• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜವಾದಿ ಪಾರ್ಟಿ “ಇಂಡಿಯಾ” ಭಾಗ!

Tulunadu News Posted On July 21, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಾನು ವಂದೇ ಮಾತರಂ ಗೀತೆಯನ್ನು ಹಾಡುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ತನ್ನ ಧರ್ಮದಲ್ಲಿ ಅಲ್ಲಾನನ್ನು ಬಿಟ್ಟು ಬೇರೆಯವರಿಗೆ ಶಿರಬಾಗಬಾರದು ಎಂದು ಹೇಳಲಾಗಿದೆ. ಆದ್ದರಿಂದ ವಂದೇ ಮಾತರಂ ಹೇಳುವುದು ತನಗೆ ನಿಷಿದ್ಧ ಎಂದು ತಿಳಿಸಿದ್ದಾರೆ. ಹೀಗೆ ಹೇಳುವ ಮೂಲಕ ಅಬು ಅಜ್ಮಿ ತನಗೆ ದೇಶಕ್ಕಿಂತ ಧರ್ಮ ದೊಡ್ಡದು ಎಂದು ಸಾರಿದ್ದಾನೆ. ಇಂತಹ ಮನುಷ್ಯನನ್ನು ಶಾಸಕನನ್ನಾಗಿ ಹೊಂದಿರುವುದು ಸಮಾಜವಾದಿ ಪಾರ್ಟಿ ಮತ್ತು ಈ ಪಕ್ಷ ಐ.ಎನ್.ಡಿ.ಐ.ಎ (ಇಂಡಿಯಾ) ಇದರ ಭಾಗ.
ಹಾಗಾದರೆ ಇಂಡಿಯಾ ಎನ್ನುವ ವಿಪಕ್ಷಗಳ ಒಕ್ಕೂಟ ತಮಗೆ ದೇಶಕ್ಕಿಂತ ಧರ್ಮ ಮೇಲು ಎನ್ನುವುದನ್ನು ಒಪ್ಪಿಕೊಂಡಿದೆಯಾ? ಇಂತಹ ಮನಸ್ಥಿತಿ ಇರುವವರು ಅಧಿಕಾರಕ್ಕೆ ಬಂದರೆ ಏನಾಗಬಹುದು. ಭಾರತ ಎನ್ನುವ ಸನಾತನ ಪರಂಪರೆಯಲ್ಲಿ ಜನ್ಮ ನೀಡಿದ ಭೂಮಿಗೆ ಹಾಗೂ ಜನ್ಮ ನೀಡಿದ ತಾಯಿಗೆ ಮೊದಲಿಗೆ ಅಡ್ಡಬೀಳಬೇಕು ಎಂದು ಹೇಳಲಾಗಿದೆ. ಆದರೆ ತಾನು ಹುಟ್ಟಿದ ದೇಶಕ್ಕಿಂತ ತನಗೆ ಧರ್ಮ ದೊಡ್ಡದು ಎಂದಿರುವ ಮನುಷ್ಯರು ದೇಶಕ್ಕಾಗಿ ಏನಾದರೂ ಮಾಡುವುದಕ್ಕಿಂತ ಹೆಚ್ಚಾಗಿ ಧರ್ಮವನ್ನು ಎತ್ತಲು ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ಸಾಬೀತಾಗುತ್ತದೆ. ಅವರಿಗೆ ತಮ್ಮ ಧರ್ಮ ಬೆಳೆಯುವುದೇ ಮುಖ್ಯವಾಗಿರುತ್ತದೆ. ಅವರು ಬೇರೆ ಧರ್ಮದವರನ್ನು ಎಷ್ಟು ಗೌರವದಿಂದ ಕಾಣುತ್ತಾರೆ ಎನ್ನುವುದನ್ನು ಅಬು ಅಜ್ಮಿಯಂತವರನ್ನು ನೋಡಿಯೇ ತಿಳಿಯಬಹುದು.
ಅಷ್ಟಕ್ಕೂ ಅಬು ಅಜ್ಮಿ 1993 ರ ಮುಂಬೈ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. ಅಂತವನು ಆಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಶರದ್ ಪವಾರ್ ಕೃಪೆಯಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ. ಸರಣಿ ಬಾಂಬ್ ಸ್ಫೋಟದ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತುಕೊಂಡಿರುವ ಶರದ್ ಪವಾರ್ ಅವರು ಕೂಡ ಈ ಇಂಡಿಯಾ ಮೈತ್ರಿಕೂಟದ ಭಾಗ. ಇಂತವರೇ ಇರುವ ಮೈತ್ರಿಕೂಟ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search