• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು: ಹೃದ್ರೋಗಿಯ ಜೀವ ಉಳಿಸಿದ ವೈದ್ಯರ ಕಾರ್ಯಕ್ಕೆ ಮನಸೋತ ರೋಗಿ ಮಾಡಿದ್ದೇನು ಗೊತ್ತೇ?

Tulunadu News Posted On December 22, 2021
0


0
Shares
  • Share On Facebook
  • Tweet It

ಮಂಗಳೂರು: ವೈದ್ಯರೆಂದರೆ ಸಾಕ್ಷಾತ್ ನಾರಾಯಣನ ಅಪರಾವತಾರ ಎಂದು ‘ವೈದ್ಯೋ‌ನಾರಾಯಣೋ ಹರಿಃ’ ಎಂಬ ವಾಕ್ಯ ಸಾರಿ ಹೇಳುತ್ತದೆ. ನಿಜ ಜೀವನದಲ್ಲೂ ರೋಗಿಯನ್ನು ಸಾವಿನ ದವಡೆಯಿಂದ ಪಾರುಮಾಡಿ ಜೀವ ಉಳಿಸುವ ವೈದ್ಯರನ್ನು ದೇವರಂತೆ ಕಾಣುವವರು ಎಷ್ಟೋ ಮಂದಿಯಿದ್ದಾರೆ. ಅವರಲ್ಲಿ ಆ ರೀತಿಯ ಧನ್ಯತಾ ಭಾವವಿರುತ್ತದೆ ಎಂದರೆ ಅತಿಶಯೋಕ್ತಿಯಲ್ಲ. ಅಂಥಹದ್ದೇ ಒಂದು ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ವತಃ ವೈದ್ಯರೇ ಘಟನೆಯ ಬಗ್ಗೆ ವಿವರಿಸಿ ಫೋಟೋ ಸಹಿತ ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಇಂಟರ್​ವೆನ್ಷನಲ್​ ಕಾರ್ಡಿಯೊಲಜಿಸ್ಟ್​ ಆಗಿರುವ ಡಾ.ಪದ್ಮನಾಭ ಕಾಮತ್​ ತಮ್ಮಿಂದ ಚಿಕಿತ್ಸೆ ಪಡೆದ ಹೃದ್ರೋಗಿಯೋರ್ವನು ಧನ್ಯತಾ ಭಾವದಿಂದ ಕೃತಜ್ಞತೆ ಸಲ್ಲಿಸಿರುವ ಪರಿಯನ್ನು ಫೋಟೋ ಸಹಿತ ಹಂಚಿಕೊಂಡಿದ್ದಾರೆ. ಮೂರು ವಾರಗಳ ಹಿಂದೆ ಹೃದ್ರೋಗಿಯೋರ್ವನು ತಮ್ಮಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ. ಆತ ಸಂಪೂರ್ಣ ಗುಣಮುಖನಾದ ಬಳಿಕ ತಮ್ಮೊಂದಿಗೆ ನಡೆದುಕೊಂಡ ರೀತಿಗೆ ತಾನು ಮನಸೋತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಹೃದ್ರೋಗದಿಂದ ಬಳಲುತ್ತಿದ್ದಾತನಿಗೆ ನಮ್ಮ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ನೀಡಿದ್ದೆವು. ಜೀವ ಉಳಿಸಿದ ನಮಗೆ ಆತನು ದೇವರ ಪ್ರಸಾದವನ್ನು ತಂದುಕೊಟ್ಟದ್ದಲ್ಲದೆ, ಸಾಷ್ಟಾಂಗ ನಮಸ್ಕಾರ ಮಾಡಲು ಬಂದಿದ್ದಾರೆ. ಇಂಥದ್ದೊಂದು ಕೃತಜ್ಞತೆಯು ವ್ಯಕ್ತವಾಗಿರುವುದಕ್ಕೆ ಪ್ರತಿಯಾಗಿ ನಾನು ನನ್ನೆಲ್ಲ ರೋಗಿಗಳಿಗೆ ಶಿರಬಾಗುತ್ತೇನೆ.‌ ಈ ರೀತಿಯ ಕೃತಜ್ಞತೆ ನಮ್ಮ ಶ್ರೇಷ್ಠ ಭಾರತೀಯ ಸಂಸ್ಕೃತಿ ಎಂದು ಡಾ.ಪದ್ಮನಾಭ ಕಾಮತ್ ಬರೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search