• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಡುಗಿಯನ್ನು ರಕ್ಷಣೆಯ ಸಂದರ್ಭ ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಡಾ.ಭರತ್ ಶೆಟ್ಟಿ ವೈ

Tulunadu News Posted On June 29, 2023
0


0
Shares
  • Share On Facebook
  • Tweet It

ಮಂಗಳೂರು: ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಹಿಂದೂ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದಿದ್ದು
ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.
ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.

 

 

ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು.ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ.
ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


#bharathshettyy #bjpmangalore


Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search