• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಡುಗಿಯನ್ನು ರಕ್ಷಣೆಯ ಸಂದರ್ಭ ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಡಾ.ಭರತ್ ಶೆಟ್ಟಿ ವೈ

Tulunadu News Posted On June 29, 2023
0


0
Shares
  • Share On Facebook
  • Tweet It

ಮಂಗಳೂರು: ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಹಿಂದೂ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದಿದ್ದು
ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.
ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.

 

 

ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು.ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ.
ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


#bharathshettyy #bjpmangalore


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search