• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search