• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search