• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜವಾದಿ ಪಾರ್ಟಿ “ಇಂಡಿಯಾ” ಭಾಗ!

Tulunadu News Posted On July 21, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಾನು ವಂದೇ ಮಾತರಂ ಗೀತೆಯನ್ನು ಹಾಡುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ತನ್ನ ಧರ್ಮದಲ್ಲಿ ಅಲ್ಲಾನನ್ನು ಬಿಟ್ಟು ಬೇರೆಯವರಿಗೆ ಶಿರಬಾಗಬಾರದು ಎಂದು ಹೇಳಲಾಗಿದೆ. ಆದ್ದರಿಂದ ವಂದೇ ಮಾತರಂ ಹೇಳುವುದು ತನಗೆ ನಿಷಿದ್ಧ ಎಂದು ತಿಳಿಸಿದ್ದಾರೆ. ಹೀಗೆ ಹೇಳುವ ಮೂಲಕ ಅಬು ಅಜ್ಮಿ ತನಗೆ ದೇಶಕ್ಕಿಂತ ಧರ್ಮ ದೊಡ್ಡದು ಎಂದು ಸಾರಿದ್ದಾನೆ. ಇಂತಹ ಮನುಷ್ಯನನ್ನು ಶಾಸಕನನ್ನಾಗಿ ಹೊಂದಿರುವುದು ಸಮಾಜವಾದಿ ಪಾರ್ಟಿ ಮತ್ತು ಈ ಪಕ್ಷ ಐ.ಎನ್.ಡಿ.ಐ.ಎ (ಇಂಡಿಯಾ) ಇದರ ಭಾಗ.
ಹಾಗಾದರೆ ಇಂಡಿಯಾ ಎನ್ನುವ ವಿಪಕ್ಷಗಳ ಒಕ್ಕೂಟ ತಮಗೆ ದೇಶಕ್ಕಿಂತ ಧರ್ಮ ಮೇಲು ಎನ್ನುವುದನ್ನು ಒಪ್ಪಿಕೊಂಡಿದೆಯಾ? ಇಂತಹ ಮನಸ್ಥಿತಿ ಇರುವವರು ಅಧಿಕಾರಕ್ಕೆ ಬಂದರೆ ಏನಾಗಬಹುದು. ಭಾರತ ಎನ್ನುವ ಸನಾತನ ಪರಂಪರೆಯಲ್ಲಿ ಜನ್ಮ ನೀಡಿದ ಭೂಮಿಗೆ ಹಾಗೂ ಜನ್ಮ ನೀಡಿದ ತಾಯಿಗೆ ಮೊದಲಿಗೆ ಅಡ್ಡಬೀಳಬೇಕು ಎಂದು ಹೇಳಲಾಗಿದೆ. ಆದರೆ ತಾನು ಹುಟ್ಟಿದ ದೇಶಕ್ಕಿಂತ ತನಗೆ ಧರ್ಮ ದೊಡ್ಡದು ಎಂದಿರುವ ಮನುಷ್ಯರು ದೇಶಕ್ಕಾಗಿ ಏನಾದರೂ ಮಾಡುವುದಕ್ಕಿಂತ ಹೆಚ್ಚಾಗಿ ಧರ್ಮವನ್ನು ಎತ್ತಲು ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ಸಾಬೀತಾಗುತ್ತದೆ. ಅವರಿಗೆ ತಮ್ಮ ಧರ್ಮ ಬೆಳೆಯುವುದೇ ಮುಖ್ಯವಾಗಿರುತ್ತದೆ. ಅವರು ಬೇರೆ ಧರ್ಮದವರನ್ನು ಎಷ್ಟು ಗೌರವದಿಂದ ಕಾಣುತ್ತಾರೆ ಎನ್ನುವುದನ್ನು ಅಬು ಅಜ್ಮಿಯಂತವರನ್ನು ನೋಡಿಯೇ ತಿಳಿಯಬಹುದು.
ಅಷ್ಟಕ್ಕೂ ಅಬು ಅಜ್ಮಿ 1993 ರ ಮುಂಬೈ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. ಅಂತವನು ಆಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಶರದ್ ಪವಾರ್ ಕೃಪೆಯಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ. ಸರಣಿ ಬಾಂಬ್ ಸ್ಫೋಟದ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತುಕೊಂಡಿರುವ ಶರದ್ ಪವಾರ್ ಅವರು ಕೂಡ ಈ ಇಂಡಿಯಾ ಮೈತ್ರಿಕೂಟದ ಭಾಗ. ಇಂತವರೇ ಇರುವ ಮೈತ್ರಿಕೂಟ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search