• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು!

Tulunadu News Posted On December 9, 2021
0


0
Shares
  • Share On Facebook
  • Tweet It

ತಮಿಳುನಾಡು ಮೂಲದ ರಾಜನ್ ಚಿನ್ನತಂಬಿ ಹಾಗೂ ಆತನ ಸ್ನೇಹಿತ ಬಿ.ಪಿ ಪ್ರಮೋದ್ ಬಂಧಿತ ಆರೋಪಿಗಳಾಗಿದ್ದಾರೆ. 22 ರಂದು ಹೆಚ್ ಪಿಸಿಎಲ್ ಪ್ಲಾಂಟ್ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜನ್ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಕುಳಾಯಿ, ಕಾನ, ಹೊಸಬೆಟ್ಟು, ಕಡಬೊಂಡಿ ಪ್ರದೇಶಗಳಲ್ಲಿ 2021 ರಲ್ಲಿ ಮನೆ ಕಳವು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಮಾಹಿತಿ ಆತ ನೀಡಿದ್ದ. ಆತನನ್ನು ದಸ್ತಗಿರಿ ಮಾಡಿ ಬೆಂಗಳೂರಿನ ಚಂದಾಪುರದ ಕೀರ್ತಿ ಲೇಔಟಿನ ಬಿ. ಪಿ ಪ್ರಮೋದ್ ಎಂಬವನಿಗೆ ಸೇರಿದ ಲಕ್ಷ್ಮೀ ಕೇರಳ ಮೆಸ್‍ ನ ರೂಮಿನಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ಸ್ವಾಧೀನ ಪಡಿಸಿ ಪ್ರಮೋದ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ರಾಜನ್ ಕಳವು ಮಾಡಿ ತಂದಿರುವ ಚಿನ್ನದ ಒಡವೆಗಳ ಪೈಕಿ ಮಣಪುರಂ ಪೈನಾನ್ಸ್ ನಲ್ಲಿ ಅಡಮಾನ ಇರಿಸಿದ್ದ ಚಿನ್ನದ ಒಡವೆಗಳನ್ನು ಪೊಲೀಸರು ಸ್ವಾಧೀನ ಪಡಿಸಿದ್ದು, ಅಲ್ಲದೆ ರಾಜನ್ ನ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ತೆಲ್ಲುಗುಮ್ ಪಾಳಯಂ ಎಂಬಲ್ಲಿನ ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 16,50,000 ರೂ. ಮೌಲ್ಯದ 366.632 ಗ್ರಾಂ ಚಿನ್ನದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಐಪಿಎಸ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಪ್ಪ.ಕೆ, ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರಯ್ಯ ಹಾಗೂ ಸಿಬ್ಬಂದಿಗಳು ಇದ್ದರು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search