• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಮಯಕ್ಕೆ ಸಿಗದ ಆಂಬ್ಯುಲೆನ್ಸ್‌ ವೆಂಟಿಲೇಟರ್‌; ಉಸಿರು ನಿಲ್ಲಿಸಿದ 3 ತಿಂಗಳ ಮಗು

Tulunadu News Posted On July 21, 2023


  • Share On Facebook
  • Tweet It

ಸರಿಯಾದ‌ ಸಮಯಕ್ಕೆ ಸರ್ಕಾರಿ‌ ವೆಂಟಿಲೇಟರ್ ಆಂಬ್ಯುಲೆನ್ಸ್ ಸಿಗದ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ 3 ತಿಂಗಳ ಗಂಡು ಮಗು ಮೃತಪಟ್ಟಿದೆ. ತಾಲೂಕಿನ ಕಿನ್ನರ ಮೂಲದ ರಾಜೇಶ್‌ ನಾಗೇಕರ್ ಎಂಬವರ ಮಗು ರಾಜನ್ ಮೃತಪಟ್ಟಿದೆ.

ರಾಜೇಶ್‌ ಅವರ ಮಗು ಕಫದಿಂದ ಬಳಲುತ್ತಿದ್ದ ಹಿನ್ನೆಲೆ ಮೂರು ದಿನಗಳ ಹಿಂದೆ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣಕ್ಕೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಮೂರು ದಿನದಿಂದ ಪಿಡಿಯಾಟ್ರಿಕ್ ಐಸಿಯೂನಲ್ಲಿ ವೆಂಟಿಲೇಟರ್ ಅಳವಡಿಸಿ ಮಗುವಿಗೆ ಚಿಕಿತ್ಸೆ ಕೊಡಲಾಗುತಿತ್ತು.‌
ಆದರೆ ಮಗುವಿಗೆ ಕಫ ಕಡಿಮೆಯಾಗದೆ ತೀವ್ರ ಅಸ್ವಸ್ಥಗೊಂಡಿದ್ದ ಕಾರಣಕ್ಕೆ ಮಗುವಿನ ಪಾಲಕರು ಚಿಕಿತ್ಸೆ ಸಾಧ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಗೆ ಕೊಂಡೊಯ್ಯುವುದಾಗಿ ತಿಳಿಸಿದ್ದರು. ಇದಕ್ಕೆ ಆಸ್ಪತ್ರೆಯವರು ಅನುಮತಿ ನೀಡಿದ್ದರಾದರೂ‌ ಪಿಡಿಯಾಟ್ರಿಕ್ ವೆಂಟಿಲೇಟರ್ ಆಂಬ್ಯುಲೆನ್ಸ್ ಇಲ್ಲದ ಕಾರಣ ಉಡುಪಿಯ ಆಂಬುಲೆನ್ಸ್ ತರಿಸಲಾಗಿತ್ತು. ಆದರೆ ಆಂಬ್ಯುಲೆನ್ಸ್ ಬರುವ ವೇಳೆಗಾಗಲೇ ಮಗು ಕೊನೆಯುಸಿರೆಳೆದಿದೆ. ರಾಜೇಶ್‌ ದಂಪತಿಗೆ ಮದುವೆಯಾಗಿ 5 ವರ್ಷದ ಬಳಿಕ ಈ ಗಂಡು ಮಗು ಹುಟ್ಟಿತ್ತು. ಆದರೆ ಇದೀಗ ಮಗು ಕಳೆದುಕೊಂಡು ದಂಪತಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತ ಆಸ್ಪತ್ರೆ ವ್ಯವಸ್ಥೆ‌ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳೀಯರ ಜತೆಗೂಡಿ ಪೋಷಕರು ಆಸ್ಪತ್ರೆ ಎದುರು ಮೃತ ಹಸುಗೂಸು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಕಾರವಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗುವಿಗೆ ಮೂರು ದಿನದಿಂದ ಪೀಡಿಯಾಟ್ರಿಕ್ಸ್ ಐಸಿಯುನಲ್ಲಿರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತು.‌ ಆದರೆ ತಂಪು ವಾತಾವರಣದಿಂದ ಮಗುವಿಗೆ ನ್ಯುಮೋನಿಯಾ ರೀತಿಯಲ್ಲಿ ಸಮಸ್ಯೆಯಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕೊಂಡೊಯ್ಯಬೇಕಾಗಿತ್ತು. ಆದರೆ ಜಿಲ್ಲಾಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ಸ್ ವೆಂಟಿಲೇಟರ್ ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಆಂಬ್ಯುಲೆನ್ಸ್ ಕರೆಸಿ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮೊದಲೇ ದುರದೃಷ್ಟವಶಾತ್ ಸಾವನ್ನಪ್ಪಿದೆ ಎಂದು ಜಿಲ್ಲಾಸ್ಪತ್ರೆಯ ಪೀಡಿಯಾಟ್ರಿಕ್ಸ್ ವಿಭಾಗದ ಹೆಚ್‌ಓಡಿ ಡಾ. ರಾಜಕುಮಾರ ಮರೋಳ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search