• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ನರ್ಸಿಂಗ್ ಕಾಲೇಜಿನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್

Tulunadu News Posted On November 29, 2021
0


0
Shares
  • Share On Facebook
  • Tweet It

ನಗರದ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ರವಿವಾರ ಬಂಧಿಸಿದ್ದಾರೆ.ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂಬರನ್ನು ರೈಲ್ವೇ ನಿಲ್ದಾಣ ಬಳಿಯಿಂದ ಬಂಧಿಸಲಾಗಿದೆ. ಈ ಪೈಕಿ 7 ಮಂದಿ ಗಾಂಜಾ ಸೇವನೆ ಮಾಡಿದ್ದು, ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ. ಬಂಧಿತರಲ್ಲಿ ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಆಗಿದ್ದು, ಏಳು ಮಂದಿ ಬಲ್ಮಠದ ನರ್ಸಿಂಗ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಕಣ್ಣೂರು ಮೂಲದವರಾಗಿದ್ದು, ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅತ್ತಾವರದ ಡಿ ಮಾರ್ಟ್‌ನಿಂದ ಫಳ್ನೀರ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಶುಕ್ರವಾರ ರಾತ್ರಿ 7.30ರ ವೇಳೆಗೆ ಹೋಗುತ್ತಿದ್ದಾಗ ಆರೋಪಿಗಳು ಎದುರು ಸಿಕ್ಕಿದ್ದರು. ಅವರಿಗೆ ಹಾಯ್ ಎಂದು ಹೇಳಿದಾಗ ಎಲ್ಲರೂ ಕಿರುಚಾಡಿಕೊಂಡು ಬಂದು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು.

ಪಾಂಡೇಶ್ವರ ಠಾಣೆ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search