• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಚಾರಣೆ ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ಆಗಬೇಕೆಂಬ ಹಟದ ಹಿಂದಿನ ಸಂಶಯ!!

Hanumantha Kamath Posted On November 12, 2022


  • Share On Facebook
  • Tweet It

ಮಳಲಿ ಮಸೀದಿ ವಿವಾದ ಒಂದು ಹಂತಕ್ಕೆ ಬಂದು ನಿಂತಿದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸಲು ಸಿವಿಲ್ ನ್ಯಾಯಾಲಯಕ್ಕೆ ಹಕ್ಕಿದೆ ಎನ್ನುವ ತೀರ್ಪು ಬರುತ್ತಿದ್ದಂತೆ ಹಿಂದೂ ಸಂಘಟನೆಗಳಿಗೆ ಖುಷಿಯಾಗಿದೆ. ಯಾಕೆಂದರೆ ಮಳಲಿ ಮಸೀದಿಯ ಪರ ವಾದ ಮಾಡುವವರ ವಾದವೇ ಬೇರೆ ಇತ್ತು. ಅವರ ಪ್ರಕಾರ ಸಿವಿಲ್ ನ್ಯಾಯಾಲಯಕ್ಕೆ ಈ ವಿಚಾರಣೆ ಮಾಡುವ ಹಕ್ಕಿಲ್ಲ. ಯಾಕೆಂದರೆ ಆ ಭೂಮಿ ವಕ್ಫ್ ಟ್ರಿಬ್ಯೂನಲ್ ಅವರದ್ದಾಗಿದೆ ಎಂದು ವಾದಿಸುತ್ತಲೇ ಬರಲಾಗುತ್ತಿತ್ತು. ಅಷ್ಟಕ್ಕೂ ಮಳಲಿಯ ಭೂಮಿ ವಕ್ಫ್ ಆಸ್ತಿಯಾಗಿದ್ದರೂ ವಕ್ಫ್ ಬೋರ್ಡಿಗೆ ಆ ಭೂಮಿ ಕೊಟ್ಟವರ್ಯಾರು? ವಕ್ಫ್ ಬೋರ್ಡ್ ಅದನ್ನು ಖರೀದಿಸಿರುವುದಿಲ್ಲ. ಯಾವುದೋ ಕಾಲಕ್ಕೆ ಯಾವುದೋ ಅರಸ ಮುಸ್ಲಿಮರಿಗೆ ಇಂತಿಷ್ಟು ಜಾಗವನ್ನು ಉಂಬಳಿಯಾಗಿ ಕೊಟ್ಟಿರುತ್ತಿದ್ದ. ಅಲ್ಲಿ ಕಾಲಾಂತರದಲ್ಲಿ ಅವರು ಅದನ್ನು ತಮ್ಮದೇ ಭೂಮಿ ಎಂದು ಸಾಧಿಸುತ್ತಲೇ ಬರುತ್ತಿದ್ದಾರೆ. ಈಗ ವಕ್ಫ್ ಭೂಮಿ ಆದ ಕೂಡಲೇ ಅಲ್ಲಿ ವಿಚಾರಣೆ ನಡೆದು ಪ್ರಕರಣ ಅವರ ಪರವಾಗಿ ಹೋಗುತ್ತದೆ ಎನ್ನುವ ಧೈರ್ಯ ಮುಸ್ಲಿಮರದ್ದು ಆಗಿರಬಹುದು. ಆದ್ದರಿಂದ ಇಂತಹ ಯಾವುದೇ ವಿವಾದ ಆದಾಗ ಅವರು ಅದು ನಮ್ಮ ವಕ್ಫ್ ಭೂಮಿ ಮತ್ತು ವಿಚಾರಣೆ ವಕ್ಫ್ ಟ್ರಿಬ್ಯೂನಲ್ ನಲ್ಲಿಯೇ ಆಗಬೇಕು ಎಂದು ಹಟ ಹಿಡಿಯುವುದು ಸಾಮಾನ್ಯ.
ಇದೆಲ್ಲ ಬಿಡಿ, ಮಳಲಿ ಮಸೀದಿ ವಿವಾದ ಬಹಳ ಚಿಕ್ಕದು. ಅಯೋಧ್ಯೆಯ ಪ್ರಕರಣವನ್ನೇ ತೆಗೆದುಕೊಳ್ಳಿ. ಅಲ್ಲಿ ಒಂದು ವಿವಾದಿತ ಕಟ್ಟಡ ಇತ್ತು. ಅದರ ವಿಚಾರಣೆ ಸ್ಥಳೀಯ ನ್ಯಾಯಾಲಯದಿಂದ ಹಿಡಿದು ಸುಪ್ರೀಂಕೋರ್ಟ್ ತನಕ ನಡೆದಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದು ಕೂಡ ಅದೇ ರೀತಿಯ ಪ್ರಕರಣ. ಆದ್ದರಿಂದ ಇದನ್ನು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಸುವುದಕ್ಕೆ ಎಲ್ಲಾ ಹಕ್ಕನ್ನು ನ್ಯಾಯಾಲಯ ಹೊಂದಿದೆ. ಬೇಕಾದರೆ ಅವರಿಗೆ ಇಲ್ಲಿ ಬರುವ ತೀರ್ಪು ಸಮಾಧಾನಕರವಲ್ಲದಿದ್ದರೆ ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು. ಅದರಲ್ಲಿಯೂ ತಾವು ನಿರೀಕ್ಷಿಸಿದ ತೀರ್ಪು ಬರದಿದ್ದರೆ ಸುಪ್ರೀಂಕೋರ್ಟಿಗೆ ಹೋಗಬಹುದು. ಅದನ್ನು ಬಿಟ್ಟು ತಮಗೆ ಬೇಕಾದ ಕಡೆಯಲ್ಲಿಯೇ ವಿಚಾರಣೆ ನಡೆಯಬೇಕು. ತಾವು ಬಯಸಿದ ಕಡೆ ವಿಚಾರಣೆ ಆದರೆ ತಮಗೆ ಬೇಕಾದ ತೀರ್ಪು ಬರುತ್ತದೆ ಎಂಬ “ದೂರದೃಷ್ಟಿ” ಯಾರಿಗೂ ಇರಕೂಡದು. ಆದರೆ ಮುಸ್ಲಿಮರ ಹಟ ನೋಡಿದರೆ ಇಂತಹ ಸಂಶಯ ಬರುವುದು ಸಾಮಾನ್ಯ. ಅಷ್ಟಕ್ಕೂ ನೀವು ಒಮ್ಮೆ ಮಳಲಿಯ ಆ ಮಸೀದಿ ಇರುವ ಜಾಗವನ್ನು ನೋಡಬೇಕು. ಬಹಳ ಹಳೆ ನಿರ್ಮಾಣ. ಅದನ್ನು ನವೀಕರಿಸುವುದಕ್ಕಾಗಿ ಮಸೀದಿಯ ಆಡಳಿತ ಮಂಡಳಿಯವರು ಕಟ್ಟಡವನ್ನು ಒಡೆದಿದ್ದರು. ಒಡೆದು ನೋಡುವಾಗ ಅಲ್ಲಿ ದೇವಸ್ಥಾನದ ಶೈಲಿಯ ಕೆತ್ತನೆಗಳು ಕಂಡು ಬಂದವು. ಈಗಾಗಲೇ ಉತ್ತರ ಭಾರತದ ಕೆಲವು ಕಡೆ ಮಸೀದಿಯ ಒಳಗೆ ಹಿಂದೂ ದೇವರ ಮತ್ತು ದೇವಾಲಯಗಳ ಶೈಲಿಯ ಅಸ್ತಿತ್ವವನ್ನು ಮಾಧ್ಯಮಗಳ ಮೂಲಕ ಪ್ರಪಂಚವೇ ನೋಡಿದೆ. ಆದ್ದರಿಂದ ಇಲ್ಲಿಯೂ ಅಂತಹುದೇ ಅನುಮಾನಗಳು ಕಂಡು ಬಂದಾಗ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ತೀರ್ಮಾನಿಸಿದವು. ಮಳಲಿ ಮಸೀದಿಯ ಆಡಳಿತ ಮಂಡಳಿಯೊಂದಿಗೆ ಸೌಹಾರ್ದ ಮಾತುಕತೆ ನಡೆಸಲಾಯಿತು. ಆದರೆ ಯಾರೂ ಕೂಡ ಈ ಕುರಿತು ಯಾವುದೇ ನಿರ್ಧಾರಕ್ಕೆ ಬರಲು ಆಗುವುದಿಲ್ಲ ಎಂದು ಅನಿಸಲು ಶುರುವಾಗಿತ್ತು. ನಂತರ ವೀಲ್ಯ ಪ್ರಶ್ನೆಯನ್ನು ಹಾಕಲಾಯಿತು. ಅದರಲ್ಲಿ ಆ ಪ್ರದೇಶದಲ್ಲಿ ಒಂದು ಕಾಲದಲ್ಲಿ ಹಿಂದೂ ದೇವರ ಆರಾಧನೆ ನಡೆಯುತ್ತಿರುವುದರ ಕುರುಹು ಕಂಡುಬಂದಿತ್ತು. ಈಗ ಅದರ ವಿಚಾರಣೆ ನಡೆಸುವ ವ್ಯಾಪ್ತಿ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಇದೆ ಎನ್ನುವ ಆದೇಶ ಬಂದಿದೆ ಬಿಟ್ಟರೆ ಪ್ರಕರಣ ಇನ್ನೂ ಮುಗಿದಿಲ್ಲ. ಒಂದು ಕಾಲದಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ಸಿಗರು ಇದ್ದಬದ್ದ ಜಮೀನುಗಳನ್ನು ವಕ್ಫ್ ಬೋರ್ಡಿಗೆ ನೀಡುತ್ತಿದ್ದರು. ಅದರಿಂದ ಇವತ್ತು ವಕ್ಫ್ ಬೋರ್ಡ್ ಎನ್ನುವುದು ಅತ್ಯಂತ ಬಲಿಷ್ಟ ಭೂ ಓಡೆಯನಾಗಿ ಬೆಳೆದು ನಿಂತಿದೆ. ಒಂದು ಕಾಲದಲ್ಲಿ ಅದೆಲ್ಲಾ ಸರಕಾರದ ಭೂಮಿಯಾಗಿತ್ತು. ಈಗ ಅದನ್ನು ತನ್ನದು ಎಂದು ಹೇಳಿ ವಿವಾದವಾದರೆ ಅದನ್ನು ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ನಡೆಸಬೇಕು ಎಂದು ವಾದ ಮಾಡಲಾಗುತ್ತಿದೆ. ಒಟ್ಟಿನಲ್ಲಿ ದೈವ ದೇವರುಗಳ ನೆಲೆಬೀಡಾಗಿರುವ ತುಳುನಾಡಿನಲ್ಲಿ ಕೊನೆಗೆ ಸತ್ಯವೇ ಗೆಲ್ಲಲಿ ಎಂದು ನಮ್ಮ ಪ್ರಾರ್ಥನೆ.
  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Hanumantha Kamath March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Hanumantha Kamath March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search