• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಚಿವರ ಮಾಧ್ಯಮ ಸಂಯೋಜಕನಿಂದ ಸೂಲಿಬೆಲೆಯವರಿಗೆ ಬೆದರಿಕೆ!

Tulunadu News Posted On July 12, 2023


  • Share On Facebook
  • Tweet It

ಇತ್ತೀಚಿಗೆ ತಿ ನರಸೀಪುರದಲ್ಲಿ ಹಿಂದೂ ಯುವಕ ವೇಣುಗೋಪಾಲನ ಹತ್ಯೆಯ ಆರೋಪಿಗಳು ಸಚಿವ ಮಹದೇವಪ್ಪನವರ ಮಗನ ಒಡನಾಡಿಗಳು ಎಂಬ ಮಾತು ಕೇಳಿಬಂದಿತ್ತು. ಈಗ ಸಚಿವ ಮಹದೇವಪ್ಪ ತಮ್ಮ ಮಾಧ್ಯಮ ಸಂಯೋಜಕ ನೇಮಕಾತಿಯಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಸಚಿವರ ಮಾಧ್ಯಮ ಸಂಯೋಜಕನಾಗಿ ನೇಮಕವಾಗಿರುವ ರಮೇಶ ಎಚ್ ಕೆ ಎಂಬಾತ ತನ್ನ ಫೇಸ್‌ಬುಕ್‌ ಮತ್ತು ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದಿಯಾಗಿ ಸಮಾಜದ ಅನೇಕ ಗಣ್ಯವ್ಯಕ್ತಿಗಳ ಮೇಲೆ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದಾನೆ.

ಮಾಧ್ಯಮ ಸಂಯೋಜಕನಾಗಿ ಸರ್ಕಾರಿ ವೆಚ್ಚದಲ್ಲಿ ಸಂಬಳ ಪಡೆಯುವ ಈತ ಹಿರಿಯ ಮುತ್ಸದ್ದಿ ದೇವೇಗೌಡರ ಕುರಿತು ” ಈತನಿಗೆ ವಯಸ್ಸಾಗಿದೆ, ತಲೆಯಲ್ಲಿ ಕೂದಲೂ ಬುದ್ಧಿಯೂ ಇಲ್ಲ” ಎಂದು ತುಚ್ಛವಾಗಿ ಬರೆದಿದ್ದಾನೆ. ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಕುರಿತು ಅವಾಚ್ಯವಾಗಿ ನಿಂದಿಸಿದ್ದಲ್ಲದೇ “ನಿನಗೂ ಖಾರದ ಪುಡಿ ಫಿಕ್ಸ್” ಎಂದೆಲ್ಲಾ ಜೀವ ಬೆದರಿಕೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಅಭಿಮಾನಿಯೊಬ್ಬ ಬೆಂಗಳೂರಿನಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ಇಂತಹ ಸಮಾಜ ಘಾತುಕ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಅಷ್ಟೇಅಲ್ಲ ಪಬ್ಲಿಕ್ ಟಿವಿಯ ರಂಗನಾಥ್ ಅವರ ಕುರಿತಂತೆಯೂ ಈತ ಕೆಟ್ಟದಾಗಿ ಪೋಸ್ಟ್ ಹಾಕಿದ್ದಾನೆ.

ಸಚಿವರ ಮಾಧ್ಯಮ ಸಂಯೋಜಕನೊಬ್ಬನಿಗೆ ಇರಬೇಕಾದ ಯಾವ ಯೋಗ್ಯತೆಯೂ ಇಲ್ಲದ ಈ ರಮೇಶನನ್ನು ಕೂಡಲೇ ಕೆಲಸದಿಂದ ಉಚ್ಚಾಟಿಸಿ ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಜನ ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಇಂತಹ ಅಯೋಗ್ಯರಿಗೇ ಅದು ಹೇಗೆ ಸರ್ಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕೆಲಸ ಸಿಗುತ್ತವೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಮಹದೇವಪ್ಪನವರು ಇಂತಹ ಬಾಯಿ ಹರುಕನನ್ನು ಹುದ್ದೆಯಿಂದ ಕೆಳಗಿಳಿಸಿ ತಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳುತ್ತಾರಾ? ನೋಡಬೇಕು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search