search