• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಡುಗಿಯನ್ನು ರಕ್ಷಣೆಯ ಸಂದರ್ಭ ಚೂರಿ ಇರಿತಕ್ಕೊಳಗಾದ ಭವಿತ್ ಭೇಟಿ ಮಾಡಿದ ಡಾ.ಭರತ್ ಶೆಟ್ಟಿ ವೈ

Tulunadu News Posted On June 29, 2023
0


0
Shares
  • Share On Facebook
  • Tweet It

ಮಂಗಳೂರು: ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದ ಅನ್ಯಕೋಮಿನ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಭವಿತ್ ಎಂಬ ಯುವಕನಿಗೆ ಚೂರಿ ಇರಿದಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಶಾಸಕರಿಗೆ ಮಾಹಿತಿ ನೀಡಿದ ಭವಿತ್ ಹಿಂದೂ ಯುವತಿಯೊಬ್ಬಳು ತಣ್ಣೀರುಬಾವಿ ಬಳಿ ಮನೆಗೆ ಹೋಗುತ್ತಿದ್ದ ಸಂದರ್ಭ ಆರೋಪಿ ಸಾದಿಕ್ ಹುಡುಗಿಯನ್ನು ಹಿಂಬಾಲಿಸಿಕೊಂಡು ಬಂದಿದ್ದು
ಆಕೆ ಭಯಗೊಂಡು ಧನುಷ್ ಎಂಬಾತನ ಮನೆಗೆ ಹೋಗಿ ನನಗೆ ಫೋನ್ ಮಾಡಿ ತಿಳಿಸಿದ್ದಾರೆ.
ತಾನು ಸಾದಿಕ್ ನನ್ನು ಪ್ರಶ್ನಿಸಿದಾಗ ಸಾದಿಕ್ ಕೆಟ್ಟದಾಗಿ ಬೈದು ಕೊಲ್ಲುವ ಉದ್ದೇಶದಿಂದ ಚೂರಿ ಇರಿದಿದ್ದಾನೆ ಎಂದು ಮಾಹಿತಿ ನೀಡಿದರು.

 

 

ಚೂರಿ ಇರಿದ ಆರೋಪಿ ತಣ್ಣೀರುಬಾವಿ ನಿವಾಸಿ ಸಾದಿಕ್ ಎಂಬಾತನಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಣಂಬೂರು ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದೇನೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಂತಹ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು.ಇದನ್ನೇ ಕೋಮು ಗಲಭೆಗೆ ಬಳಸಿ ಹಿಂದೂ ಸಂಘಟನೆಯ ಯುವಕರ ಮೇಲೆ ಗೂಬೆ ಕೂರಿಸುವ ಸಂಚು ಈ ಕಾಂಗ್ರೆಸ್ ಸರಕಾರದಲ್ಲಿ ನಡೆಯುವ ಶಂಕೆಯೂ ನನಗಿದೆ. ಹಿಂದೂ ಯುವತಿಯರ ರಕ್ಷಣೆಗೆ ಹಿಂದೂ ಸಮಾಜ ಶಕ್ತವಾಗಿದೆ. ದೂರದ ಪಶ್ಚಿಮ ಬಂಗಾಳದಂತಹ ರಾಜ್ಯದಲ್ಲಿ ಆಗುವ ಇಂತಹ ಘಟನೆ ಇಲ್ಲಿ ನಡೆಯಲು ಆರಂಭವಾಗಿರುವುದು ಆತಂಕಕಾರಿ.
ಇಂತಹ ಸೂಕ್ಷ ವಿಚಾರವನ್ನು ನೈತಿಕ ಪೊಲೀಸ್ ಗಿರಿ ಎಂದು ಬಣ್ಣ ಹಚ್ಚಲು ಅವಕಾಶ ಕೊಡದೆ ಪೊಲೀಸರು ತಕ್ಷಣ ಬಗೆಹರಿಸಲು ಕ್ರಮ ಜರಗಿಸಬೇಕು. ಹೊಸ ಹೋರಾಟ ,ಪ್ರತಿಭಟನೆಗೆ ಅವಕಾಶ ನೀಡಬೇಡಿ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ತೀವ್ರ ನಿಗಾವಹಿಸಬೇಕು ಎಂದು ಎಚ್ಚರಿಸಿದರು.
ಮನಪಾ ಸದಸ್ಯರಾದ ಸುನಿತಾ ಯುವಮೋರ್ಚಾ ಪ್ರಮುಖರಾದ ಭರತ್ ರಾಜ್, ಸಂಜಿತ್ ಶೆಟ್ಟಿ, ರಾಹುಲ್, ಹರಿಪ್ರಸಾದ್ ಶೆಟ್ಟಿ, ದಿವೇಶ್, ತಿಲಕ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


#bharathshettyy #bjpmangalore


Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search