• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ದೇವಾಲಯ ಕೆಡವಲು ಅಡ್ಡಬಂದವರ ಮನೆಗೆ ಬುಲ್ಡೋಜರ್!!

Hanumantha Kamath Posted On April 22, 2022
0


0
Shares
  • Share On Facebook
  • Tweet It

ಕಲ್ಲು ಬಿಸಾಡಿದವರ ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಭಾರತೀಯ ಜನತಾ ಪಾರ್ಟಿ ಹಾಗೂ ಆಮ್ ಆದ್ಮಿ ಪಕ್ಷಗಳು ಬುಲ್ಡೋಜರ್ ಹಾಯಿಸಲು ತೊಡಗಿದಾಗ ತಮ್ಮ ಬಾಯಿ ಬಡಿದು ಬೊಬ್ಬೆ ಹಾಕುತ್ತಿದ್ದ ಎಡಪಂಥಿಯರು, ಮಮತಾ ಮತ್ತು ಕಾಂಗ್ರೆಸ್ ನಾಯಕರು ಈಗ ಏನು ಹೇಳುತ್ತಾರೆ ಎನ್ನುವುದೇ ವಿಷಯ. ನಾನು ನೇರವಾಗಿ ವಿಷಯಕ್ಕೆ ಬರುತ್ತೇನೆ. ರಾಜಸ್ಥಾನದಲ್ಲಿ ಅಲಾವರ ಎನ್ನುವ ಸ್ಥಳವಿದೆ. ಅಲ್ಲಿ ಮುನ್ನೂರು ವರ್ಷಗಳ ಹಳೆಯ ದೇವಸ್ಥಾನವಿತ್ತು. ಶಿವನ ದೇವಾಲಯ. ಸ್ಥಳೀಯರು ಅದನ್ನು ಬಹಳ ಭಯಭಕ್ತಿಗಳಿಂದ ಆರಾಧಿಸಿಕೊಂಡು ಬರುತ್ತಿದ್ದರು. ಮೊನ್ನೆ ಅಲ್ಲಿನ ಸರಕಾರ ಆ ದೇವಸ್ಥಾನ ಸಹಿತ ಒಟ್ಟು ಮೂರು ದೇವಾಲಯಗಳನ್ನು ಓಡೆಯಲು ಮುಂದಾಗಿದೆ. ಬುಲ್ಡೋಜರ್ ಬರುತ್ತಿದ್ದಂತೆ ಸ್ಥಳೀಯರು ಅಡ್ಡ ಬಂದಿದ್ದಾರೆ. ಯಾವುದೇ ಕಾರಣಕ್ಕೂ ದೇವಾಲಯ ಕೆಡವಲು ಬಿಡುವುದಿಲ್ಲ ಎಂದು ಪ್ರತಿಭಟನೆ ಮಾಡಿದ್ದಾರೆ. ನೀವು ದೇವಾಲಯ ಕೆಡವಲು ಅಡ್ಡ ಬಂದರೆ ಮೂರ್ತಿಯನ್ನು ಮುರಿದು ಚರಂಡಿಗೆ ಬಿಸಾಡುತ್ತೇವೆ ಎಂದು ಕೆಡವಲು ಬಂದವರು ಹೇಳಿದ್ದಾರೆ.

ಕೊನೆಗೆ ಆ ಶಿವ ದೇವಾಲಯವನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ. ಕೆಡವಲು ಬಂದವರು ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಆ ಬಳಿಕ ಇನ್ನೆರಡು ದೇವಸ್ಥಾನಗಳನ್ನು ಕೂಡ ಕೆಡವಿ ಹೋಗಿದ್ದಾರೆ. ಇದು ಒಂದು ಹಂತ. ಇಷ್ಟೇ ಆಗಿದ್ರೆ ಅಲ್ಲಿರುವುದು ಕಾಂಗ್ರೆಸ್ ಸರಕಾರ, ಅವರಿಂದ ಅಲ್ಲಿನ ಜನ ಬೇರೆ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಅಂದುಕೊಳ್ಳಬಹುದು. ಆದರೆ ಅಲ್ಲಿನ ರಾಜ್ಯ ಸರಕಾರ ಒಂದು ಹೆಜ್ಜೆ ಮುಂದೆ ಹೋಗಿ ದೇವಸ್ಥಾನದ ಪರ ಪ್ರತಿಭಟನೆ ಮಾಡಿದವರ ಮನೆಗಳನ್ನು ಬುಲ್ಡೋಜರ್ ಬಳಸಿ ಕೆಡವಿಬಿಟ್ಟಿದೆ. ಹಾಗಾದರೆ ರಾಷ್ಟ್ರಾದ್ಯಂತ ಕಾಂಗ್ರೆಸ್ ನಿಲುವು ಏನು? ಹಿಂದೂ ದೇವಾಲಯಗಳನ್ನು ಕೆಡವುದು ಎನ್ನುವುದಾ? 300 ವರ್ಷಗಳ ಹಿಂದಿನ ದೇವಾಲಯ ಅನಧಿಕೃತ ಹೇಗಾಗುತ್ತದೆ? ಇನ್ನು ದೇವಾಲಯ ಉಳಿಸಲು ಪ್ರತಿಭಟಿಸಿದವರ ಮನೆಯನ್ನು ಇವರು ಕೆಡವಿದರಲ್ಲಾ? ಈಗ ಆ ಎಡಪಂಥಿಯರು, ಮಮತಾ ಹದಿನೈದು ದಿನಗಳ ನೋಟಿಸು ಕೊಟ್ಟಿದ್ದೀರಾ ಎಂದು ಯಾಕೆ ಕೇಳುವುದಿಲ್ಲ. ಹಾಗಾದರೆ ಮುಸ್ಲಿಂ ಗಲಭೆಕೋರರ ಮನೆಗಳನ್ನು ಕೆಡವಿದರೆ ಭಾತೃತ್ವ ಪ್ರೇಮ ಹುಟ್ಟುವ ಇವರಿಗೆ ದೇವಸ್ಥಾನಕ್ಕೆ ಹೋರಾಡಿದವರ ಮನೆಯನ್ನು ಕೆಡವಿದರೆ ಮಾತನಾಡಲು ಬಾಯಿ ಬರಲ್ವಾ? ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿಯಲ್ಲಿ ಏನು ಮಾಡಿದರೋ ಅದರ ವಿರುದ್ಧವಾಗಿ ಮುಸ್ಲಿಮರನ್ನು ಸಂತುಷ್ಟಗೊಳಿಸಲು ಕಾಂಗ್ರೆಸ್ ಕೈಗೊಂಡಿರುವ ನಿರ್ಧಾರ ಅವರಿಗೆ ರಾಷ್ಟ್ರಮಟ್ಟದಲ್ಲಿ ಹಿನ್ನಡೆ ಆಗುವುದು ನಿಜ!!

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Hanumantha Kamath February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Hanumantha Kamath February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search