ಮಂಗಳೂರು: ಒಂಟಿ ದ್ವಿಚಕ್ರ ವಾಹನವನ್ನೇ ಟಾರ್ಗೆಟ್ ಮಾಡಿ ಅಟ್ಯಾಕ್! ಮಂಗಳಮುಖಿ ಅಂದರ್
Posted On November 30, 2021
0
ಮಂಗಳೂರು: ಒಂಟಿ ದ್ವಿಚಕ್ರ ವಾಹನವನ್ನೇ ಟಾರ್ಗೆಟ್ ಮಾಡಿ ಸವಾರನನ್ನು ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಇಜಿಪುರ ನಿವಾಸಿ ಅಭಿಷೇಕ್ ಅಲಿಯಾಸ್ ಗೊಂಬೆ ಅಲಿಯಾಸ್ ಅನಾಮಿಕ(27) ಬಂಧಿತ ಮಂಗಳಮುಖಿ.
ಮಂಗಳೂರಿನ ನಂತೂರು ಪದವು ಬಳಿಯಿರುವ ಬಿಎಸ್ಎನ್ಎಲ್ ಎಕ್ಸ್ ಚೇಂಜ್ ಬಳಿ ಗಣೇಶ್ ಶೆಟ್ಟಿ ಎಂಬವರು ಬೈಕ್ ನಲ್ಲಿ ಬರುತ್ತಿದ್ದರು. ಈ ಸಂದರ್ಭ ಈ ಮಂಗಳಮುಖಿ ರಸ್ತೆಗೆ ಅಡ್ಡವಾಗಿ ನಿಂತು ಬೈಕ್ ತಡೆದಿದ್ದಾನೆ.
ಬಳಿಕ ಹತ್ತಿರ ಬಂದು ಗಣೇಶ್ ಶೆಟ್ಟಿಯವರಿಗೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಅವರ ಕತ್ತಿನಲ್ಲಿದ್ದ 24 ಗ್ರಾಂ ಸರವನ್ನು ಎಗರಿಸಿದ್ದಾನೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಂಗಳಮುಖಿಯನ್ನು ಪತ್ತೆಹಚ್ಚಿರುವ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 71 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರಿಗೆ ಈತ ಇಂತಹ ಮೂರು ಕೃತ್ಯದಲ್ಲಿ ಭಾಗಿಯಾಗಿರೋದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
April 14, 2026









