• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಹೊಸ ಮಾರುಕಟ್ಟೆ ಆಗುವ ಮೊದಲೇ ಕುಲಾವಿ ಹೊಲೆದ ಕುತಂತ್ರಿ ಯಾರು?

Hanumantha Kamath Posted On November 9, 2022
0


0
Shares
  • Share On Facebook
  • Tweet It

ಮಂಗಳೂರಿನಲ್ಲಿ ನೂತನ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ಇನ್ನು ಕನಿಷ್ಟ 3 ವರ್ಷಗಳ ನಂತರ ತಲೆಎತ್ತಲಿದೆ. ಆದರೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರು ಎನ್ನುವ ಮಾತಿನಂತೆ ಮೂರು ವರ್ಷಗಳ ನಂತರ ಆಗುವ ಕಟ್ಟಡದಲ್ಲಿ 9 ಬೀಫ್ ಸ್ಟಾಲ್ ಗಳು ಇರಲಿವೆ ಎನ್ನುವ ಮಾಹಿತಿ ಹೊರಗೆ ಬಿದ್ದಿದೆ. ಇದು ಅಧಿಕೃತ ಮಾಹಿತಿಯೋ ಅಥವಾ ಹಿಂದಿನ ಬಾರಿದ್ದು ಈಗ ಲೀಕ್ ಆಗಿರುವುದೋ ಅಥವಾ ಇಂತಹ ಒಂದು ಲಿಸ್ಟ್ ಮಾಡಿದ್ದ ಫೋಟೋ ಹೇಗೆ ಹೊರಗೆ ಬಂತು ಎನ್ನುವುದರ ಬಗ್ಗೆ ಶಾಸಕರು ಮತ್ತು ಮೇಯರ್ ಅವರು ಮೊದಲು ಚರ್ಚೆ ಮಾಡಬೇಕು. ತಮ್ಮ ಗಮನಕ್ಕೆ ತರದೇ ಇಂತಹ ಒಂದು ಲಿಸ್ಟ್ ಮಾಡಿದವರು ಯಾರು? ಅದನ್ನು ಯಾರು, ಯಾಕೆ ಬಹಿರಂಗಗೊಳಿಸಿದರು ಎನ್ನುವುದನ್ನು ಮೊದಲು ಪತ್ತೆ ಮಾಡಬೇಕು. ಇದರಲ್ಲಿ ಮೊತ್ತಮೊದಲಾಗಿ ಕಂಡು ಬರುತ್ತಿರುವುದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ. ಯಾಕೆಂದರೆ ಕಟ್ಟಡಕ್ಕೆ ಭೂಮಿ ಪೂಜೆಯೇ ಆಗದೇ ಅಂಗಡಿಗಳನ್ನು ಹಂಚಲು ಅದೇನು ಆಶ್ರಯ ಯೋಜನೆಯ ವಸತಿ ಸಮುಚ್ಚಯ ಅಲ್ಲ. ಈಗ ಪಾಲಿಕೆಯ ವ್ಯಾಪ್ತಿಯಲ್ಲಿ ಬಡವರಿಗೆ ಸ್ವಂತ ಮನೆ ಕಟ್ಟಿಕೊಡಲು ಅಗತ್ಯವಿರುವಷ್ಟು ಜಾಗದ ಕೊರತೆ ಇರುವುದರಿಂದ ಫ್ಲಾಟ್ ಸಿಸ್ಟಮ್ ವ್ಯವಸ್ಥೆಯಲ್ಲಿ ನಿರ್ಮಾಣಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಅಲ್ಲಿ ಫ್ಲಾಟ್ ಕಟ್ಟುವಾಗ ಇಂತಿಷ್ಟು ಜನರಿಗೆ ಎಂದು ಘೋಷಣೆ ಮಾಡುವುದಕ್ಕೂ ಸೆಂಟ್ರಲ್ ಮಾರುಕಟ್ಟೆಯಲ್ಲಿ ಮಳಿಗೆ ಹಂಚುವುದಕ್ಕೂ ವ್ಯತ್ಯಾಸವಿದೆ. ಇಲ್ಲಿ ಒಂದು ಕಟ್ಟಡ ಕಟ್ಟಿದ ನಂತರ ಎಲ್ಲೆಲ್ಲಿ ತರಕಾರಿ, ಹಣ್ಣುಹಂಪಲು, ಬಟ್ಟೆ, ಚಪ್ಪಲಿ, ಪಾತ್ರೆ, ಮೀನು, ಮಾಂಸ ಎಂದು ನಿರ್ಧಾರ ಮಾಡಿ ಅದನ್ನು ಸೂಕ್ತವಾಗಿ ಹಂಚುವ ಕ್ರಮ ಇದೆ. ಯಾಕೆಂದರೆ ಎಲ್ಲಾ ಅಂಗಡಿಗಳು ಒಂದೇ ರೀತಿ ಮತ್ತು ಅಳತೆ ಇರುವುದಿಲ್ಲ.

ಇದು ಒಂದು ಭಾಗವಾದರೆ ಒಬ್ಬ ಅಂಗಡಿಯವನು ಕಳೆದ 12 ವರ್ಷಗಳಿಂದ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಆ ಅಂಗಡಿಯನ್ನು ಹೊಸದಾಗಿ ಏಲಂ ಮಾಡಬೇಕಾಗುತ್ತದೆ. ಅದರ ನಂತರ ಹೊಸದಾಗಿ ಏಲಂನಲ್ಲಿ ಪಡೆದುಕೊಂಡವರೆ ಅದನ್ನು ಮುಂದುವರೆಸಿಕೊಂಡು ಹೋಗುತ್ತಾರೆ. ಇಲ್ಲಿ ಕೂಡ ಸೆಂಟ್ರಲ್ ಮಾರುಕಟ್ಟೆಯ ಹಳೆ ಮಾರುಕಟ್ಟೆಯ ಕಟ್ಟಡದಲ್ಲಿದ್ದ ಭೀಪ್ ಸ್ಟಾಲ್ ನಲ್ಲಿ ಎಷ್ಟೋ ವರ್ಷಗಳಿಂದ ಅವರವರೇ ಹಳೆ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು ಹೋಗುತ್ತಿದ್ದಾರೆ. ಹಾಗಿರುವಾಗ ಅಲ್ಲಿ ಏಲಂ ನಡೆಸಲೇಬೇಕು. ಏಲಂ ನಡೆಸುವುದು ಕಡ್ಡಾಯ. ಇನ್ನು ಹೊಸದಾಗಿ ಏಲಂ ಬೀಫ್ ಸ್ಟಾಲ್ ಗಳಿಗೆ ಮಾಡುವುದಿಲ್ಲ ಎಂದು ಪಾಲಿಕೆಯವರು ನಿಶ್ಚಯಿಸಿದರೆ ಮುಗಿಯಿತು. ಯಾಕೆಂದರೆ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಜಾರಿಯಲ್ಲಿದೆ. ಆದ್ದರಿಂದ ಬೀಫ್ ಸ್ಟಾಲ್ ಏಲಂ ಮಾಡಲೇಬೇಕಾಗಿಲ್ಲ ಅಥವಾ ಬೀಫ್ ಸ್ಟಾಲ್ ಸೆಂಟ್ರಲ್ ಮಾರುಕಟ್ಟೆಯಲ್ಲಿ ಮಳಿಗೆ ತೆರೆಯಲೇಬೇಕಾಗಿಲ್ಲ. ಇನ್ನು 12 ವರ್ಷದಿಂದ ವ್ಯಾಪಾರ ಮಾಡುವವರು ತಮಗೆನೆ ಮಳಿಗೆ ಕೊಡಬೇಕು ಎಂದು ಹಟ ಹಿಡಿಯುವಂತಿಲ್ಲ. ಅವರು ಕೋರ್ಟಿಗೆ ಹೋದರೂ ಅದು ನಿಲ್ಲುವುದಿಲ್ಲ.

ಇನ್ನು ಈಗ ಲೀಕ್ ಆಗಿ ವಾಟ್ಸಪ್ ಗಳಲ್ಲಿ ವೈರಲ್ ಆಗುತ್ತಿರುವ ಪಾಲಿಕೆಯ ಅಂಗಡಿಗಳ ಲಿಸ್ಟ್ ಇತ್ತೀಚೆಗೆ ಮಾಡಿದಂತೆ ಕಾಣುವುದಿಲ್ಲ. ಅದು ಬಹುಶ: ಸಂಪೂರ್ಣ ಗೋಹತ್ಯಾ ನಿಷೇಧ ಕಾನೂನು ಭಾರತೀಯ ಜನತಾ ಪಾರ್ಟಿಯ ಸರಕಾರ ರಾಜ್ಯದಲ್ಲಿ ಜಾರಿಗೆ ತರುವ ಮೊದಲು ತಯಾರಿಸಿದ ಲಿಸ್ಟ್ ಆಗಿರಬಹುದು. ಈಗ ಹೊಸ ಕಾಯ್ದೆ ಬಂದ ಬಳಿಕ ಯಾವ ಶಾಸಕ, ಮೇಯರ್ ಕೂಡ ಭೀಪ್ ಸ್ಟಾಲಿಗೆ ಅನುಮತಿ ಕೊಡುವುದಿಲ್ಲ. ಆದರೆ ರಾಜಕೀಯದಲ್ಲಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಲು ತುಂಬಾ ದಾರಿಗಳಿವೆ. ಇದು ಅದರಲ್ಲಿ ಒಂದು ಅಷ್ಟೇ!

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Hanumantha Kamath September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Hanumantha Kamath September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search