• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ನೆಲದ ಆಚರಣೆಗೆ ದಕ್ಕೆ ಬರದಂತೆ ಕ್ರಮ ಕೈಗೊಂಡ ನಳಿನ್ ಕುಮಾರ್ ಕಟೀಲ್

Tulunadu News Posted On February 9, 2023
0


0
Shares
  • Share On Facebook
  • Tweet It

ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರಿನ ಪದವಿನಂಗಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿತ್ತು. ಅಮಿತ್ ಶಾ ಆಗಮಿಸುವ ರಸ್ತೆಯ ಉದ್ದಕ್ಕೂ ಅವರ ಸುರಕ್ಷತೆಗೆ ಪೊಲೀಸ್ ಇಲಾಖೆಯಿಂದ ರಕ್ಷಣಾ ಸಿದ್ಧತೆ ಈಗಾಗಲೇ ಆರಂಭವಾಗಿತ್ತು.

ಆದರೆ ಪದವಿನಂಗಡಿಯಲ್ಲಿ ಅಂದೇ ಕಾರ್ಣಿಕದ ಕೊರಗಜ್ಜನ ಕೋಲ ಇದ್ದ ಕಾರಣ ರಸ್ತೆ ಉದ್ದಕ್ಕೂ ಕೋಲದ ಪ್ರಯುಕ್ತ ವಿಶೇಷ ಲೈಟಿಂಗ್ ವ್ಯವಸ್ಥೆಯನ್ನು ಆಯೋಜಕರು ಮಾಡಿದ್ದರು. ಆದರೆ ಪೊಲೀಸರು ಅದನ್ನು ತೆಗೆದು ಹಾಕಲು ಮುಂದಾಗುತ್ತಿದ್ದಂತೆ ವಿಷಯ ಸಂಸದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ಬಂದಿದೆ.

ಅವರು ತಕ್ಷಣ ಸ್ಥಳೀಯ ಶಾಸಕರನ್ನು, ಪೊಲೀಸ್ ಕಮೀಷನರ್ ಅವರನ್ನು ಕರೆಸಿ ಕೋಲಕ್ಕೆ ಹಾಕಲಾಗಿರುವ ಯಾವುದೇ ಲೈಟಿಂಗ್ಸ್ ಅಥವಾ ಬೇರೆ ವ್ಯವಸ್ಥೆಗೆ ಪೊಲೀಸ್ ಇಲಾಖೆ ತೊಂದರೆ ಕೊಡಬಾರದು. ಪಕ್ಷದ ಕಾರ್ಯಕ್ರಮವನ್ನು ಅಲ್ಲಿಂದ ಬೇರೆಡೆ ಶಿಫ್ಟ್ ಮಾಡುತ್ತೇವೆ ಎಂದು ಸೂಚಿಸಿದ್ದಾರೆ.

ಈ ನೆಲದ ಸಂಸ್ಕೃತಿ, ಆಚಾರ, ಪರಂಪರೆಗೆ ತೊಂದರೆ ಮಾಡಿ ಪಕ್ಷದ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಹೇಳುವ ಮೂಲಕ ನಳಿನ್ ತುಳುನಾಡಿನ ಜನರ ಹೃದಯ ಗೆದ್ದಿದ್ದಾರೆ. ಕೊರಗಜ್ಜನ ಕೃಪೆ ನಳಿನ್ ಅವರ ಮೇಲೆ ಯಾವತ್ತೂ ಇರಲಿ ಎಂದು ಅಜ್ಜನ ಭಕ್ತರು ಹರಸಿದ ಘಟನೆಯೂ ನಡೆದಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search