• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಚಿವರ ಮಾಧ್ಯಮ ಸಂಯೋಜಕನಿಂದ ಸೂಲಿಬೆಲೆಯವರಿಗೆ ಬೆದರಿಕೆ!

Tulunadu News Posted On July 12, 2023


  • Share On Facebook
  • Tweet It

ಇತ್ತೀಚಿಗೆ ತಿ ನರಸೀಪುರದಲ್ಲಿ ಹಿಂದೂ ಯುವಕ ವೇಣುಗೋಪಾಲನ ಹತ್ಯೆಯ ಆರೋಪಿಗಳು ಸಚಿವ ಮಹದೇವಪ್ಪನವರ ಮಗನ ಒಡನಾಡಿಗಳು ಎಂಬ ಮಾತು ಕೇಳಿಬಂದಿತ್ತು. ಈಗ ಸಚಿವ ಮಹದೇವಪ್ಪ ತಮ್ಮ ಮಾಧ್ಯಮ ಸಂಯೋಜಕ ನೇಮಕಾತಿಯಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಸಚಿವರ ಮಾಧ್ಯಮ ಸಂಯೋಜಕನಾಗಿ ನೇಮಕವಾಗಿರುವ ರಮೇಶ ಎಚ್ ಕೆ ಎಂಬಾತ ತನ್ನ ಫೇಸ್‌ಬುಕ್‌ ಮತ್ತು ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದಿಯಾಗಿ ಸಮಾಜದ ಅನೇಕ ಗಣ್ಯವ್ಯಕ್ತಿಗಳ ಮೇಲೆ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದಾನೆ.

ಮಾಧ್ಯಮ ಸಂಯೋಜಕನಾಗಿ ಸರ್ಕಾರಿ ವೆಚ್ಚದಲ್ಲಿ ಸಂಬಳ ಪಡೆಯುವ ಈತ ಹಿರಿಯ ಮುತ್ಸದ್ದಿ ದೇವೇಗೌಡರ ಕುರಿತು ” ಈತನಿಗೆ ವಯಸ್ಸಾಗಿದೆ, ತಲೆಯಲ್ಲಿ ಕೂದಲೂ ಬುದ್ಧಿಯೂ ಇಲ್ಲ” ಎಂದು ತುಚ್ಛವಾಗಿ ಬರೆದಿದ್ದಾನೆ. ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಕುರಿತು ಅವಾಚ್ಯವಾಗಿ ನಿಂದಿಸಿದ್ದಲ್ಲದೇ “ನಿನಗೂ ಖಾರದ ಪುಡಿ ಫಿಕ್ಸ್” ಎಂದೆಲ್ಲಾ ಜೀವ ಬೆದರಿಕೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಅಭಿಮಾನಿಯೊಬ್ಬ ಬೆಂಗಳೂರಿನಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ಇಂತಹ ಸಮಾಜ ಘಾತುಕ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಅಷ್ಟೇಅಲ್ಲ ಪಬ್ಲಿಕ್ ಟಿವಿಯ ರಂಗನಾಥ್ ಅವರ ಕುರಿತಂತೆಯೂ ಈತ ಕೆಟ್ಟದಾಗಿ ಪೋಸ್ಟ್ ಹಾಕಿದ್ದಾನೆ.

ಸಚಿವರ ಮಾಧ್ಯಮ ಸಂಯೋಜಕನೊಬ್ಬನಿಗೆ ಇರಬೇಕಾದ ಯಾವ ಯೋಗ್ಯತೆಯೂ ಇಲ್ಲದ ಈ ರಮೇಶನನ್ನು ಕೂಡಲೇ ಕೆಲಸದಿಂದ ಉಚ್ಚಾಟಿಸಿ ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಜನ ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಇಂತಹ ಅಯೋಗ್ಯರಿಗೇ ಅದು ಹೇಗೆ ಸರ್ಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕೆಲಸ ಸಿಗುತ್ತವೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಮಹದೇವಪ್ಪನವರು ಇಂತಹ ಬಾಯಿ ಹರುಕನನ್ನು ಹುದ್ದೆಯಿಂದ ಕೆಳಗಿಳಿಸಿ ತಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳುತ್ತಾರಾ? ನೋಡಬೇಕು.

  • Share On Facebook
  • Tweet It


- Advertisement -


Trending Now
ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
Tulunadu News September 26, 2023
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
Leave A Reply

  • Recent Posts

    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
  • Popular Posts

    • 1
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 2
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 3
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 4
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 5
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search