• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಮಯಕ್ಕೆ ಸಿಗದ ಆಂಬ್ಯುಲೆನ್ಸ್‌ ವೆಂಟಿಲೇಟರ್‌; ಉಸಿರು ನಿಲ್ಲಿಸಿದ 3 ತಿಂಗಳ ಮಗು

Tulunadu News Posted On July 21, 2023
0


0
Shares
  • Share On Facebook
  • Tweet It

ಸರಿಯಾದ‌ ಸಮಯಕ್ಕೆ ಸರ್ಕಾರಿ‌ ವೆಂಟಿಲೇಟರ್ ಆಂಬ್ಯುಲೆನ್ಸ್ ಸಿಗದ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ 3 ತಿಂಗಳ ಗಂಡು ಮಗು ಮೃತಪಟ್ಟಿದೆ. ತಾಲೂಕಿನ ಕಿನ್ನರ ಮೂಲದ ರಾಜೇಶ್‌ ನಾಗೇಕರ್ ಎಂಬವರ ಮಗು ರಾಜನ್ ಮೃತಪಟ್ಟಿದೆ.

ರಾಜೇಶ್‌ ಅವರ ಮಗು ಕಫದಿಂದ ಬಳಲುತ್ತಿದ್ದ ಹಿನ್ನೆಲೆ ಮೂರು ದಿನಗಳ ಹಿಂದೆ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣಕ್ಕೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಮೂರು ದಿನದಿಂದ ಪಿಡಿಯಾಟ್ರಿಕ್ ಐಸಿಯೂನಲ್ಲಿ ವೆಂಟಿಲೇಟರ್ ಅಳವಡಿಸಿ ಮಗುವಿಗೆ ಚಿಕಿತ್ಸೆ ಕೊಡಲಾಗುತಿತ್ತು.‌
ಆದರೆ ಮಗುವಿಗೆ ಕಫ ಕಡಿಮೆಯಾಗದೆ ತೀವ್ರ ಅಸ್ವಸ್ಥಗೊಂಡಿದ್ದ ಕಾರಣಕ್ಕೆ ಮಗುವಿನ ಪಾಲಕರು ಚಿಕಿತ್ಸೆ ಸಾಧ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಗೆ ಕೊಂಡೊಯ್ಯುವುದಾಗಿ ತಿಳಿಸಿದ್ದರು. ಇದಕ್ಕೆ ಆಸ್ಪತ್ರೆಯವರು ಅನುಮತಿ ನೀಡಿದ್ದರಾದರೂ‌ ಪಿಡಿಯಾಟ್ರಿಕ್ ವೆಂಟಿಲೇಟರ್ ಆಂಬ್ಯುಲೆನ್ಸ್ ಇಲ್ಲದ ಕಾರಣ ಉಡುಪಿಯ ಆಂಬುಲೆನ್ಸ್ ತರಿಸಲಾಗಿತ್ತು. ಆದರೆ ಆಂಬ್ಯುಲೆನ್ಸ್ ಬರುವ ವೇಳೆಗಾಗಲೇ ಮಗು ಕೊನೆಯುಸಿರೆಳೆದಿದೆ. ರಾಜೇಶ್‌ ದಂಪತಿಗೆ ಮದುವೆಯಾಗಿ 5 ವರ್ಷದ ಬಳಿಕ ಈ ಗಂಡು ಮಗು ಹುಟ್ಟಿತ್ತು. ಆದರೆ ಇದೀಗ ಮಗು ಕಳೆದುಕೊಂಡು ದಂಪತಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತ ಆಸ್ಪತ್ರೆ ವ್ಯವಸ್ಥೆ‌ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳೀಯರ ಜತೆಗೂಡಿ ಪೋಷಕರು ಆಸ್ಪತ್ರೆ ಎದುರು ಮೃತ ಹಸುಗೂಸು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಕಾರವಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗುವಿಗೆ ಮೂರು ದಿನದಿಂದ ಪೀಡಿಯಾಟ್ರಿಕ್ಸ್ ಐಸಿಯುನಲ್ಲಿರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತು.‌ ಆದರೆ ತಂಪು ವಾತಾವರಣದಿಂದ ಮಗುವಿಗೆ ನ್ಯುಮೋನಿಯಾ ರೀತಿಯಲ್ಲಿ ಸಮಸ್ಯೆಯಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕೊಂಡೊಯ್ಯಬೇಕಾಗಿತ್ತು. ಆದರೆ ಜಿಲ್ಲಾಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ಸ್ ವೆಂಟಿಲೇಟರ್ ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಆಂಬ್ಯುಲೆನ್ಸ್ ಕರೆಸಿ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮೊದಲೇ ದುರದೃಷ್ಟವಶಾತ್ ಸಾವನ್ನಪ್ಪಿದೆ ಎಂದು ಜಿಲ್ಲಾಸ್ಪತ್ರೆಯ ಪೀಡಿಯಾಟ್ರಿಕ್ಸ್ ವಿಭಾಗದ ಹೆಚ್‌ಓಡಿ ಡಾ. ರಾಜಕುಮಾರ ಮರೋಳ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search