• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಟ್ ಆಂಡ್ ರನ್ ಪ್ರಕರಣ: ಸವಾರ ಸಾವು

Tulunadu News Posted On June 12, 2023
0


0
Shares
  • Share On Facebook
  • Tweet It

ಗಾಯಾಳು ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಳ್ಳಾಲ : ಬೈಕ್‍ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕಳೆದ ಜೂ.4 ರ ಭಾನುವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಾವಣಿಯ ಇನ್ನೋವ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು.ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೆÇಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು,ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದ ತೇಜಸ್ ಕೋಮಾ ಸ್ಥಿತಿಯಲ್ಲಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು.ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.ಮೃತರು ತಂದೆ ರಾಮ ಕುಲಾಲ್,ತಾಯಿ ರೇವತಿ ಮತ್ತು ಸಹೋದರ ರವೀಂದ್ರ ಅವರನ್ನು ಅಗಲಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search