• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಡುಗಿಯನ್ನು ರಕ್ಷಣೆಯ ಸಂದರ್ಭ ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಡಾ.ಭರತ್ ಶೆಟ್ಟಿ ವೈ

Tulunadu News Posted On June 29, 2023
0


0
Shares
  • Share On Facebook
  • Tweet It

ಮಂಗಳೂರು: ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಹಿಂದೂ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದಿದ್ದು
ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.
ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.

 

 

ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು.ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ.
ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


#bharathshettyy #bjpmangalore


Trending Now
ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
Tulunadu News July 2, 2025
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
  • Popular Posts

    • 1
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 2
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 3
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 4
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 5
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!

  • Privacy Policy
  • Contact
© Tulunadu Infomedia.

Press enter/return to begin your search