• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಮಾಡಿದ್ದ ನಾಯಿ “ಲೀನಾ” ಸಾವು!

Tulunadu News Posted On November 22, 2021
0


0
Shares
  • Share On Facebook
  • Tweet It

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ಶ್ವಾನ ಮೃತಪಟ್ಟಿದೆ.8 ವರ್ಷದಿಂದ ಸಿಐಎಸ್‌ಎಫ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಹೆಸರಿನ ಲ್ಯಾಬ್ರಡಾರ್ ನಾಯಿ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಗೌರವದೊಂದಿಗೆ ಮಂಗಳೂರು ಹಳೇ ಏರ್‌ರ್ಪೋರ್ಟ್ ಆವರಣದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಲಿನಾಗೆ ಆಹಾರ ಮತ್ತು ಔಷಧಿಗಳ ವೆಚ್ಚದಂತಹ ಎಲ್ಲಾ ಅಗತ್ಯ ಸೌಕರ್ಯಗಳನ್ನು ವಿಮಾನ ನಿಲ್ದಾಣದ ನಿರ್ವಾಹಕರು ಒದಗಿಸಿದ್ದಾರೆ ಎಂದು ಪ್ರಕಟಣೆಯೊಂದರಲ್ಲಿ ತಿಳಿದು ಬಂದಿದೆ. ಲಿನಾ ನಿರಂತರವಾಗಿ ಪಶುವೈದ್ಯರ ನಿಗಾದಲ್ಲಿತ್ತು. ನವೆಂಬರ್ 16 ರಿಂದ ಲಿನಾ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಅದಕ್ಕೆ ಗ್ಲೂಕೋಸ್ ನೀಡಲಾಗುತಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ. ಸ್ಫೋಟಕ ಪತ್ತೆ ಬಗ್ಗೆ ತರಬೇತಿ ಪಡೆದಿದ್ದ ಲೀನಾ ಮಂಗಳೂರು ಏರ್‌ಪೋರ್ಟ್‌ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿತ್ತು.

ಮಂಗಳೂರಿನ ಸಿಐಎಸ್‌ಎಫ್ ಕಚೇರಿ ಆವರಣದಲ್ಲಿ ಡಿಟೆಕ್ಟಿವ್ ಲೀನಾಗೆ ಅಧಿಕಾರಿಗಳಿಂದ ಅಂತಿಮ ನಮನ ಸಲ್ಲಿಸಲಾಗಿದ್ದು ಸಿಐಎಸ್‌ಎಫ್ ಸಕಲ ಗೌರವದೊಂದಿಗೆ ಮಂಗಳೂರು ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನೆರವೇರಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search