• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

Tulunadu News Posted On June 29, 2023
0


0
Shares
  • Share On Facebook
  • Tweet It

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಹಾಗೂ ಸ್ಥಳದಲ್ಲಿ ಕರ್ತವ್ಯ ನಿರತ ಗೃಹರಕ್ಷಕದಳ ಸಿಬ್ಬಂದಿ ಪ್ರಸಾದ್ ಸುವರ್ಣ ಸೇರಿ ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ಸಂದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಈ ನಡುವೆ ಸಮುದ್ರದ ನೀರಿನಲ್ಲಿ ಆಡಲು ತೊಡಗಿದ್ದ ಮೂವರ ಪೈಕಿ ನಿಝಾಂ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search