• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ನೆಲದ ಆಚರಣೆಗೆ ದಕ್ಕೆ ಬರದಂತೆ ಕ್ರಮ ಕೈಗೊಂಡ ನಳಿನ್ ಕುಮಾರ್ ಕಟೀಲ್

Tulunadu News Posted On February 9, 2023
0


0
Shares
  • Share On Facebook
  • Tweet It

ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರಿನ ಪದವಿನಂಗಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿತ್ತು. ಅಮಿತ್ ಶಾ ಆಗಮಿಸುವ ರಸ್ತೆಯ ಉದ್ದಕ್ಕೂ ಅವರ ಸುರಕ್ಷತೆಗೆ ಪೊಲೀಸ್ ಇಲಾಖೆಯಿಂದ ರಕ್ಷಣಾ ಸಿದ್ಧತೆ ಈಗಾಗಲೇ ಆರಂಭವಾಗಿತ್ತು.

ಆದರೆ ಪದವಿನಂಗಡಿಯಲ್ಲಿ ಅಂದೇ ಕಾರ್ಣಿಕದ ಕೊರಗಜ್ಜನ ಕೋಲ ಇದ್ದ ಕಾರಣ ರಸ್ತೆ ಉದ್ದಕ್ಕೂ ಕೋಲದ ಪ್ರಯುಕ್ತ ವಿಶೇಷ ಲೈಟಿಂಗ್ ವ್ಯವಸ್ಥೆಯನ್ನು ಆಯೋಜಕರು ಮಾಡಿದ್ದರು. ಆದರೆ ಪೊಲೀಸರು ಅದನ್ನು ತೆಗೆದು ಹಾಕಲು ಮುಂದಾಗುತ್ತಿದ್ದಂತೆ ವಿಷಯ ಸಂಸದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ಬಂದಿದೆ.

ಅವರು ತಕ್ಷಣ ಸ್ಥಳೀಯ ಶಾಸಕರನ್ನು, ಪೊಲೀಸ್ ಕಮೀಷನರ್ ಅವರನ್ನು ಕರೆಸಿ ಕೋಲಕ್ಕೆ ಹಾಕಲಾಗಿರುವ ಯಾವುದೇ ಲೈಟಿಂಗ್ಸ್ ಅಥವಾ ಬೇರೆ ವ್ಯವಸ್ಥೆಗೆ ಪೊಲೀಸ್ ಇಲಾಖೆ ತೊಂದರೆ ಕೊಡಬಾರದು. ಪಕ್ಷದ ಕಾರ್ಯಕ್ರಮವನ್ನು ಅಲ್ಲಿಂದ ಬೇರೆಡೆ ಶಿಫ್ಟ್ ಮಾಡುತ್ತೇವೆ ಎಂದು ಸೂಚಿಸಿದ್ದಾರೆ.

ಈ ನೆಲದ ಸಂಸ್ಕೃತಿ, ಆಚಾರ, ಪರಂಪರೆಗೆ ತೊಂದರೆ ಮಾಡಿ ಪಕ್ಷದ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಹೇಳುವ ಮೂಲಕ ನಳಿನ್ ತುಳುನಾಡಿನ ಜನರ ಹೃದಯ ಗೆದ್ದಿದ್ದಾರೆ. ಕೊರಗಜ್ಜನ ಕೃಪೆ ನಳಿನ್ ಅವರ ಮೇಲೆ ಯಾವತ್ತೂ ಇರಲಿ ಎಂದು ಅಜ್ಜನ ಭಕ್ತರು ಹರಸಿದ ಘಟನೆಯೂ ನಡೆದಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search