• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಮಾಡಿದ್ದ ನಾಯಿ “ಲೀನಾ” ಸಾವು!

Tulunadu News Posted On November 22, 2021


  • Share On Facebook
  • Tweet It

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ಶ್ವಾನ ಮೃತಪಟ್ಟಿದೆ.8 ವರ್ಷದಿಂದ ಸಿಐಎಸ್‌ಎಫ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಹೆಸರಿನ ಲ್ಯಾಬ್ರಡಾರ್ ನಾಯಿ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಗೌರವದೊಂದಿಗೆ ಮಂಗಳೂರು ಹಳೇ ಏರ್‌ರ್ಪೋರ್ಟ್ ಆವರಣದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಲಿನಾಗೆ ಆಹಾರ ಮತ್ತು ಔಷಧಿಗಳ ವೆಚ್ಚದಂತಹ ಎಲ್ಲಾ ಅಗತ್ಯ ಸೌಕರ್ಯಗಳನ್ನು ವಿಮಾನ ನಿಲ್ದಾಣದ ನಿರ್ವಾಹಕರು ಒದಗಿಸಿದ್ದಾರೆ ಎಂದು ಪ್ರಕಟಣೆಯೊಂದರಲ್ಲಿ ತಿಳಿದು ಬಂದಿದೆ. ಲಿನಾ ನಿರಂತರವಾಗಿ ಪಶುವೈದ್ಯರ ನಿಗಾದಲ್ಲಿತ್ತು. ನವೆಂಬರ್ 16 ರಿಂದ ಲಿನಾ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಅದಕ್ಕೆ ಗ್ಲೂಕೋಸ್ ನೀಡಲಾಗುತಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ. ಸ್ಫೋಟಕ ಪತ್ತೆ ಬಗ್ಗೆ ತರಬೇತಿ ಪಡೆದಿದ್ದ ಲೀನಾ ಮಂಗಳೂರು ಏರ್‌ಪೋರ್ಟ್‌ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿತ್ತು.

ಮಂಗಳೂರಿನ ಸಿಐಎಸ್‌ಎಫ್ ಕಚೇರಿ ಆವರಣದಲ್ಲಿ ಡಿಟೆಕ್ಟಿವ್ ಲೀನಾಗೆ ಅಧಿಕಾರಿಗಳಿಂದ ಅಂತಿಮ ನಮನ ಸಲ್ಲಿಸಲಾಗಿದ್ದು ಸಿಐಎಸ್‌ಎಫ್ ಸಕಲ ಗೌರವದೊಂದಿಗೆ ಮಂಗಳೂರು ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನೆರವೇರಿದೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search