• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು: ಹೃದ್ರೋಗಿಯ ಜೀವ ಉಳಿಸಿದ ವೈದ್ಯರ ಕಾರ್ಯಕ್ಕೆ ಮನಸೋತ ರೋಗಿ ಮಾಡಿದ್ದೇನು ಗೊತ್ತೇ?

Tulunadu News Posted On December 22, 2021


  • Share On Facebook
  • Tweet It

ಮಂಗಳೂರು: ವೈದ್ಯರೆಂದರೆ ಸಾಕ್ಷಾತ್ ನಾರಾಯಣನ ಅಪರಾವತಾರ ಎಂದು ‘ವೈದ್ಯೋ‌ನಾರಾಯಣೋ ಹರಿಃ’ ಎಂಬ ವಾಕ್ಯ ಸಾರಿ ಹೇಳುತ್ತದೆ. ನಿಜ ಜೀವನದಲ್ಲೂ ರೋಗಿಯನ್ನು ಸಾವಿನ ದವಡೆಯಿಂದ ಪಾರುಮಾಡಿ ಜೀವ ಉಳಿಸುವ ವೈದ್ಯರನ್ನು ದೇವರಂತೆ ಕಾಣುವವರು ಎಷ್ಟೋ ಮಂದಿಯಿದ್ದಾರೆ. ಅವರಲ್ಲಿ ಆ ರೀತಿಯ ಧನ್ಯತಾ ಭಾವವಿರುತ್ತದೆ ಎಂದರೆ ಅತಿಶಯೋಕ್ತಿಯಲ್ಲ. ಅಂಥಹದ್ದೇ ಒಂದು ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ವತಃ ವೈದ್ಯರೇ ಘಟನೆಯ ಬಗ್ಗೆ ವಿವರಿಸಿ ಫೋಟೋ ಸಹಿತ ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಇಂಟರ್​ವೆನ್ಷನಲ್​ ಕಾರ್ಡಿಯೊಲಜಿಸ್ಟ್​ ಆಗಿರುವ ಡಾ.ಪದ್ಮನಾಭ ಕಾಮತ್​ ತಮ್ಮಿಂದ ಚಿಕಿತ್ಸೆ ಪಡೆದ ಹೃದ್ರೋಗಿಯೋರ್ವನು ಧನ್ಯತಾ ಭಾವದಿಂದ ಕೃತಜ್ಞತೆ ಸಲ್ಲಿಸಿರುವ ಪರಿಯನ್ನು ಫೋಟೋ ಸಹಿತ ಹಂಚಿಕೊಂಡಿದ್ದಾರೆ. ಮೂರು ವಾರಗಳ ಹಿಂದೆ ಹೃದ್ರೋಗಿಯೋರ್ವನು ತಮ್ಮಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ. ಆತ ಸಂಪೂರ್ಣ ಗುಣಮುಖನಾದ ಬಳಿಕ ತಮ್ಮೊಂದಿಗೆ ನಡೆದುಕೊಂಡ ರೀತಿಗೆ ತಾನು ಮನಸೋತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಹೃದ್ರೋಗದಿಂದ ಬಳಲುತ್ತಿದ್ದಾತನಿಗೆ ನಮ್ಮ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ನೀಡಿದ್ದೆವು. ಜೀವ ಉಳಿಸಿದ ನಮಗೆ ಆತನು ದೇವರ ಪ್ರಸಾದವನ್ನು ತಂದುಕೊಟ್ಟದ್ದಲ್ಲದೆ, ಸಾಷ್ಟಾಂಗ ನಮಸ್ಕಾರ ಮಾಡಲು ಬಂದಿದ್ದಾರೆ. ಇಂಥದ್ದೊಂದು ಕೃತಜ್ಞತೆಯು ವ್ಯಕ್ತವಾಗಿರುವುದಕ್ಕೆ ಪ್ರತಿಯಾಗಿ ನಾನು ನನ್ನೆಲ್ಲ ರೋಗಿಗಳಿಗೆ ಶಿರಬಾಗುತ್ತೇನೆ.‌ ಈ ರೀತಿಯ ಕೃತಜ್ಞತೆ ನಮ್ಮ ಶ್ರೇಷ್ಠ ಭಾರತೀಯ ಸಂಸ್ಕೃತಿ ಎಂದು ಡಾ.ಪದ್ಮನಾಭ ಕಾಮತ್ ಬರೆದುಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
Tulunadu News December 9, 2023
ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
Tulunadu News December 8, 2023
Leave A Reply

  • Recent Posts

    • ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
  • Popular Posts

    • 1
      ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • 2
      ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • 3
      ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • 4
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 5
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search