• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜವಾದಿ ಪಾರ್ಟಿ “ಇಂಡಿಯಾ” ಭಾಗ!

Tulunadu News Posted On July 21, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಾನು ವಂದೇ ಮಾತರಂ ಗೀತೆಯನ್ನು ಹಾಡುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ತನ್ನ ಧರ್ಮದಲ್ಲಿ ಅಲ್ಲಾನನ್ನು ಬಿಟ್ಟು ಬೇರೆಯವರಿಗೆ ಶಿರಬಾಗಬಾರದು ಎಂದು ಹೇಳಲಾಗಿದೆ. ಆದ್ದರಿಂದ ವಂದೇ ಮಾತರಂ ಹೇಳುವುದು ತನಗೆ ನಿಷಿದ್ಧ ಎಂದು ತಿಳಿಸಿದ್ದಾರೆ. ಹೀಗೆ ಹೇಳುವ ಮೂಲಕ ಅಬು ಅಜ್ಮಿ ತನಗೆ ದೇಶಕ್ಕಿಂತ ಧರ್ಮ ದೊಡ್ಡದು ಎಂದು ಸಾರಿದ್ದಾನೆ. ಇಂತಹ ಮನುಷ್ಯನನ್ನು ಶಾಸಕನನ್ನಾಗಿ ಹೊಂದಿರುವುದು ಸಮಾಜವಾದಿ ಪಾರ್ಟಿ ಮತ್ತು ಈ ಪಕ್ಷ ಐ.ಎನ್.ಡಿ.ಐ.ಎ (ಇಂಡಿಯಾ) ಇದರ ಭಾಗ.
ಹಾಗಾದರೆ ಇಂಡಿಯಾ ಎನ್ನುವ ವಿಪಕ್ಷಗಳ ಒಕ್ಕೂಟ ತಮಗೆ ದೇಶಕ್ಕಿಂತ ಧರ್ಮ ಮೇಲು ಎನ್ನುವುದನ್ನು ಒಪ್ಪಿಕೊಂಡಿದೆಯಾ? ಇಂತಹ ಮನಸ್ಥಿತಿ ಇರುವವರು ಅಧಿಕಾರಕ್ಕೆ ಬಂದರೆ ಏನಾಗಬಹುದು. ಭಾರತ ಎನ್ನುವ ಸನಾತನ ಪರಂಪರೆಯಲ್ಲಿ ಜನ್ಮ ನೀಡಿದ ಭೂಮಿಗೆ ಹಾಗೂ ಜನ್ಮ ನೀಡಿದ ತಾಯಿಗೆ ಮೊದಲಿಗೆ ಅಡ್ಡಬೀಳಬೇಕು ಎಂದು ಹೇಳಲಾಗಿದೆ. ಆದರೆ ತಾನು ಹುಟ್ಟಿದ ದೇಶಕ್ಕಿಂತ ತನಗೆ ಧರ್ಮ ದೊಡ್ಡದು ಎಂದಿರುವ ಮನುಷ್ಯರು ದೇಶಕ್ಕಾಗಿ ಏನಾದರೂ ಮಾಡುವುದಕ್ಕಿಂತ ಹೆಚ್ಚಾಗಿ ಧರ್ಮವನ್ನು ಎತ್ತಲು ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ಸಾಬೀತಾಗುತ್ತದೆ. ಅವರಿಗೆ ತಮ್ಮ ಧರ್ಮ ಬೆಳೆಯುವುದೇ ಮುಖ್ಯವಾಗಿರುತ್ತದೆ. ಅವರು ಬೇರೆ ಧರ್ಮದವರನ್ನು ಎಷ್ಟು ಗೌರವದಿಂದ ಕಾಣುತ್ತಾರೆ ಎನ್ನುವುದನ್ನು ಅಬು ಅಜ್ಮಿಯಂತವರನ್ನು ನೋಡಿಯೇ ತಿಳಿಯಬಹುದು.
ಅಷ್ಟಕ್ಕೂ ಅಬು ಅಜ್ಮಿ 1993 ರ ಮುಂಬೈ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. ಅಂತವನು ಆಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಶರದ್ ಪವಾರ್ ಕೃಪೆಯಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ. ಸರಣಿ ಬಾಂಬ್ ಸ್ಫೋಟದ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತುಕೊಂಡಿರುವ ಶರದ್ ಪವಾರ್ ಅವರು ಕೂಡ ಈ ಇಂಡಿಯಾ ಮೈತ್ರಿಕೂಟದ ಭಾಗ. ಇಂತವರೇ ಇರುವ ಮೈತ್ರಿಕೂಟ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search