• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಡುಗಿಯನ್ನು ರಕ್ಷಣೆಯ ಸಂದರ್ಭ ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಡಾ.ಭರತ್ ಶೆಟ್ಟಿ ವೈ

Tulunadu News Posted On June 29, 2023
0


0
Shares
  • Share On Facebook
  • Tweet It

ಮಂಗಳೂರು: ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಹಿಂದೂ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದಿದ್ದು
ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.
ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.

 

 

ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು.ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ.
ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


#bharathshettyy #bjpmangalore


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search