• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search