• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಶ್ಯಾಮ್ ಅವರಿಗೆ ಹಿಂದೂ ಕಾರ್ಯಕರ್ತರ ಕೃತಜ್ಞತೆ

Tulunadu News Posted On July 19, 2023
0


0
Shares
  • Share On Facebook
  • Tweet It

ಹಿಂದೂ ಕಾರ್ಯಕರ್ತ, ಯುವ ಬ್ರಿಗೇಡ್ ಟಿ. ನರಸಿಂಹಪುರ ಸಂಚಾಲಕರಾಗಿದ್ದ ವೇಣುಗೋಪಾಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ವಿಷಯ ರಾಜ್ಯವ್ಯಾಪಿ ಹಿಂದೂ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜುಲೈ 8 ರಂದು ಹನುಮ ಜಯಂತಿ ಆಚರಣೆಯ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಮರುದಿನ ವೇಣುಗೋಪಾಲ್ ಹಾಗೂ ಅವರ ಮನೆಯವರಿಗೆ ಪರಿಚಯವಿದ್ದ ಕೆಲವು ವ್ಯಕ್ತಿಗಳು ಮಾತುಕತೆಗೆ ಎಂದು ಕರೆದು ಹತ್ಯೆ ಮಾಡಿದ್ದರು.


ಅಗಲಿದ ಹಿಂದೂ ಕಾರ್ಯಕರ್ತನ ಆತ್ಮಕ್ಕೆ ಸದ್ಗತಿ ಕೋರಿ ಜುಲೈ 18 ಮಂಗಳವಾರದಂದು ತಿ ನರಸಿಂಹಪುರದ ಗುಂಜ ನರಸಿಂಹ ಸ್ವಾಮಿ ದೇವಾಲಯದ ಪಕ್ಕದ ಸ್ಥಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲೆ, ಬಸವರಾಜ ಪಾಟೀಲ್ ಯತ್ನಾಳ್ ಹಾಗೂ ಅನೇಕ ಗಣ್ಯರು ಭಾಗವಹಿಸುವವರಿದ್ದರು. ಆದರೆ ಸರಕಾರದ ಗೃಹ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಸರಕಾರದ ಅನುಮತಿ ನಿರಾಕರಣೆಯ ವಿರುದ್ಧ ವೇಣುಗೋಪಾಲ್ ಪರ ಸಂಘಟನೆಗಳು ಹಾಗೂ ಸಮಾನ ಮನಸ್ಕರು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಸಂಘಟನೆಗಳ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು. ಅರುಣ್ ಶ್ಯಾಮ್ ಅವರ ಪರಿಣಾಮಕಾರಿ ಅಂಶಗಳನ್ನು ಪರಿಗಣಿಸಿದ ಘನ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಅಸಂಖ್ಯಾತ ಹಿಂದೂ ಕಾರ್ಯಕರ್ತರು ಅರುಣ್ ಶ್ಯಾಮ್ ಅವರಿಗೆ ಈ ಬಗ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search