• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಆರೋಗ್ಯ ನಂಬಿದ್ರೆ ನಂಬಿ ಸುದ್ದಿ 

ಉಡುಪಿ: 1.80 ಲಕ್ಷ ಬೆಲೆಗೆ ಮಾರಾಟವಾದ ಅಪರೂಪದ ಘೋಲ್‌ ಮೀನು!

Tulunadu News Posted On November 24, 2021
0


0
Shares
  • Share On Facebook
  • Tweet It

ಮಲ್ಪೆ ಕಡಲಲ್ಲಿ ಕೋಲಿ ಗಂಗಾಮತ ಮೊಗವೀರ ಸಮುದಾಯದ ಮೀನುಗಾರರ ಬಲೆಗೆ ಬಿದ್ದ 20 ಕೆಜಿ ತೂಕದ ಒಂದೂ ಲಕ್ಷದ ಎಂಬತ್ತು ಸಾವಿರ ರೂಪಾಯಿಗಳ ಬೆಲೆ ಬಾಳುವ ಅಪರೂಪದ ಗೋಲಿ ( ಘೋಲ್) ಮೀನು.
 
ಈ ಗೋಲ್‌ ಎಂಬ ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಆಳ ಸಮುದ್ರದಲ್ಲಿರುವ ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿರುತ್ತದೆ. ಆದರೆ ಮೀನುಗಾರರ ಬಲೆಗೆ ಬೀಳೋದು ಬಲು ಅಪರೂಪವಾಗಿದೆ.
 
ಗೋಲ್‌ ಮೀನು ಕಲ್ಮುರಿಯಂತೆ ಸಂದಿಗೊಂದುಗಳಲ್ಲಿ ಬದುಕುವ ಮೀನು. ಬಲೆಗೆ ಬೀಳುವುದು ಕಡಿಮೆ. ಇದರ ಜೀವಶಾಸ್ತ್ರೀಯ ದ್ವಿನಾಮಕರಣ Protonibea diacanthus. ಐಯೋಡಿನ್‌, ಒಮೆಗಾ-3 ಕೊಬ್ಬಿನ ಆಮ್ಲ, ಡಿ.ಎಚ್.ಎ, ಎ.ಪಿ.ಇ, ಕಬ್ಬಿಣ, ಮೆಗ್ನೀಶಿಯಮ್‌, ಸೆಲೆನಿಯಮ್‌ ಮುಂತಾದ ಪೋಷಕಾಂಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಈ ಮೀನಿಗೆ ಔಷದೀಯ ಗುಣವಿರುತ್ತದೆ ಎನ್ನಲಾಗುತ್ತದೆ. ಅದರಲ್ಲೂ ಈ ಮೀನಿನ ಜಠರ ಭಾಗದಲ್ಲಿ ಇರುವ ಚೀಲದಂತಹ ರಚನೆಗೆ ಸಿಂಗಪೂರ್‌, ಹಾಂಗ್‌ ಕಾಂಗ್‌ ಇಂಡೋನೇಶಿಯಾ, ಜಪಾನ್‌ ಗಳಲ್ಲಿ ಬಹು ಬೇಡಿಕೆಯಿದೆ. ಈ ಚೀಲವೇ ಗೋಳಿಮೀನನ್ನು ಗೋಲ್ಡ್ ಫಿಶ್‌ ಎಂದು ಕರೆಯುವಂತೆ ಮಾಡಿದೆ.
ಗೋಲ್‌ ಮೀನಿನ ಚರ್ಮದಿಂದ ಸಂಸ್ಕರಿಸಲಾಗುವ ಕೊಲ್ಲಾಜೆನ್‌ ಚರ್ಮದ ಕಾಂತಿಯನ್ನು ಹೆಚ್ಚಿಸಿ ವಯಸ್ಸಾಗುವಿಕೆಯನ್ನು ತಡೆಯಬಲ್ಲದು ಎನ್ನುತ್ತಾರೆ. ನಮ್ಮ ದೇಹದ ವಿವಿಧ ಅಂಗಾಂಶಗಳನ್ನು ಅಂಟಿನಂತೆ ಜೋಡಿಸುವ ಒಂದು ಪ್ರೋಟಿನ್‌ ಯುಕ್ತ ವಸ್ತುವೇ ಕೊಲ್ಲಾಜೆನ್.. ಇದು ಎಲ್ಲ ಪ್ರಾಣಿಗಳ ದೇಹದಲ್ಲಿರುತ್ತದೆ. ಚರ್ಮದ ಭಾಗದಲ್ಲಿ ಹೆಚ್ಚಾಗಿರುತ್ತದೆ. ಸೌಂದರ್ಯ ವರ್ಧಕ ಕ್ರೀಮುಗಳಲ್ಲಿ ಕೊಲ್ಲಾಜೆನ್‌ ಸೇರಿಸುತ್ತಾರಾದರೂ ಚರ್ಮದ ಮೂಲಕ ಈ ವಸ್ತು ಹೀರಿಕೆಯಾಗುವುದು ಅನುಮಾನ. ಒಮೆಗಾ-3 ಕೊಬ್ಬಿನ ಆಮ್ಲದ ಆರೋಗ್ಯ ಮಹತ್ವದ ಬಗ್ಗೆ ಗೊತ್ತೇ ಇದೆ- ಇದು ಹೃದಯ ಮತ್ತು ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ. ಫಾರ್ಮಾಸುಟಿಕಲ್ ಕಂಪನಿಯವರೇ ಈ ಮೀನುಗಳ ಹರಾಜಿನಲ್ಲಿ ಭಾಗವಹಿಸುತ್ತಾರೆಂದು ಕೇಳಿರುವೆ. ಆದುದರಿಂದ ಬೇರೆ ಬೇರೆ ಔಷದಿಗಳಲ್ಲಿ ಇದರ ಉಪಯೋಗವಿದೆ ಎಂದು ಊಹಿಸಬಹುದು. ಅರಬ್ಬಿ ಸಮದ್ರ ಮತ್ತು ಫೆಸಿಫಿಕ್‌ ಸಾಗರಗಳ ನಡುವೆ ಹೆಚ್ಚಾಗಿ ಕಂಡುಬರುವ ಈ ಮೀನು ಸಮುದ್ರದಲ್ಲಿರುವ ಬಂಗಾರದ ಕೊಪ್ಪರಿಗೆಯಾಗಿದೆ.
ಎರಡು ತಿಂಗಳ ಹಿಂದೆ ಮಹಾರಾಷ್ಟ್ರದ ತುಕಾರಾಮ್ ತಾರೆ ಎಂಬವರ ಒಂದೇ ಬಲೆಗೆ ನೂರೈವತ್ತೇಳು ಗೋಳಿಮೀನುಗಳು ಬಿದ್ದಿದ್ದವು. ಒಂದು ಕೋಟಿ ಮೂವತ್ಮೂರು ಲಕ್ಷ ರೂಪಾಯಿಗಳಷ್ಟು ಹಣಕ್ಕೆ ಆ ಮೀನುಗಳು ಮಾರಾಟವಾಗಿದ್ದವು.
0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search