• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಆರೋಗ್ಯ ನಂಬಿದ್ರೆ ನಂಬಿ ಸುದ್ದಿ 

ಉಡುಪಿ: 1.80 ಲಕ್ಷ ಬೆಲೆಗೆ ಮಾರಾಟವಾದ ಅಪರೂಪದ ಘೋಲ್‌ ಮೀನು!

Tulunadu News Posted On November 24, 2021
0


0
Shares
  • Share On Facebook
  • Tweet It

ಮಲ್ಪೆ ಕಡಲಲ್ಲಿ ಕೋಲಿ ಗಂಗಾಮತ ಮೊಗವೀರ ಸಮುದಾಯದ ಮೀನುಗಾರರ ಬಲೆಗೆ ಬಿದ್ದ 20 ಕೆಜಿ ತೂಕದ ಒಂದೂ ಲಕ್ಷದ ಎಂಬತ್ತು ಸಾವಿರ ರೂಪಾಯಿಗಳ ಬೆಲೆ ಬಾಳುವ ಅಪರೂಪದ ಗೋಲಿ ( ಘೋಲ್) ಮೀನು.
 
ಈ ಗೋಲ್‌ ಎಂಬ ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಆಳ ಸಮುದ್ರದಲ್ಲಿರುವ ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿರುತ್ತದೆ. ಆದರೆ ಮೀನುಗಾರರ ಬಲೆಗೆ ಬೀಳೋದು ಬಲು ಅಪರೂಪವಾಗಿದೆ.
 
ಗೋಲ್‌ ಮೀನು ಕಲ್ಮುರಿಯಂತೆ ಸಂದಿಗೊಂದುಗಳಲ್ಲಿ ಬದುಕುವ ಮೀನು. ಬಲೆಗೆ ಬೀಳುವುದು ಕಡಿಮೆ. ಇದರ ಜೀವಶಾಸ್ತ್ರೀಯ ದ್ವಿನಾಮಕರಣ Protonibea diacanthus. ಐಯೋಡಿನ್‌, ಒಮೆಗಾ-3 ಕೊಬ್ಬಿನ ಆಮ್ಲ, ಡಿ.ಎಚ್.ಎ, ಎ.ಪಿ.ಇ, ಕಬ್ಬಿಣ, ಮೆಗ್ನೀಶಿಯಮ್‌, ಸೆಲೆನಿಯಮ್‌ ಮುಂತಾದ ಪೋಷಕಾಂಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಈ ಮೀನಿಗೆ ಔಷದೀಯ ಗುಣವಿರುತ್ತದೆ ಎನ್ನಲಾಗುತ್ತದೆ. ಅದರಲ್ಲೂ ಈ ಮೀನಿನ ಜಠರ ಭಾಗದಲ್ಲಿ ಇರುವ ಚೀಲದಂತಹ ರಚನೆಗೆ ಸಿಂಗಪೂರ್‌, ಹಾಂಗ್‌ ಕಾಂಗ್‌ ಇಂಡೋನೇಶಿಯಾ, ಜಪಾನ್‌ ಗಳಲ್ಲಿ ಬಹು ಬೇಡಿಕೆಯಿದೆ. ಈ ಚೀಲವೇ ಗೋಳಿಮೀನನ್ನು ಗೋಲ್ಡ್ ಫಿಶ್‌ ಎಂದು ಕರೆಯುವಂತೆ ಮಾಡಿದೆ.
ಗೋಲ್‌ ಮೀನಿನ ಚರ್ಮದಿಂದ ಸಂಸ್ಕರಿಸಲಾಗುವ ಕೊಲ್ಲಾಜೆನ್‌ ಚರ್ಮದ ಕಾಂತಿಯನ್ನು ಹೆಚ್ಚಿಸಿ ವಯಸ್ಸಾಗುವಿಕೆಯನ್ನು ತಡೆಯಬಲ್ಲದು ಎನ್ನುತ್ತಾರೆ. ನಮ್ಮ ದೇಹದ ವಿವಿಧ ಅಂಗಾಂಶಗಳನ್ನು ಅಂಟಿನಂತೆ ಜೋಡಿಸುವ ಒಂದು ಪ್ರೋಟಿನ್‌ ಯುಕ್ತ ವಸ್ತುವೇ ಕೊಲ್ಲಾಜೆನ್.. ಇದು ಎಲ್ಲ ಪ್ರಾಣಿಗಳ ದೇಹದಲ್ಲಿರುತ್ತದೆ. ಚರ್ಮದ ಭಾಗದಲ್ಲಿ ಹೆಚ್ಚಾಗಿರುತ್ತದೆ. ಸೌಂದರ್ಯ ವರ್ಧಕ ಕ್ರೀಮುಗಳಲ್ಲಿ ಕೊಲ್ಲಾಜೆನ್‌ ಸೇರಿಸುತ್ತಾರಾದರೂ ಚರ್ಮದ ಮೂಲಕ ಈ ವಸ್ತು ಹೀರಿಕೆಯಾಗುವುದು ಅನುಮಾನ. ಒಮೆಗಾ-3 ಕೊಬ್ಬಿನ ಆಮ್ಲದ ಆರೋಗ್ಯ ಮಹತ್ವದ ಬಗ್ಗೆ ಗೊತ್ತೇ ಇದೆ- ಇದು ಹೃದಯ ಮತ್ತು ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ. ಫಾರ್ಮಾಸುಟಿಕಲ್ ಕಂಪನಿಯವರೇ ಈ ಮೀನುಗಳ ಹರಾಜಿನಲ್ಲಿ ಭಾಗವಹಿಸುತ್ತಾರೆಂದು ಕೇಳಿರುವೆ. ಆದುದರಿಂದ ಬೇರೆ ಬೇರೆ ಔಷದಿಗಳಲ್ಲಿ ಇದರ ಉಪಯೋಗವಿದೆ ಎಂದು ಊಹಿಸಬಹುದು. ಅರಬ್ಬಿ ಸಮದ್ರ ಮತ್ತು ಫೆಸಿಫಿಕ್‌ ಸಾಗರಗಳ ನಡುವೆ ಹೆಚ್ಚಾಗಿ ಕಂಡುಬರುವ ಈ ಮೀನು ಸಮುದ್ರದಲ್ಲಿರುವ ಬಂಗಾರದ ಕೊಪ್ಪರಿಗೆಯಾಗಿದೆ.
ಎರಡು ತಿಂಗಳ ಹಿಂದೆ ಮಹಾರಾಷ್ಟ್ರದ ತುಕಾರಾಮ್ ತಾರೆ ಎಂಬವರ ಒಂದೇ ಬಲೆಗೆ ನೂರೈವತ್ತೇಳು ಗೋಳಿಮೀನುಗಳು ಬಿದ್ದಿದ್ದವು. ಒಂದು ಕೋಟಿ ಮೂವತ್ಮೂರು ಲಕ್ಷ ರೂಪಾಯಿಗಳಷ್ಟು ಹಣಕ್ಕೆ ಆ ಮೀನುಗಳು ಮಾರಾಟವಾಗಿದ್ದವು.
0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search